Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:24 - ಪರಿಶುದ್ದ ಬೈಬಲ್‌

24 ಗಿಬ್ಯೋನ್ಯರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಈ ಎಲ್ಲ ಭೂಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಈ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವನೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಯೆಹೋಶುವನಿಗೆ - ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ - ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿಬಿಡಬೇಕೆಂದು ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದಕ್ಕವರು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವುದಕ್ಕೂ, ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡುವುದಕ್ಕೂ ತಮ್ಮ ಸೇವಕ ಮೋಶೆಗೆ ಆಜ್ಞಾಪಿಸಿದ್ದಾರೆಂದು, ನಿಮ್ಮ ಸೇವಕರಾದ ನಾವು ಕೇಳಿದೆವು. ಆದ್ದರಿಂದ ನಾವು ನಮ್ಮ ಪ್ರಾಣಕ್ಕಾಗಿ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:24
14 ತಿಳಿವುಗಳ ಹೋಲಿಕೆ  

“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.


ಅದಕ್ಕೆ ಅವರು, “ನಿನ್ನ ಸೇವಕರಾದ ನಾವು ಬಹುದೂರ ದೇಶದಿಂದ ಬಂದಿದ್ದೇವೆ. ನಾವು ಬಂದದ್ದಕ್ಕೆ ಕಾರಣವೇನೆಂದರೆ ನಾವು ನಿಮ್ಮ ದೇವರಾದ ಯೆಹೋವನ ಅದ್ಭುತಶಕ್ತಿಯ ಬಗ್ಗೆ ಕೇಳಿದೆವು. ಆತನು ಮಾಡಿದ ಅದ್ಭುತಕಾರ್ಯಗಳ ಬಗ್ಗೆ ಕೇಳಿದೆವು. ಆತನು ಈಜಿಪ್ಟಿನಲ್ಲಿ ಮಾಡಿದ ಪ್ರತಿಯೊಂದು ಅದ್ಭುತದ ಬಗ್ಗೆ ಕೇಳಿದೆವು.


“ಯೆಹೋವನು ಈ ದೇಶವನ್ನು ನಿಮ್ಮ ಜನರಿಗೆ ಕೊಟ್ಟಿದ್ದಾನೆಂದು ನಾನು ಬಲ್ಲೆ. ನಿಮ್ಮ ವಿಷಯ ಕೇಳಿ ನಮಗೆ ಭಯ ಉಂಟಾಗಿದೆ. ಈ ದೇಶದಲ್ಲಿರುವ ಎಲ್ಲಾ ಜನರು ನಿಮ್ಮಿಂದ ಭಯಭೀತರಾಗಿದ್ದಾರೆ.


ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.


ಅವರು ನಗರದಲ್ಲಿದ್ದ ಎಲ್ಲವನ್ನು ನಾಶಪಡಿಸಿದರು; ಅಲ್ಲಿದ್ದ ತರುಣರನ್ನು, ವೃದ್ಧರನ್ನು, ತರುಣಿಯರನ್ನು, ವೃದ್ಧೆಯರನ್ನು, ದನಕರುಗಳನ್ನು, ಕುರಿಗಳನ್ನು ಮತ್ತು ಕತ್ತೆಗಳನ್ನು ಕೊಂದುಹಾಕಿದರು.


ಆದ್ದರಿಂದ ಅದೋನೀಚೆದೆಕನು ಮತ್ತು ಅವನ ಜನರು ಬಹಳ ಹೆದರಿಕೊಂಡರು. ಗಿಬ್ಯೋನ್ “ಆಯಿ”ಯಂತೆ ಸಣ್ಣ ಊರಾಗಿರಲಿಲ್ಲ. ಗಿಬ್ಯೋನ್ ಬಹಳ ದೊಡ್ಡ ನಗರವಾಗಿತ್ತು. ಅದು ರಾಜಧಾನಿಯಷ್ಟು ದೊಡ್ಡ ಪಟ್ಟಣವಾಗಿತ್ತು. ಆ ಪಟ್ಟಣದ ಜನರೆಲ್ಲರೂ ಒಳ್ಳೆಯ ಯೋಧರಾಗಿದ್ದರು. ಆದ್ದರಿಂದ ಆ ಅರಸನು ಭಯಗೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು