Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 2:4 - ಪರಿಶುದ್ದ ಬೈಬಲ್‌

4 ಆಗ ನಾನು, ‘ನಾನು ನಿನ್ನ ಕಣ್ಣೆದುರಿನಿಂದ ಹೊರದೂಡಲ್ಪಟ್ಟಿದ್ದೇನೆ’ ಅಂದುಕೊಂಡೆನು. ಆದರೂ ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ನೋಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಸನ್ನಿಧಿಯಿಂದ ನಾನಿನ್ನು ಬಹಿಷ್ಕೃತ ಕಾಣೆನೆಂದೂ ನಿನ್ನ ಪವಿತ್ರಾಲಯ ನಿರುತ. ಈ ಭಾಗ್ಯಗಳೆಲ್ಲ ಎನಗಿಲ್ಲವೆಂದು ಪರಿಪರಿಯಾಗಿ ಮರುಗುತಿರುವೆನಿಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಸಾನ್ನಿಧ್ಯದಿಂದ ಬಿಸಾಡಲ್ಪಟ್ಟಿದ್ದೇನೆ ಅಂದುಕೊಂಡೆನು; ಆದರೂ ನಿನ್ನ ಪರಿಶುದ್ಧಾಲಯವನ್ನು ಪುನಃ ದರ್ಶನಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ನಾನು ಹೇಳಿದ್ದು, ‘ನಿಮ್ಮ ಕಣ್ಣುಗಳ ಎದುರಿನಿಂದ ಬಹಿಷ್ಕೃತನಾಗಿದ್ದೇನೆ. ಆದರೂ ನಾನು ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಪುನಃ ನೋಡುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 2:4
20 ತಿಳಿವುಗಳ ಹೋಲಿಕೆ  

ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.


ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು, ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು.


ಇಗೋ, ನನ್ನ ಸಂಕಟವೆಲ್ಲಾ ಹೊರಟುಹೋಯಿತು. ನನಗೀಗ ಸಮಾಧಾನವಿದೆ. ನೀನು ನನ್ನನ್ನು ಬಹಳವಾಗಿ ಪ್ರೀತಿಸುವದರಿಂದ ನನ್ನ ಶರೀರವು ಸಮಾಧಿಯಲ್ಲಿ ಕೊಳೆಯುವಂತೆ ಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ. ನನ್ನ ಪಾಪಗಳನ್ನು ಬಹುದೂರ ಬಿಸಾಡಿದೆ.


ತಮ್ಮ ಹೃದಯಪೂರ್ವಕವಾಗಿ ತಮ್ಮ ದೇಶದ ಕಡೆಗೆ, ಅಂದರೆ ನೀನು ಅವರ ಪೂರ್ವಿಕರಿಗೆ ಕೊಟ್ಟ ಈ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿಸಿದ ಈ ದೇವಾಲಯದ ಕಡೆಗೂ ಮುಖಮಾಡಿಕೊಂಡು ಪ್ರಾರ್ಥಿಸುವಾಗ,


ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.


ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.”


ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಆದರೆ ಈಗ ಚೀಯೋನ್ ಹೇಳುವುದೇನೆಂದರೆ, “ಯೆಹೋವನು ನನ್ನನ್ನು ಬಿಟ್ಟುಹೋಗಿದ್ದಾನೆ. ನನ್ನ ಒಡೆಯನು ನನ್ನನ್ನು ತೊರೆದಿದ್ದಾನೆ.”


ಅವರು ಆ ದೂರದ ದೇಶದಲ್ಲಿರುತ್ತಾರೆ. ಆದರೆ ಅವರು ತಮ್ಮ ಪೂರ್ವಿಕರಿಗೆ ನೀನು ದಯಪಾಲಿಸಿದ ಈ ದೇಶದ ಕಡೆಗೂ ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೂ ನಿನ್ನ ಗೌರವಕ್ಕಾಗಿ ನಾನು ನಿರ್ಮಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಿಗಳಾದೆವು ಎಂದು ಒಪ್ಪಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿನ್ನಲ್ಲಿ ಪ್ರಾರ್ಥಿಸುವುದಾದರೆ,


“ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ. ಆಗ ನಾನು ಯೆಹೋವನನ್ನು ಸ್ಮರಿಸಿದೆನು. ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು. ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದೆ.


ಹಗಲಲ್ಲಿ ಯೆಹೋವನು ನನಗೆ ನಿಜಪ್ರೀತಿಯನ್ನು ತೋರುವುದರಿಂದ ಜೀವಸ್ವರೂಪನಾದ ಆತನಿಗೆ ಪ್ರತಿ ರಾತ್ರಿಯಲ್ಲಿಯೂ ನೂತನ ಕೀರ್ತನೆಯನ್ನು ಹಾಡುವೆ; ಆತನಲ್ಲಿ ಪ್ರಾರ್ಥಿಸುವೆ.


ನೀನು ನನ್ನನ್ನು ಪಾತಾಳಕ್ಕೆ ದಬ್ಬಿರುವೆ; ನನ್ನನ್ನು ಕತ್ತಲೆಯ ಸ್ಥಳಕ್ಕೆ ನೂಕಿರುವೆ.


ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದಲೇ ನನ್ನನ್ನು ಶಿಕ್ಷಿಸಿದೆ.


ನೀರು ನನ್ನ ತಲೆಯ ಮೇಲೆ ಏರಿತು. “ನಾನು ಸತ್ತುಹೋಗುತ್ತೇನೆ” ಎಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು