Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 2:10 - ಪರಿಶುದ್ದ ಬೈಬಲ್‌

10 ಆಗ ಯೆಹೋವನು ಆ ಮೀನಿಗೆ ಆಜ್ಞಾಪಿಸಲು ಆ ಮೀನು ಯೋನನನ್ನು ಒಣನೆಲದಲ್ಲಿ ತನ್ನ ಹೊಟ್ಟೆಯೊಳಗಿಂದ ಕಾರಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರಸ್ವಾಮಿಯ ಆಜ್ಞೆಯ ಪ್ರಕಾರ ಆ ಮೀನು ಯೋನನನ್ನು ದಡದ ಮೇಲೆ ಕಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಮೀನಿಗೆ ಅಪ್ಪಣೆಮಾಡಲು ಅದು ಯೋನನನ್ನು ಒಣನೆಲದಲ್ಲಿ ಕಾರಿ ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋವ ದೇವರು ಮೀನಿಗೆ ಹೇಳಿದ್ದರಿಂದ, ಅದು ಯೋನನನ್ನು ಒಣಭೂಮಿಯ ಮೇಲೆ ಕಾರಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 2:10
18 ತಿಳಿವುಗಳ ಹೋಲಿಕೆ  

ಯಾಕೆಂದರೆ ಆತನು ನುಡಿದಾಗ ಭೂಲೋಕವು ಸೃಷ್ಟಿಯಾಯಿತು; ಆತನು ಆಜ್ಞಾಪಿಸಿದಾಗ ಸಮಸ್ತವು ಉಂಟಾಯಿತು.


ಯೋನನು ಸಮುದ್ರದೊಳಗೆ ಬಿದ್ದಾಗ, ಅವನನ್ನು ನುಂಗಿಬಿಡಲು ಯೆಹೋವನು ಒಂದು ದೊಡ್ಡ ಮೀನಿಗೆ ಆಜ್ಞಾಪಿಸಿದನು. ಯೋನನು ಆ ಮೀನಿನ ಹೊಟ್ಟೆಯೊಳಗೆ ಮೂರು ಹಗಲು ಮೂರು ರಾತ್ರಿ ಇದ್ದನು.


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಆಗ ದೇವರು, “ಬೆಳಕಾಗಲಿ” ಅನ್ನಲು ಬೆಳಕಾಯಿತು.


ಆತನು ಆಜ್ಞಾಪಿಸಲು ಮಿಡತೆಗಳೂ ಜಿಟ್ಟೆಹುಳಗಳೂ ಅಸಂಖ್ಯಾತವಾಗಿ ಬಂದವು.


ಆತನು ಆಜ್ಞಾಪಿಸಲು ವಿಷದ ಹುಳಗಳೂ ಹೇನುಗಳೂ ಬಂದವು. ಅವು ಎಲ್ಲೆಲ್ಲಿಯೂ ಹರಡಿಕೊಂಡವು.


ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಈ ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಈ ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ ದಿನಗಳನ್ನೂ ವರ್ಷಗಳನ್ನೂ ತೋರಿಸಲಿ.


ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.


ಬಳಿಕ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಟ್ಟಿಗೆ ಸೇರಿಕೊಂಡು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.


ಹೀಗೆ ದೇವರು ಗುಮಟವನ್ನು ಉಂಟುಮಾಡಿ ಅದರ ಕೆಳಭಾಗದ ನೀರುಗಳನ್ನು ಅದರ ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಿದನು.


ಯೆಹೋವನು ಯೋನನ ಸಂಗಡ ತಿರುಗಿ ಮಾತನಾಡಿದನು. ಆತನು ಹೇಳಿದ್ದೇನೆಂದರೆ,


ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ! ನಿಮ್ಮ ಹೃದಯವು ಯಾವಾಗಲೂ ಸಂತೋಷವಾಗಿರಲಿ.


ನಾನು ಹೇಳುವುದೇನೆಂದರೆ: “ಯೆಹೋವನು ನನ್ನನ್ನು ರಕ್ಷಿಸಿದನು. ನಮ್ಮ ಜೀವಮಾನದ ಕಾಲವೆಲ್ಲಾ ಯೆಹೋವನ ಆಲಯದಲ್ಲಿ ನಾವು ಹಾಡುತ್ತಾ ವಾದ್ಯಬಾರಿಸುತ್ತಾ ಆತನನ್ನು ಸ್ತುತಿಸುವೆವು.”


ನಾನೇ, ನಾನೇ ಯೆಹೋವನು! ನನ್ನ ಹೊರತು ಬೇರೆ ರಕ್ಷಕನಿಲ್ಲ!


“ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ.


ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು