Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:5 - ಪರಿಶುದ್ದ ಬೈಬಲ್‌

5 ಇವೆಲ್ಲಾ ಯೋನನನ್ನು ಇನ್ನೂ ಸಿಟ್ಟುಗೊಳಿಸಿದ್ದವು. ಅವನು ನಗರದ ಹೊರಗೆ ಪೂರ್ವದ ಕಡೆಗೆ ಹೋಗಿ ತನಗೊಂದು ಮಂಟಪವನ್ನು ಕಟ್ಟಿ ಅದರ ನೆರಳಿನಲ್ಲಿ ಕುಳಿತುಕೊಂಡು ನಗರಕ್ಕೆ ಏನಾಗುವದು ಎಂಬದನ್ನು ಕಾಯುತ್ತಾ ಕುಳಿತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣದಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವುದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕುಳಿತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಯೋನನು ನಗರವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋದನು. ಅಲ್ಲಿ ತನಗಾಗಿ ಒಂದು ಗುಡಿಸಲನ್ನು ಕಟ್ಟಿಕೊಂಡನು. ನಗರಕ್ಕೆ ಏನು ಸಂಭವಿಸುತ್ತದೋ ಎಂಬುದನ್ನು ನೋಡಲು ಅದರ ನೆರಳಿನಲ್ಲಿ ಕುಳಿತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಲಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕೂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೋನನು ಪಟ್ಟಣವನ್ನು ಬಿಟ್ಟು, ಪಟ್ಟಣದ ಪೂರ್ವದಿಕ್ಕಿನ ಕಡೆಯಲ್ಲಿ ಕುಳಿತುಕೊಂಡು, ಗುಡಿಸಲನ್ನು ಕಟ್ಟಿಕೊಂಡು, ಪಟ್ಟಣದಲ್ಲಿ ಏನಾಗುವುದೆಂದು ನೋಡುವವರೆಗೆ ಗುಡಿಸಲಿನ ನೆರಳಿನಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:5
10 ತಿಳಿವುಗಳ ಹೋಲಿಕೆ  

ಎಲೀಯನಿಗೆ ಆ ಧ್ವನಿಯು ಕೇಳಿಸಿದಾಗ, ಅವನು ತನ್ನ ಮೇಲಂಗಿಯಿಂದ ಮುಖವನ್ನು ಮುಚ್ಚಿಕೊಂಡನು. ನಂತರ ಅವನು ಗುಹೆಯ ಹತ್ತಿರಕ್ಕೆ ಹೋಗಿ, ಅದರ ದ್ವಾರದಲ್ಲಿ ನಿಂತುಕೊಂಡನು. ಆಗ ಆ ಧ್ವನಿಯು, “ಎಲೀಯನೇ, ನೀನು ಏಕೆ ಇಲ್ಲಿರುವೆ?” ಎಂದು ಅವನನ್ನು ಕೇಳಿತು.


ಎಲೀಯನು ಅಲ್ಲಿನ ಒಂದು ಗುಹೆಗೆ ಹೋಗಿ ರಾತ್ರಿಯೆಲ್ಲಾ ಅಲ್ಲಿ ಕಳೆದನು. ಆಗ ಯೆಹೋವನು ಎಲೀಯನೊಂದಿಗೆ ಮಾತನಾಡಿ, “ಎಲೀಯನೇ, ನೀನು ಇಲ್ಲಿರುವುದೇಕೆ?” ಎಂದು ಕೇಳಿದನು.


ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.


ಹಡಗು ಮುಳುಗಿಹೋಗದಂತೆ ಅದನ್ನು ಹಗುರ ಮಾಡಲು ಜನರು ಅದರೊಳಗಿದ್ದ ವಸ್ತುಗಳನ್ನು ಸಮುದ್ರಕ್ಕೆ ಎಸೆದರು. ನಾವಿಕರು ತುಂಬಾ ಭಯಪಟ್ಟಿದ್ದರು. ಪ್ರತಿಯೊಬ್ಬರು ತಮ್ಮತಮ್ಮ ದೇವರುಗಳಿಗೆ ಪ್ರಾರ್ಥನೆ ಮಾಡಿದರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಅಲ್ಲಿ ಮಲಗಿ ನಿದ್ರೆ ಮಾಡತೊಡಗಿದನು.


ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.


ಆಗ ಯೆಹೋವನು ಅವನಿಗೆ, “ನಾನು ಆ ಜನರನ್ನು ನಾಶಮಾಡದೆ ಹೋದುದರಿಂದ ನೀನು ಸಿಟ್ಟುಗೊಳ್ಳುವದು ಸರಿಯೋ?” ಎಂದು ಕೇಳಿದನು.


ದೇವರಾದ ಯೆಹೋವನು ಒಂದು ಸೋರೆ ಗಿಡವನ್ನು ಯೋನನ ಬಳಿಯಲ್ಲಿಯೇ ಶೀಘ್ರದಲ್ಲಿ ಬೆಳೆಯ ಮಾಡಿದನು. ಆ ಸೋರೆ ಗಿಡವು ಆ ಜಾಗವನ್ನು ತಂಪು ಮಾಡಿದ್ದರಿಂದ ಯೋನನಿಗೆ ತುಂಬಾ ಹಿತವಾಯಿತು ಮತ್ತು ತುಂಬಾ ಸಂತೋಷವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು