ಜೆರುಸಲೇಮಿನ ಪೌಳಿಗೋಡೆಯ ಮತ್ತು ಅಲ್ಲಿಯ ಜನರ ವಿಚಾರವಾಗಿ ಕೇಳಿದಾಗ ನಾನು ತುಂಬಾ ಗಲಿಬಿಲಿಗೊಂಡೆನು; ನಾನು ಅಲ್ಲಿಯೇ ನೆಲದ ಮೇಲೆ ಕುಳಿತು ಅತ್ತೆನು; ದುಃಖಕ್ರಾಂತನಾದೆನು; ಅಲ್ಲದೆ ಅನೇಕ ದಿವಸಗಳವರೆಗೆ ಉಪವಾಸಮಾಡಿ ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.
“ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: “ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.
ತಪ್ಪಿಸಿಕೊಂಡ ಒಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಹೋಗಿ ನಡೆದ ವಿಷಯವನ್ನೆಲ್ಲಾ ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆ, ಎಷ್ಕೋಲ ಮತ್ತು ಆನೇರ್ ಒಬ್ಬರಿಗೊಬ್ಬರು ಸಹಾಯಮಾಡಲು ಒಂದು ಒಪ್ಪಂದವನ್ನು ಮಾಡಿಕೊಂಡಿದ್ದರು. ಅಲ್ಲದೆ ಅಬ್ರಾಮನಿಗೂ ಸಹಾಯಮಾಡುವುದಾಗಿ ಒಂದು ಒಪ್ಪಂದಕ್ಕೆ ಸಹಿ ಮಾಡಿದ್ದರು.
ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.
ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”
ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು.
ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು. ನಾನು ಇಸ್ರೇಲ್ ವಂಶದವನು ಮತ್ತು ಬೆನ್ಯಾಮೀನನ ಕುಲದವನು. ನಾನು ಇಬ್ರಿಯನು ಮತ್ತು ನನ್ನ ತಂದೆತಾಯಿಗಳು ಸಹ ಇಬ್ರಿಯರು. ನಾನು ಮೋಶೆಯ ಧರ್ಮಶಾಸ್ತ್ರವನ್ನು ಮುಖ್ಯವಾದದ್ದೆಂದು ಪರಿಗಣಿಸಿ ಫರಿಸಾಯನಾದೆನು;
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.
“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.
ಮನೆಯ ಹೊರಗಿದ್ದ ಸೇವಕರನ್ನು ಕರೆದು, “ನೋಡಿ, ನಮಗೆ ಅವಮಾನ ಮಾಡುವುದಕ್ಕಾಗಿ ಈ ಇಬ್ರಿಯ ಗುಲಾಮನನ್ನು ಇಲ್ಲಿಗೆ ತರಲಾಗಿದೆ. ಅವನು ಮನೆಯೊಳಗೆ ಬಂದು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ. ಆಗ ನಾನು ಗಟ್ಟಿಯಾಗಿ ಕೂಗಿಕೊಂಡೆ.
ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ.