Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:9 - ಪರಿಶುದ್ದ ಬೈಬಲ್‌

9 ಆದರೆ ದೇವರು ಯೋನನಿಗೆ ಹೇಳಿದ್ದೇನೆಂದರೆ, “ಆ ಸೋರೆ ಗಿಡವು ಸತ್ತುಹೋದುದಕ್ಕೆ ನೀನು ಕೋಪಗೊಳ್ಳುವುದು ಸರಿಯೋ?” ಅದಕ್ಕುತ್ತರವಾಗಿ ಯೋನನು, “ಹೌದು! ನಾನು ಕೋಪಗೊಂಡದ್ದು ನಿಜ. ನಾನು ಸಾಯುವಷ್ಟು ಕೋಪಗೊಂಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ದೇವರು ಯೋನನನ್ನು - ನೀನು ಸೋರೆಗಿಡಕ್ಕಾಗಿ ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಲು ಯೋನನು - ಮರಣವಾಗುವಷ್ಟು ಸಿಟ್ಟುಗೊಳ್ಳುವದು ಸರಿಯೇ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:9
13 ತಿಳಿವುಗಳ ಹೋಲಿಕೆ  

ಯೋಬನೇ, ನಿನ್ನ ಕೋಪದಿಂದ ನಿನ್ನನ್ನೇ ಗಾಯಮಾಡಿಕೊಳ್ಳುತ್ತಿರುವೆ. ಕೇವಲ ನಿನಗೋಸ್ಕರ ಜನರು ಲೋಕವನ್ನು ಬಿಟ್ಟುಹೋಗಬೇಕೇ? ಕೇವಲ ನಿನ್ನನ್ನು ತೃಪ್ತಿಪಡಿಸುವುದಕ್ಕಾಗಿ ದೇವರು ಬೆಟ್ಟಗಳನ್ನು ಜರುಗಿಸುತ್ತಾನೆಂದು ಭಾವಿಸಿಕೊಂಡಿರುವಿಯಾ?


ಮೂಢನ ಕೋಪವು ಅವನನ್ನೇ ಕೊಲ್ಲುವುದು. ಮೂರ್ಖನ ಹೊಟ್ಟೆಕಿಚ್ಚು ಅವನನ್ನೇ ಕೊಲ್ಲುವುದು.


ಅವಳು ಸಂಸೋನನನ್ನು ಪ್ರತಿದಿನ ಪೀಡಿಸತೊಡಗಿದಳು. ಅವನ ಶಕ್ತಿಯ ರಹಸ್ಯದ ಬಗ್ಗೆ ಅವಳು ಪದೇಪದೇ ಕೇಳುತ್ತಿದ್ದದರಿಂದ ಅವನಿಗೆ ಸಾಯುವಷ್ಟು ಬೇಸರವಾಯಿತು.


ಆ ದಿನಗಳಲ್ಲಿ ಜನರು ಸಾಯುವುದಕ್ಕೆ ಮಾರ್ಗವನ್ನು ಹುಡುಕಿದರೂ ಅವರಿಗೆ ಸಿಕ್ಕುವುದಿಲ್ಲ. ಅವರು ಮರಣವನ್ನು ಬಯಸಿದರೂ ಮರಣವು ಅವರಿಗೆ ಮರೆಯಾಗುತ್ತದೆ.


ದೇವರ ಇಷ್ಟಾನುಸಾರವಾದ ದುಃಖವು ಹೃದಯವನ್ನೂ ಜೀವಿತವನ್ನೂ ಪರಿವರ್ತಿಸುತ್ತದೆ. ಈ ಪರಿವರ್ತನೆಯು ರಕ್ಷಣೆಗೆ ನಡೆಸುತ್ತದೆ. ಈ ಪರಿವರ್ತನೆಯ ವಿಷಯದಲ್ಲಿ ನಾವು ವ್ಯಸನಪಡಬೇಕಾಗಿಲ್ಲ. ಆದರೆ, ಲೋಕವು ಹೊಂದಿರುವ ದುಃಖವು ಮರಣವನ್ನು ಬರಮಾಡುತ್ತದೆ.


ಅವರಿಗೆ, “ನನ್ನ ಆತ್ಮವು ದುಃಖದಿಂದ ತುಂಬಿಹೋಗಿದೆ. ನನ್ನ ಹೃದಯವು ದುಃಖದಿಂದ ಒಡೆದುಹೋಗುವಂತಿದೆ. ನೀವು ನನ್ನೊಂದಿಗೆ ಎಚ್ಚರವಾಗಿದ್ದು ಇಲ್ಲೇ ಇರಿ” ಎಂದು ಹೇಳಿದನು.


ಯೋಬನೇ, ಕೋಪವು ನಿನ್ನನ್ನು ಮೋಸಗೊಳಿಸದಿರಲಿ; ಹಣವು ನಿನ್ನ ಮನಸ್ಸನ್ನು ಮಾರ್ಪಡಿಸದಿರಲಿ, ನಿನ್ನನ್ನು ನಾಶನಕ್ಕೆ ನಡೆಸದಿರಲಿ.


ದೇವರು ಆ ನಗರವನ್ನು ಕಾಪಾಡಿದನೆಂದು ಯೋನನಿಗೆ ಸಂತೋಷವಾಗಲಿಲ್ಲ. ಯೋನನಿಗೆ ಸಿಟ್ಟು ಬಂದಿತು.


ಸೂರ್ಯನು ಆಕಾಶದಲ್ಲಿ ಏರಿ ಬಂದಾಗ ದೇವರು ಪೂರ್ವದ ಬಿಸಿಗಾಳಿ ಬೀಸುವಂತೆ ಮಾಡಿದನು. ಬಿಸಿಲಿನ ತಾಪವು ಯೋನನ ತಲೆಯ ಮೇಲೆ ಹೆಚ್ಚಾಯಿತು. ಯೋನನಿಗೆ ಶಾಖ ತಡೆಯಲಾಗಲಿಲ್ಲ. ಬಹಳ ಬಲಹೀನನಾದನು. ನನ್ನನ್ನು ಸಾಯಿಸು ಎಂದು ಯೋನನು ದೇವರನ್ನು ಬೇಡುತ್ತಾ, “ದೇವರೇ, ನಾನು ಬದುಕುವದಕ್ಕಿಂತ ಸಾಯುವುದೇ ಲೇಸು” ಅಂದನು.


ಆಗ ಯೆಹೋವನು, “ನೀನು ಆ ಸೋರೆ ಗಿಡಕ್ಕಾಗಿ ಏನೂ ಮಾಡಲಿಲ್ಲ. ಅದು ಬೆಳೆಯುವಂತೆ ನೀನು ಮಾಡಲಿಲ್ಲ. ಅದು ರಾತ್ರಿಯಲ್ಲಿ ಬೆಳೆಯಿತು. ಮರುದಿನ ಅದು ಸತ್ತಿತ್ತು. ಈಗ ನೀನು ಅದಕ್ಕಾಗಿ ದುಃಖಪಡುತ್ತಿರುವೆ.


ಅಹಾಬನು ಮನೆಗೆ ಹೋದನು. ಅವನು ನಾಬೋತನ ಮೇಲೆ ಕೋಪಗೊಂಡನು ಮತ್ತು ಬೇಸರಗೊಂಡನು. ಇಜ್ರೇಲಿನವನಾದ ನಾಬೋತನು ಹೇಳಿದ ಸಂಗತಿಗಳನ್ನು ಅವನು ಇಷ್ಟಪಡಲಿಲ್ಲ. “ನಾನು ನನ್ನ ವಂಶಕ್ಕೆ ಸೇರಿದ ದ್ರಾಕ್ಷಿತೋಟವನ್ನು ನಿನಗೆ ಕೊಡುವುದಿಲ್ಲ” ಎಂದು ನಾಬೋತನು ಹೇಳಿದ್ದನು. ಅಹಾಬನು ತನ್ನ ಹಾಸಿಗೆಯಲ್ಲಿ ಮಲಗಿ, ಮುಖವನ್ನು ಬೇರೆ ಕಡೆಗೆ ತಿರುಗಿಸಿಕೊಂಡನು. ಅವನು ಊಟಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು