Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:10 - ಪರಿಶುದ್ದ ಬೈಬಲ್‌

10 ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕೃತ್ಯ ಮಾಡಿರುವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. “ಎಂಥಾ ತಪ್ಪುಮಾಡಿದೆ!” ಎಂದು ಅವನನ್ನು ಖಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇವನು ಯೆಹೋವನ ಸನ್ನಿಧಿಯಿಂದ ಓಡಿಬಂದವನು ಎಂಬದನ್ನು ಅವನು ಮೊದಲು ಹೇಳಿದ ಒಂದು ಮಾತಿನಿಂದ ಆ ಜನರು ತಿಳುಕೊಂಡಿದ್ದರು. ಈಗ ಇದನ್ನೂ ಕೇಳಿ ಬಹಳವಾಗಿ ಹೆದರಿ - ಇದೇನು ನೀನು ಮಾಡಿದ್ದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆ ಮನುಷ್ಯರು ಬಹಳ ಭಯಪಟ್ಟು, “ನೀನು ಏನು ಮಾಡಿದ್ದೀ?” ಎಂದು ಅವನನ್ನು ಕೇಳಿದರು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಅವನು ಓಡಿ ಹೋಗುತ್ತಿದ್ದಾನೆಂದು ಆ ಮನುಷ್ಯರಿಗೆ ತಿಳಿದಿತ್ತು. ಏಕೆಂದರೆ ಅವನೇ ಇದನ್ನು ಅವರಿಗೆ ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:10
8 ತಿಳಿವುಗಳ ಹೋಲಿಕೆ  

ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.


ದುಷ್ಟನು ಬಿರುಗಾಳಿಯ ಶಕ್ತಿಯಿಂದ ಓಡಿಹೋಗಲು ಪ್ರಯತ್ನಿಸುವನು. ಆದರೆ ಬಿರುಗಾಳಿಯು ಕರುಣೆಯಿಲ್ಲದೆ ಅವನಿಗೆ ಬಡಿಯುವುದು.


ಪಿಲಾತನು ಇದನ್ನು ಕೇಳಿ ಬಹು ಭಯಗೊಂಡು,


ಆದರೆ ಯೋವಾಬನು ರಾಜನಿಗೆ, “ಅಲ್ಲಿ ಎಷ್ಟು ಜನರಿದ್ದಾರೆಂಬುದು ಅಗತ್ಯವಿಲ್ಲ. ನಿನ್ನ ದೇವರಾದ ಯೆಹೋವನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚು ಜನರನ್ನು ದಯಪಾಲಿಸಲಿ! ಈ ಕಾರ್ಯವು ಸಂಭವಿಸುವುದನ್ನು ನಿನ್ನ ಕಣ್ಣುಗಳಿಂದಲೇ ನೋಡು. ಆದರೆ ನೀನು ಈ ಕಾರ್ಯವನ್ನು ಮಾಡಬೇಕೆಂದಿರುವುದೇಕೆ?” ಎಂದು ಕೇಳಿದನು.


ಆಗ ಯೆಹೋಶುವನು ಅವನಿಗೆ, “ನೀನು ನಮಗೆ ಕೇಡನ್ನು ಬರಮಾಡಿರುವೆ! ಆದ್ದರಿಂದ ಯೆಹೋವನು ನಿನಗೂ ಕೇಡನ್ನು ಮಾಡಲಿ!” ಎಂದನು. ಆಗ ಜನರೆಲ್ಲರೂ ಕಲ್ಲುಗಳನ್ನು ತೂರಿ ಆಕಾನನನ್ನೂ ಅವನ ಕುಟುಂಬದವರನ್ನೂ ಕೊಂದರು ಮತ್ತು ಅವನ ಎಲ್ಲ ಸ್ವತ್ತನ್ನು ಸುಟ್ಟುಹಾಕಿದರು.


ಬಿರುಗಾಳಿಯೂ ಸಮುದ್ರದ ತೆರೆಗಳೂ ಇನ್ನೂ ಬಲವಾಗಿ ಬೀಸತೊಡಗಿದವು. ಆಗ ಅವರು ಯೋನನಿಗೆ, “ನಮ್ಮನ್ನು ರಕ್ಷಿಸಿಕೊಳ್ಳಲು ನಾವು ಏನು ಮಾಡಬೇಕು? ಸಮುದ್ರವು ಶಾಂತವಾಗಬೇಕಾದರೆ ನಾವೀಗ ನಿನಗೆ ಏನು ಮಾಡಬೇಕು?” ಎಂದು ಕೇಳಿದಾಗ


ಆಗ ದೇವರಾದ ಯೆಹೋವನು ಸ್ತ್ರೀಗೆ, “ನೀನು ಮಾಡಿದ್ದೇನು?” ಎಂದು ಕೇಳಿದನು. ಅದಕ್ಕೆ ಸ್ತ್ರೀಯು, “ಆ ಹಾವಿನ ಮೋಸಕ್ಕೆ ಒಳಗಾಗಿ ನಾನು ಆ ಹಣ್ಣನ್ನು ತಿಂದೆ” ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು