Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:14 - ಪರಿಶುದ್ದ ಬೈಬಲ್‌

14 ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟಕಾರ್ಯ ಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುವೆ. ಆದ್ದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರಲು ಅವರು ಯೆಹೋವನಿಗೆ ಮೊರೆಯಿಟ್ಟು - ಯೆಹೋವನೇ, ಲಾಲಿಸು, ಲಾಲಿಸು; ಈ ಮನುಷ್ಯನ ಪ್ರಾಣನಷ್ಟಕ್ಕಾಗಿ ನಾಶನವು ನಮಗೆ ಬಾರದಿರಲಿ; ನಿರಪರಾಧಿಯನ್ನು ಕೊಲ್ಲುವ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವರು ಯೆಹೋವ ದೇವರಿಗೆ ಕೂಗಿ, “ಯೆಹೋವ ದೇವರೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ. ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡಿರಿ. ಯೆಹೋವ ದೇವರೇ, ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:14
15 ತಿಳಿವುಗಳ ಹೋಲಿಕೆ  

ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.


ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.


ಯೆಹೋವನೇ, ನೀನು ಇಸ್ರೇಲನ್ನು ರಕ್ಷಿಸಿರುವೆ, ನಾವು ನಿನ್ನ ಜನಗಳಾಗಿದ್ದೇವೆ. ಈಗ ನೀನು ನಮ್ಮನ್ನು ಶುದ್ಧೀಕರಿಸು; ನಿರ್ದೋಷಿಯ ಕೊಲೆಗೆ ನಮ್ಮನ್ನು ಕಾರಣರನ್ನಾಗಿ ಮಾಡಬೇಡ!’


ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.


ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.


ಹೌದು ತಂದೆಯೇ, ಇದು ನಿಜವಾಗಿಯೂ ನಿನ್ನ ಚಿತ್ತವಾಗಿದ್ದುದರಿಂದ ನೀನು ಹೀಗೆ ಮಾಡಿರುವೆ.


ಜನರು ಇದನ್ನು ನೋಡಿದಾಗ ಅವರು ಯೆಹೋವನಿಗೆ ಭಯಪಟ್ಟು ಗೌರವಿಸಿದರು. ಅವರು ಆತನಿಗೆ ಯಜ್ಞವನ್ನರ್ಪಿಸಿ ಹರಕೆ ಹಾಕಿಕೊಂಡರು.


ಹಡಗು ಮುಳುಗಿಹೋಗದಂತೆ ಅದನ್ನು ಹಗುರ ಮಾಡಲು ಜನರು ಅದರೊಳಗಿದ್ದ ವಸ್ತುಗಳನ್ನು ಸಮುದ್ರಕ್ಕೆ ಎಸೆದರು. ನಾವಿಕರು ತುಂಬಾ ಭಯಪಟ್ಟಿದ್ದರು. ಪ್ರತಿಯೊಬ್ಬರು ತಮ್ಮತಮ್ಮ ದೇವರುಗಳಿಗೆ ಪ್ರಾರ್ಥನೆ ಮಾಡಿದರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಅಲ್ಲಿ ಮಲಗಿ ನಿದ್ರೆ ಮಾಡತೊಡಗಿದನು.


ಇದು ದೇವರ ಚಿತ್ತವಾಗಿತ್ತು. ಕ್ರಿಸ್ತನ ಮೂಲಕ ಇದನ್ನು ನೆರವೇರಿಸಲು ಆತನು ಯೋಜನೆ ಮಾಡಿದನು.


ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.


ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.


“ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು. ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.”


ಆದರೆ ಅವರಿಗೆ ಯೋನನನ್ನು ಸಮುದ್ರಕ್ಕೆ ಬಿಸಾಡಲು ಮನಸ್ಸಿಲ್ಲದೆ ಹೋಯಿತು. ಅವರು ಹಡಗನ್ನು ದಡಕ್ಕೆ ನಡೆಸಿಕೊಂಡು ಹೋಗಲು ಪ್ರಯತ್ನಪಟ್ಟರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಬಿರುಗಾಳಿಯೂ ಸಮುದ್ರದ ತೆರೆಗಳೂ ಹೆಚ್ಚೆಚ್ಚಾಗಿ ಬಲವಾಗುತ್ತಾ ಬಂದವು.


ಪ್ರತಿ ಮನುಷ್ಯನೂ ಪ್ರಾಣಿಯೂ ಶೋಕವಸ್ತ್ರವನ್ನು ಧರಿಸಬೇಕು. ಜನರು ದೇವರಿಗೆ ಗಟ್ಟಿಯಾಗಿ ಮೊರೆಯಿಡಬೇಕು. ಪ್ರತಿಯೊಬ್ಬನು ತನ್ನ ದುಷ್ಟಜೀವಿತವನ್ನು ಬದಲಾಯಿಸಿ ದುಷ್ಟತನ ಮಾಡುವದನ್ನು ನಿಲ್ಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು