Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:6 - ಪರಿಶುದ್ದ ಬೈಬಲ್‌

6 ದೇವರಾದ ಯೆಹೋವನು ಒಂದು ಸೋರೆ ಗಿಡವನ್ನು ಯೋನನ ಬಳಿಯಲ್ಲಿಯೇ ಶೀಘ್ರದಲ್ಲಿ ಬೆಳೆಯ ಮಾಡಿದನು. ಆ ಸೋರೆ ಗಿಡವು ಆ ಜಾಗವನ್ನು ತಂಪು ಮಾಡಿದ್ದರಿಂದ ಯೋನನಿಗೆ ತುಂಬಾ ಹಿತವಾಯಿತು ಮತ್ತು ತುಂಬಾ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರಾದ ಸರ್ವೇಶ್ವರ ಆ ಸ್ಥಳದಲ್ಲಿ ಒಂದು ಸೋರೆಬಳ್ಳಿ ಮೊಳೆಯುವಂತೆ ಮಾಡಿದರು. ಅದು ಬೆಳೆದು ತಲೆಗೆ ನೆರಳನ್ನೂ ಮನಸ್ಸಿಗೆ ತಣಿವನ್ನೂ ನೀಡಿತು. ಯೋನನಿಗೆ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ದೇವರಾದ ಯೆಹೋವನು ಯೋನನ ಮೇಲ್ಗಡೆ ಒಂದು ಸೋರೆಗಿಡವು ಹಬ್ಬಿ ಅವನ ತಲೆಗೆ ನೆರಳಾಗಿ ಅವನ ಕರಕರೆಯನ್ನು ತಪ್ಪಿಸುವಂತೆ ಏರ್ಪಡಿಸಿದನು. ಆ ಸೋರೆಗಿಡದಿಂದ ಯೋನನಿಗೆ ಬಹು ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರಾದ ಯೆಹೋವ ದೇವರು ಒಂದು ಸೋರೆ ಬಳ್ಳಿಯನ್ನು ಹಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು, ಅವನ ತಲೆಗೆ ನೆರಳು ಕೊಟ್ಟು, ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದರು. ಯೋನನು ಆ ಸೋರೆ ಬಳ್ಳಿಯ ವಿಷಯವಾಗಿ ಬಹಳ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:6
11 ತಿಳಿವುಗಳ ಹೋಲಿಕೆ  

ದುಃಖದಿಂದಿರುವ ಜನರು ದುಃಖವಿಲ್ಲದವರಂತೆ ಜೀವಿಸಬೇಕು. ಸಂತೋಷದಿಂದ ಇರುವ ಜನರು ಸಂತೋಷವಿಲ್ಲದ ಜನರಂತೆ ಜೀವಿಸಬೇಕು. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಏನೂ ಇಲ್ಲದವರಂತೆ ಜೀವಿಸಬೇಕು.


ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಈ ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು.


ಯೋನನು ಸಮುದ್ರದೊಳಗೆ ಬಿದ್ದಾಗ, ಅವನನ್ನು ನುಂಗಿಬಿಡಲು ಯೆಹೋವನು ಒಂದು ದೊಡ್ಡ ಮೀನಿಗೆ ಆಜ್ಞಾಪಿಸಿದನು. ಯೋನನು ಆ ಮೀನಿನ ಹೊಟ್ಟೆಯೊಳಗೆ ಮೂರು ಹಗಲು ಮೂರು ರಾತ್ರಿ ಇದ್ದನು.


ಅವುಗಳನ್ನು ನೋಡಿ ಹಿಜ್ಕೀಯನಿಗೆ ಬಹು ಸಂತೋಷವಾಯಿತು. ಅವನು ಬಾಬಿಲೋನಿನ ದೂತರಿಗೆ ತನ್ನ ಅರಮನೆಯ ಉಗ್ರಾಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನೂ ತಾನು ಕೊಡಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೂ ಸಾಂಬಾರ ಪದಾರ್ಥಗಳನ್ನೂ ಮತ್ತು ಸುಗಂಧದ್ರವ್ಯಗಳನ್ನೂ ತೋರಿಸಿದನು. ಅಲ್ಲದೆ ಯುದ್ಧದಲ್ಲಿ ಉಪಯೋಗಿಸುವ ಖಡ್ಗಗಳನ್ನು, ಗುರಾಣಿಗಳನ್ನು ತೋರಿಸಿದನು; ಅಲ್ಲದೆ ತನ್ನ ರಾಜ್ಯದಲ್ಲಿರುವ ಪ್ರತಿಯೊಂದು ವಿಷಯಗಳನ್ನು ಅವರಿಗೆ ಪ್ರದರ್ಶಿಸಿದನು.


ಹಾಮಾನನು ಹರ್ಷ ತುಂಬಿದವನಾಗಿ ರಾಜ ಸನ್ನಿಧಿಯಿಂದ ತನ್ನ ಮನೆಗೆ ತೆರಳಿದನು. ಆದರೆ ಹೆಬ್ಬಾಗಿಲ ಬಳಿಯಲ್ಲಿ ಮೊರ್ದೆಕೈಯನ್ನು ನೋಡಿದಾಗ ಅವನ ಮೇಲೆ ಹಾಮಾನನ ಕೋಪ ಉಕ್ಕಿ ಬಂತು. ಯಾಕೆಂದರೆ ಮೊರ್ದೆಕೈ ಹಾಮಾನನಿಗೆ ಯಾವ ಗೌರವವನ್ನೂ ಕೊಟ್ಟಿರಲಿಲ್ಲ ಮತ್ತು ಅವನಿಗೆ ಭಯಪಡಲಿಲ್ಲ. ಇದು ಹಾಮಾನನನ್ನು ಸಿಟ್ಟಿಗೇರುವಂತೆ ಮಾಡಿತು.


ಲೊ ಡೆಬಾರಿನಲ್ಲಿ ನೀವು ಸಂತೋಷವಾಗಿದ್ದೀರಿ. “ಕರ್ನಯಿಮನ್ನು ನಾವು ನಮ್ಮ ಬಲದಿಂದಲೇ ಗೆದ್ದಿದ್ದೇವೆ” ಎಂದು ನೀವು ಹೇಳುತ್ತೀರಿ.


ಪಕ್ಷಿಯಂತೆ ಹಾರಿಹೋಗುತ್ತದೋ ಎಂಬಂತೆ ಹಣವು ಬಹುಬೇಗನೆ ಇಲ್ಲವಾಗುವುದು.


ಇವೆಲ್ಲಾ ಯೋನನನ್ನು ಇನ್ನೂ ಸಿಟ್ಟುಗೊಳಿಸಿದ್ದವು. ಅವನು ನಗರದ ಹೊರಗೆ ಪೂರ್ವದ ಕಡೆಗೆ ಹೋಗಿ ತನಗೊಂದು ಮಂಟಪವನ್ನು ಕಟ್ಟಿ ಅದರ ನೆರಳಿನಲ್ಲಿ ಕುಳಿತುಕೊಂಡು ನಗರಕ್ಕೆ ಏನಾಗುವದು ಎಂಬದನ್ನು ಕಾಯುತ್ತಾ ಕುಳಿತನು.


ಮರುದಿನ ಮುಂಜಾನೆ, ದೇವರು ಆ ಗಿಡವನ್ನು ತಿನ್ನಲು ಒಂದು ಹುಳವನ್ನು ಕಳುಹಿಸಿದನು. ಆ ಹುಳವು ಗಿಡವನ್ನು ತಿಂದ ನಿಮಿತ್ತ ಅದು ಬಾಡಿಹೋಗಿ ಸತ್ತಿತ್ತು.


ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ ತಂಪಾದ ನೆರಳನ್ನು ಬಯಸುವ ಗುಲಾಮನಂತಿದ್ದಾನೆ. ಮನುಷ್ಯನು, ದಿನದ ಕೂಲಿಗಾಗಿ ಕಾಯುತ್ತಿರುವ ಕೂಲಿಯವನಂತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು