Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:12 - ಪರಿಶುದ್ದ ಬೈಬಲ್‌

12 ಯೋನನು, “ಈ ಬಿರುಗಾಳಿಗೆ ನಾನೇ ಕಾರಣ. ಈಗ ನನ್ನನ್ನೆತ್ತಿ ಸಮುದ್ರದೊಳಗೆ ಬಿಸಾಡಿರಿ. ಆಗ ಸಮುದ್ರವು ಶಾಂತವಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೋನನು ಅವರಿಗೆ “ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ಆಗ ಸಮುದ್ರವು ಶಾಂತವಾಗುವುದು; ಈ ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೋನನು: “ನನ್ನನ್ನು ಎತ್ತಿ ಸಮುದ್ರಕ್ಕೆ ಎಸೆಯಿರಿ. ಆಗ ಅದು ಶಾಂತವಾಗುವುದು. ನೀವು ಇಂಥ ಭೀಕರ ಬಿರುಗಾಳಿಗೆ ತುತ್ತಾಗಲು ನಾನೇ ಕಾರಣ. ಇದನ್ನು ನಾನು ಚೆನ್ನಾಗಿ ಬಲ್ಲೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ನಿಮ್ಮ ಮೇಲೆ ಎದ್ದಿರುವ ಸಮುದ್ರವು ಶಾಂತವಾಗುವದು; ಈ ದೊಡ್ಡ ತುಫಾನು ನಿಮಗೆ ಸಂಭವಿಸಿದ್ದು ನನ್ನ ನಿವಿುತ್ತವೇ ಎಂಬದು ನನಗೆ ಗೊತ್ತು ಎಂದುತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ಅವರಿಗೆ, “ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ಶಾಂತವಾಗುವುದು. ಏಕೆಂದರೆ ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ, ನಿಮ್ಮ ಮೇಲೆ ಬಂತೆಂದು ಬಲ್ಲೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:12
10 ತಿಳಿವುಗಳ ಹೋಲಿಕೆ  

ಜನರನ್ನು ಕೊಂದ ದೂತನನ್ನು ದಾವೀದನು ನೋಡಿ ಯೆಹೋವನೊಂದಿಗೆ ಮಾತನಾಡಿದನು. ದಾವೀದನು ಯೆಹೋವನಿಗೆ, “ನಾನು ಪಾಪ ಮಾಡಿದೆನು. ನಾನು ತಪ್ಪು ಮಾಡಿದೆನು. ಆದರೆ ಈ ಜನರು ಕೇವಲ ಕುರಿಗಳಂತೆ ನಿರಪರಾಧಿಗಳು. ಅವರು ಯಾವ ತಪ್ಪನ್ನೂ ಮಾಡಲಿಲ್ಲ. ದಯಮಾಡಿ ನಿನ್ನ ದಂಡನೆಯು ನನಗೆ ಮತ್ತು ನನ್ನ ತಂದೆಯ ಕುಲದ ವಿರುದ್ಧವಾಗಿರಲಿ” ಎಂದು ಹೇಳಿದನು.


ದಾವೀದನು ದೇವರಿಗೆ, “ಪಾಪಮಾಡಿದವನು ನಾನು. ಜನಗಣತಿಯನ್ನು ಮಾಡಲು ಆಜ್ಞಾಪಿಸಿದವನು ನಾನೇ. ನಾನು ತಪ್ಪು ಮಾಡಿದೆ! ಆದರೆ ಇಸ್ರೇಲರು ಏನೂ ತಪ್ಪು ಮಾಡಲಿಲ್ಲ. ದೇವರಾದ ಯೆಹೋವನೇ, ನನ್ನನ್ನೂ ನನ್ನ ಪರಿವಾರದವರನ್ನೂ ಶಿಕ್ಷಿಸು. ನಿನ್ನ ಜನರನ್ನು ಸಾಯಿಸುವ ವ್ಯಾಧಿಯನ್ನು ನಿಲ್ಲಿಸು” ಎಂದು ಬೇಡಿಕೊಂಡನು.


ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಆ ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ.


ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.


ಇಡೀ ಜನಾಂಗವು ನಾಶವಾಗುವುದಕ್ಕಿಂತ ಒಬ್ಬನು ಅವರಿಗೋಸ್ಕರವಾಗಿ ಸಾಯುವುದು ಉತ್ತಮ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳುತ್ತಿಲ್ಲ” ಎಂದು ಹೇಳಿದನು.


ಜ್ಞಾನವು ಯುದ್ಧಾಯುಧಗಳಿಗಿಂತಲೂ ಉತ್ತಮ, ಆದರೆ ಮೂಢನು ಒಳ್ಳೆಯದನ್ನು ಹಾಳು ಮಾಡುವನು.


ಬಿರುಗಾಳಿಯೂ ಸಮುದ್ರದ ತೆರೆಗಳೂ ಇನ್ನೂ ಬಲವಾಗಿ ಬೀಸತೊಡಗಿದವು. ಆಗ ಅವರು ಯೋನನಿಗೆ, “ನಮ್ಮನ್ನು ರಕ್ಷಿಸಿಕೊಳ್ಳಲು ನಾವು ಏನು ಮಾಡಬೇಕು? ಸಮುದ್ರವು ಶಾಂತವಾಗಬೇಕಾದರೆ ನಾವೀಗ ನಿನಗೆ ಏನು ಮಾಡಬೇಕು?” ಎಂದು ಕೇಳಿದಾಗ


ಆದರೆ ಅವರಿಗೆ ಯೋನನನ್ನು ಸಮುದ್ರಕ್ಕೆ ಬಿಸಾಡಲು ಮನಸ್ಸಿಲ್ಲದೆ ಹೋಯಿತು. ಅವರು ಹಡಗನ್ನು ದಡಕ್ಕೆ ನಡೆಸಿಕೊಂಡು ಹೋಗಲು ಪ್ರಯತ್ನಪಟ್ಟರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಬಿರುಗಾಳಿಯೂ ಸಮುದ್ರದ ತೆರೆಗಳೂ ಹೆಚ್ಚೆಚ್ಚಾಗಿ ಬಲವಾಗುತ್ತಾ ಬಂದವು.


ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; ನಿನ್ನ ಒಳ್ಳೆಯ ಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು