Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:7 - ಪರಿಶುದ್ದ ಬೈಬಲ್‌

7 ಆಗ ಪ್ರಯಾಣಿಕರು, “ಯಾರ ನಿಮಿತ್ತ ನಮಗೆ ಈ ಆಪತ್ತು ಬಂತೆಂದು ತಿಳಿದುಕೊಳ್ಳಲು ಚೀಟು ಹಾಕೋಣ” ಅಂದರು. ಅವರು ಚೀಟು ಹಾಕಿದಾಗ ಆ ಚೀಟು ಯೋನನಿಗೆ ಬಂದಿತು; ಅವನೇ ಅವರ ಸಂಕಟಗಳಿಗೆ ಕಾರಣನೆಂಬುದು ನಿಶ್ಚಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅನಂತರ ನಾವಿಕರೆಲ್ಲರು “ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ” ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ನಾವಿಕರು: “ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ” ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅನಂತರ ನಾವಿಕರೆಲ್ಲರು - ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣವೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ ಎಂಬದಾಗಿ ಮಾತಾಡಿಕೊಂಡು ಚೀಟುಹಾಕಲು ಚೀಟು ಯೋನನಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ನಾವಿಕರು ಒಬ್ಬರಿಗೊಬ್ಬರು, “ಬನ್ನಿ, ಚೀಟುಗಳನ್ನು ಹಾಕೋಣ. ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ,” ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟುಗಳನ್ನು ಹಾಕಿದಾಗ, ಯೋನನ ಮೇಲೆ ಚೀಟು ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:7
18 ತಿಳಿವುಗಳ ಹೋಲಿಕೆ  

ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.


ಯೆಹೋವನು ಯೆಹೋಶುವನಿಗೆ, “ಮೇಲಕ್ಕೆ ಏಳು, ನೀನು ಹೀಗೆ ಬೋರಲು ಬಿದ್ದಿರುವುದೇಕೆ?


ಆದರೆ ನೀವು ಈ ಸಂಗತಿಗಳನ್ನು ಮಾಡದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ.


ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.


ಸೈನಿಕರು ಆತನನ್ನು ಶಿಲುಬೆಗೆ ಮೊಳೆಗಳಿಂದ ಜಡಿದರು. ನಂತರ ಉಡುಪಿಗಾಗಿ ತಮ್ಮಲ್ಲಿಯೇ ಚೀಟಿಹಾಕಿ ತೆಗೆದುಕೊಂಡರು.


ಅವರು ನನ್ನ ಮೇಲ್ಹೊದಿಕೆಯನ್ನು ಪಾಲು ಮಾಡಿಕೊಳ್ಳುವರು; ನನ್ನ ನಿಲುವಂಗಿಗಾಗಿ ಚೀಟುಹಾಕುವರು.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು?


ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆ ತಿಂಗಳಾದ ನೀಸಾನ್ ತಿಂಗಳಲ್ಲಿ ಒಂದು ನಿರ್ದಿಷ್ಟ ದಿವಸಕ್ಕಾಗಿ ಹಾಮಾನನು ಚೀಟು ಹಾಕಿದನು. ಆಗ ಹನ್ನೆರಡನೆ ತಿಂಗಳಾದ ಅದಾರ್ ಮಾಸವು ಆರಿಸಲ್ಪಟ್ಟಿತು. (ಆ ದಿವಸಗಳಲ್ಲಿ ಚೀಟು ಹಾಕುವದಕ್ಕೆ “ಪೂರ್” ಎಂದು ಅನ್ನುತ್ತಿದ್ದರು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು