Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:4 - ಪರಿಶುದ್ದ ಬೈಬಲ್‌

4 ಯೆಹೋಶುವನು ಅವರಿಗೆ, “ಗಮನಕೊಟ್ಟು ಕೇಳಿರಿ. ನೀವು ನಗರದ ಹಿಂಭಾಗದ ಸ್ಥಳದಲ್ಲಿ ಅಡಗಿಕೊಂಡಿದ್ದು ಆಕ್ರಮಣಮಾಡಲು ಸಿದ್ಧರಾಗಿರಿ. ನಗರದಿಂದ ಬಹಳ ದೂರ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರಿಗೆ, “ನೀವು ನಗರದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ನಗರದಿಂದ ಬಹುದೂರವಾಗಿರಬೇಡಿ. ಎಲ್ಲರೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ - ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿಕೊಂಡಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರಿಗೆ ಆಜ್ಞಾಪಿಸಿ, “ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರಿ, ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ. ನೀವೆಲ್ಲರೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:4
14 ತಿಳಿವುಗಳ ಹೋಲಿಕೆ  

ಆಗ ಇಸ್ರೇಲಿನ ಸೈನಿಕರು ಕೆಲವರನ್ನು ಗಿಬೆಯದ ಸುತ್ತಲೂ ಅಡಗಿಸಿಟ್ಟರು.


ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.


ನಾನು ಹೇಳುವುದೇನೆಂದರೆ, ಜ್ಞಾನವು ಶಕ್ತಿಗಿಂತಲೂ ಉತ್ತಮ. ಅವರು ಆ ಬಡವನ ಜ್ಞಾನವನ್ನು ಮರೆತುಬಿಟ್ಟರೂ ಅವನ ಮಾತುಗಳನ್ನು ಕೇಳದಿದ್ದರೂ ಜ್ಞಾನವು ಉತ್ತಮವಾದದ್ದೇ.


ಒಳ್ಳೆಯದನ್ನೇ ಮಾಡುವ ಮತ್ತು ಪಾಪವನ್ನೇ ಮಾಡದ ನೀತಿವಂತನು ಭೂಮಿಯ ಮೇಲೆ ಇಲ್ಲವೇ ಇಲ್ಲ. ಜ್ಞಾನವು ಒಬ್ಬನಿಗೆ ಶಕ್ತಿಯನ್ನು ಕೊಡುತ್ತದೆ. ಒಬ್ಬ ಜ್ಞಾನಿಯು ನಗರದಲ್ಲಿರುವ ಹತ್ತುಮಂದಿ ಮೂಢ ನಾಯಕರುಗಳಿಗಿಂತಲೂ ಬಲಶಾಲಿ.


ಸೌಲನು ಅಮಾಲೇಕ್ಯರ ನಗರಕ್ಕೆ ಹೋಗಿ ಅಲ್ಲಿನ ಕಣಿವೆಯಲ್ಲಿ ಹೊಂಚುಹಾಕುತ್ತಿದ್ದನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಅಮಾಲೇಕ್ಯರು ಅವರನ್ನು ಕಾನಾನಿಗೆ ಹೋಗದಂತೆ ತಡೆಯಲು ಪ್ರಯತ್ನಿಸಿದರು. ಅಮಾಲೇಕ್ಯರು ಮಾಡಿದ್ದನ್ನು ನಾನು ನೋಡಿದೆ.


ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. ಇಸ್ರೇಲರ ಸೈನಿಕರು ಹಿಮ್ಮೆಟ್ಟಿದ್ದರು. ಗಿಬೆಯದ ಹತ್ತಿರ ಅಡಗಿಕೊಂಡಿದ್ದ ತಮ್ಮ ಜನರು ಹಠಾತ್ ಧಾಳಿಮಾಡುವರೆಂದು ನಂಬಿ ಅವರು ಹಿಮ್ಮೆಟ್ಟಿದ್ದರು.


ಆದ್ದರಿಂದ ಎಲ್ಲರೂ ಓಡಿಹೋದರು. ಅವರು ಬಾಳ್‌ತಾಮರ್ ಎಂಬ ಸ್ಥಳದಲ್ಲಿ ನಿಂತರು. ಇಸ್ರೇಲಿನ ಕೆಲವು ಜನರು ಗಿಬೆಯದ ಪಶ್ಚಿಮದಲ್ಲಿ ಅಡಗಿಕೊಂಡಿದ್ದರು. ಅವರು ತಾವು ಅಡಗಿದ್ದ ಸ್ಥಳಗಳಿಂದ ಓಡಿಹೋಗಿ ಗಿಬೆಯದ ಮೇಲೆ ಧಾಳಿಮಾಡಿದರು.


ಶೆಕೆಮಿನ ಹಿರಿಯರಿಗೆ ಅಬೀಮೆಲೆಕನ ಮೇಲಿದ್ದ ಅಭಿಮಾನ ಇಲ್ಲವಾಯಿತು. ಅವರು ಅಲ್ಲಿ ಸಂಚರಿಸುವ ಜನರ ಮೇಲೆ ಧಾಳಿ ಮಾಡಿ ಲೂಟಿಮಾಡಲು ಬೆಟ್ಟಗಳ ಮೇಲೆ ಜನರನ್ನು ಇಟ್ಟರು. ಅಬೀಮೆಲೆಕನಿಗೆ ಈ ಧಾಳಿಗಳ ವಿಷಯ ತಿಳಿದುಬಂತು.


ಯೆಹೋಶುವನನ್ನು ಮತ್ತು ಅವನ ಜನರನ್ನು ಬೆನ್ನಟ್ಟಲು “ಆಯಿ” ಪಟ್ಟಣದಲ್ಲಿದ್ದ ಗಂಡಸರನ್ನೆಲ್ಲ ಕರೆಸಲಾಯಿತು. ಎಲ್ಲ ಜನರು ಪಟ್ಟಣವನ್ನು ಬಿಟ್ಟರು.


ಯೆಹೋಶುವನು “ಆಯಿ”ಯ ಮೇಲೆ ಆಕ್ರಮಣಮಾಡಲು ಸೈನ್ಯಸಮೇತವಾಗಿ ಹೋದನು. ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿಕೊಂಡನು.


ಆಗ ರಾತ್ರಿಯಾಗಿದ್ದರೂ ರಾಜನು ತನ್ನ ಹಾಸಿಗೆಯಿಂದ ಮೇಲಕ್ಕೆದ್ದನು. ರಾಜನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ಸೈನಿಕರು ಮಾಡಬೇಕೆಂದಿರುವುದನ್ನು ನಾನು ನಿಮಗೆ ಹೇಳುತ್ತೇನೆ. ನಾವು ಬಹಳ ಹಸಿದಿದ್ದೇವೆಂಬುದು ಅವರಿಗೆ ತಿಳಿದಿದೆ. ಅವರು ಹೊಲಗಳಲ್ಲಿ ಅಡಗಿಕೊಳ್ಳಲು ಪಾಳೆಯನ್ನು ಬಿಟ್ಟುಹೋಗಿದ್ದಾರೆ. ‘ಇಸ್ರೇಲರು ನಗರದಿಂದ ಹೊರಗೆ ಬಂದಾಗ, ನಾವು ಅವರನ್ನು ಜೀವಂತವಾಗಿ ಸೆರೆಹಿಡಿದು ಅವರ ನಗರವನ್ನು ಪ್ರವೇಶಿಸಬಹುದು’ ಎಂದು ಅರಾಮ್ಯರು ಆಲೋಚಿಸಿದ್ದಾರೆ” ಎಂದು ಹೇಳಿದನು.


ಆದರೆ ಯಾರೊಬ್ಬಾಮನು ತನ್ನ ಸೈನ್ಯದ ಒಂದು ಭಾಗವನ್ನು ಅಬೀಯನ ಸೈನ್ಯದ ಹಿಂಭಾಗಕ್ಕೆ ಅವನಿಗೆ ಗೊತ್ತಿಲ್ಲದಂತೆ ಕಳುಹಿಸಿದನು. ಯಾರೊಬ್ಬಾಮನ ಸೈನ್ಯವು ಅಬೀಯನ ಸೈನ್ಯಕ್ಕೆ ಎದುರಾಗಿತ್ತು. ಅಬೀಯನ ಹಿಂದೆ ಯಾರೊಬ್ಬಾಮನ ಸೈನ್ಯವು ಅಡಗಿಕೊಂಡಿತ್ತು.


ಅದಕ್ಕಾಗಿ ನೀನು ಮತ್ತು ನಿನ್ನ ಜನರು ಈ ರಾತ್ರಿ ಬಂದು ನಗರದ ಹೊರಗಡೆ ಹೊಲಗಳಲ್ಲಿ ಅಡಗಿಕೊಂಡಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು