Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:6 - ಪರಿಶುದ್ದ ಬೈಬಲ್‌

6 ನಿನೆವೆಯ ಅರಸನು ಇದನ್ನು ಕೇಳಿ ತಾನು ಮಾಡಿದ ದುಷ್ಕೃತ್ಯಗಳಿಗಾಗಿ ಮನಮರುಗಿದನು. ತಾನು ಸಿಂಹಾಸನದಿಂದಿಳಿದು ರಾಜವಸ್ತ್ರವನ್ನು ತೆಗೆದಿಟ್ಟು ಶೋಕವಸ್ತ್ರವನ್ನು ಧರಿಸಿ ಬೂದಿಯ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೋನನ ಪ್ರಕಟನೆಯು ನಿನೆವೆಯ ಅರಸನಿಗೆ ಮುಟ್ಟಲು ಅವನು ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:6
20 ತಿಳಿವುಗಳ ಹೋಲಿಕೆ  

ಆಗ ನಾನು ದೇವರಾದ ನನ್ನ ಯೆಹೋವನನ್ನು ಪ್ರಾರ್ಥಿಸಿದೆ ಮತ್ತು ಆತನ ಸಹಾಯವನ್ನು ಕೋರಿದೆ. ನಾನು ಯಾವ ಆಹಾರವನ್ನೂ ಸ್ವೀಕರಿಸಲಿಲ್ಲ ಮತ್ತು ದುಃಖಸೂಚಕವಾದ ವಸ್ತ್ರಗಳನ್ನು ಧರಿಸಿಕೊಂಡೆ. ನನ್ನ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡೆ.


ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು.


“ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.


ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.


ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.


ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.


ಇದನ್ನು ಗತ್‌ನಲ್ಲಿ ತಿಳಿಸಬೇಡಿ. ಅಕ್ಕೊದಲ್ಲಿ ಅಳಬೇಡಿರಿ. ಬೆತ್ ಒಫ್ರದ ಧೂಳಿನಲ್ಲಿ ಹೊರಳಾಡಿರಿ.


ಅವನು ದೀನತೆಯಿಂದ ತನ್ನ ಮುಖವನ್ನು ಧೂಳಿನಲ್ಲಿ ಹಾಕಬೇಕು. ಆಗ ಅವನ ಜೀವಕ್ಕೆ ನಿರೀಕ್ಷೆ ಇದ್ದರೂ ಇರಬಹುದು.


ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”


ಮೋವಾಬಿನ ಎಲ್ಲಾ ಕಡೆಗಳಲ್ಲೂ ಮನೆಯ ಚಾವಣಿಯ ಮೇಲೂ ಬೀದಿಗಳಲ್ಲೂ ಜನರು ಗೋಣಿತಟ್ಟುಗಳನ್ನು ಧರಿಸಿಕೊಂಡು ರೋಧಿಸುತ್ತಾರೆ.


ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.


ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.


ಆಗ ಸಮುದ್ರ ತೀರದ ದೇಶಗಳ ನಾಯಕರೆಲ್ಲಾ ತಮ್ಮ ಸಿಂಹಾಸನದಿಂದ ಕೆಳಗಿಳಿದು ತಮ್ಮ ಶೋಕವನ್ನು ವ್ಯಕ್ತಪಡಿಸುವರು. ಅವರು ತಮ್ಮ ಸುಂದರವಾದ ರಾಜವಸ್ತ್ರಗಳನ್ನು ತೆಗೆದಿಟ್ಟು ಭಯದ ಬಟ್ಟೆಗಳನ್ನು ಧರಿಸಿಕೊಂಡು ನೆಲದ ಮೇಲೆ ಭಯದಿಂದ ಕುಳಿತುಕೊಳ್ಳುವರು. ನೀನು ಎಷ್ಟು ಬೇಗನೇ ನಾಶವಾದೆ ಎಂದು ಕೇಳಿ ದಂಗುಬಡಿದಂತಾಗುವರು.


ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು.


ಬಾರೂಕನು ಸುರಳಿಯಿಂದ ಓದಿದ ಎಲ್ಲಾ ವಿಷಯವನ್ನು ಮೀಕಾಯನು ಈ ಅಧಿಕಾರಿಗಳಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು