Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:2 - ಪರಿಶುದ್ದ ಬೈಬಲ್‌

2 “ಮಹಾನಗರವಾದ ನಿನೆವೆಗೆ ನೀನು ಎದ್ದುಹೋಗಿ ಅಲ್ಲಿ ನಾನು ಹೇಳಿದ್ದನ್ನು ಅವರಿಗೆ ಸಾರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಪ್ರಕಟಿಸುವದನ್ನು ಅಲ್ಲಿ ಸಾರು ಎಂದು ಎರಡನೆಯ ಸಲ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:2
13 ತಿಳಿವುಗಳ ಹೋಲಿಕೆ  

ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು.


“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.


“ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಕೃತ್ಯಗಳನ್ನು ನೋಡಿದ್ದೇನೆ. ಆದ್ದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”


ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.


ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ.


ಯೋನನು ಯೆಹೋವನ ಆಜ್ಞೆಗೆ ವಿಧೇಯನಾಗಿ ನಿನೆವೆಗೆ ಬಂದನು. ನಿನೆವೆಯು ಬಹು ವಿಶಾಲವಾದ ಪಟ್ಟಣ. ಅದು ಮೂರು ದಿನಗಳ ಪ್ರಯಾಣದಷ್ಟು ದೊಡ್ಡದಿತ್ತು.


“ನರಪುತ್ರನೇ, ನಾನು ನಿನ್ನನ್ನು ಇಸ್ರೇಲರಿಗೆ ಕಾವಲುಗಾರನನ್ನಾಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನ್ನು ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನ್ನ ಪರವಾಗಿ ಅವರನ್ನು ಎಚ್ಚರಿಸು.


ಯೆಹೋವನು ಯೋನನ ಸಂಗಡ ತಿರುಗಿ ಮಾತನಾಡಿದನು. ಆತನು ಹೇಳಿದ್ದೇನೆಂದರೆ,


ಯೆಹೋವನು ಹೇಳಿದ್ದನ್ನೆಲ್ಲಾ ಮೋಶೆಯು ಆರೋನನಿಗೆ ತಿಳಿಸಿದನು. ಯೆಹೋವನು ತನ್ನನ್ನು ಯಾಕೆ ಕಳುಹಿಸಿದನೆಂದೂ ತಾನು ಯಾವ ಅದ್ಭುತಕಾರ್ಯಗಳನ್ನು ಮಾಡಬೇಕೆಂದೂ ಆರೋನನಿಗೆ ವಿವರಿಸಿದನು.


ಮತ್ತು ಪತ್ರದಲ್ಲಿ ಪೂರಿಮ್ ಹಬ್ಬವನ್ನು ಆಚರಿಸಲು ಪ್ರಾರಂಭಿಸಿರಿ ಎಂದೂ ಬರೆದಿದ್ದನು. ಈ ಹಬ್ಬವನ್ನು ಯಾವ ದಿನ ಆಚರಿಸಬೇಕು ಎಂಬುದನ್ನೂ ನಮೂದಿಸಿದನು. ಈ ಎರಡು ವಿಶ್ರಾಂತಿ ದಿನಗಳನ್ನು ತಮಗೂ ತಮ್ಮ ಸಂತಾನಗಳವರಿಗೂ ಖಾಯಂಗೊಳಿಸಲು ಯೆಹೂದಿಯಾದ ಮೊರ್ದೆಕೈಯೂ ರಾಣಿ ಎಸ್ತೇರಳೂ ಯೆಹೂದ್ಯರಿಗೆ ಒಂದು ಆಜ್ಞೆಯನ್ನು ಹೊರಡಿಸಿದರು. ತಮಗೆ ಸಂಬಂಧಿಸಿದ ಕೆಟ್ಟಸಂಗತಿಗಳನ್ನು ನೆನಪಿಗೆ ತಂದುಕೊಂಡು ಬೇರೆ ವಿಶ್ರಾಂತಿ ದಿನಗಳಲ್ಲಿ ಉಪವಾಸವಿದ್ದು ಗೋಳಾಡುವಂತೆ ಈ ಹಬ್ಬದ ದಿನಗಳಲ್ಲಿಯೂ ಅವರು ಮಾಡುವರು.


ಆದರೆ ಯೆಹೋವನು ನನಗೆ, “ನಾನು ಕೇವಲ ಹುಡುಗನೆಂದು ಹೇಳಬೇಡ, ನಾನು ಕಳುಹಿಸುವ ಸ್ಥಳಗಳಿಗೆ ನೀನು ಹೋಗಬೇಕು. ನಾನು ಹೇಳು ಅಂದದ್ದನ್ನೆಲ್ಲ ನೀನು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು