Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:11 - ಪರಿಶುದ್ದ ಬೈಬಲ್‌

11 ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಂಥ ಗಿಡಕ್ಕಾಗಿ ನೀನು ಕನಿಕರಪಟ್ಟಿರುವಲ್ಲಿ ಎಡಗೈ ಬಲಗೈ ತಿಳಿಯದ ಒಂದು ಲಕ್ಷ ಇಪ್ಪತ್ತು ಸಾವಿರ ನರಪ್ರಾಣಿಗಳೂ ಬಹು ಪಶುಗಳೂ ಉಳ್ಳ ಆ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:11
17 ತಿಳಿವುಗಳ ಹೋಲಿಕೆ  

ಹೀಗಿರಲು ನಾನು ನಿನಗೆ ಕರುಣೆ ತೋರಿದಂತೆ ನಿನ್ನ ಜೊತೆ ಸೇವಕನಿಗೂ ನೀನು ಕರುಣೆ ತೋರಿಸಬೇಕಿತ್ತು’ ಎಂದು ಹೇಳಿ


“ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಕೃತ್ಯಗಳನ್ನು ನೋಡಿದ್ದೇನೆ. ಆದ್ದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”


ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.


ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ಆ ದೇಶವನ್ನು ಕೊಡುವೆನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.


ನೀನು ಪಶುಗಳಿಗೋಸ್ಕರ ಹುಲ್ಲನ್ನು ಬೆಳೆಯ ಮಾಡುವೆ. ನಾವು ದುಡಿದು ಬೆಳೆಸುವುದಕ್ಕಾಗಿ ಸಸಿಗಳನ್ನು ಕೊಟ್ಟಿರುವೆ. ಅವು ಬೆಳೆದು ನಮಗೆ ಆಹಾರವನ್ನು ಒದಗಿಸುತ್ತವೆ.


ಜನರು ಮಾಡಿದವುಗಳನ್ನು ದೇವರು ನೋಡಿದನು; ಅವರು ದುಷ್ಟತನ ಮಾಡುವದನ್ನು ನಿಲ್ಲಿಸಿದ್ದನ್ನು ಗಮನಿಸಿದನು. ಆತನು ಅವರನ್ನು ದಂಡಿಸಲಿಲ್ಲ.


ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.


ಆ ಮಗುವು ಒಳ್ಳೆಯದರ ಬಗ್ಗೆ ಮತ್ತು ಕೆಟ್ಟದ್ದರ ಬಗ್ಗೆ ಕಲಿತುಕೊಳ್ಳುವಷ್ಟು ವಯಸ್ಸಾಗುವ ಮೊದಲೇ ಎಫ್ರಾಯೀಮ್ ದೇಶ ಮತ್ತು ಅರಾಮ್ಯರ ದೇಶ ನಿರ್ಜನವಾಗುವುದು. ನೀವೀಗ, ಆ ಇಬ್ಬರು ಅರಸರಿಗೆ ಭಯಪಡುತ್ತಿದ್ದೀರಿ.


ಅಶ್ಶೂರದ ಅರಸನಾದ ಸನ್ಹೇರೀಬನು ನಿನೆವೆಗೆ ಹಿಂದಿರುಗಿ ಅಲ್ಲಿಯೇ ಉಳಿದನು.


ಆಗ ಯೆಹೋವನು, “ನೀನು ಆ ಸೋರೆ ಗಿಡಕ್ಕಾಗಿ ಏನೂ ಮಾಡಲಿಲ್ಲ. ಅದು ಬೆಳೆಯುವಂತೆ ನೀನು ಮಾಡಲಿಲ್ಲ. ಅದು ರಾತ್ರಿಯಲ್ಲಿ ಬೆಳೆಯಿತು. ಮರುದಿನ ಅದು ಸತ್ತಿತ್ತು. ಈಗ ನೀನು ಅದಕ್ಕಾಗಿ ದುಃಖಪಡುತ್ತಿರುವೆ.


ನಾವೆಯೊಳಗಿಂದ ಬಂದ ಎಲ್ಲಾ ಪಕ್ಷಿಗಳಿಗೆ, ಎಲ್ಲಾ ಪಶುಗಳಿಗೆ ಮತ್ತು ಪ್ರಾಣಿಗಳಿಗೆ ನಾನು ವಾಗ್ದಾನ ಮಾಡುತ್ತೇನೆ. ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೆ ವಾಗ್ದಾನ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು