Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:17 - ಪರಿಶುದ್ದ ಬೈಬಲ್‌

17 ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ನಮ್ಮ ಮೇಲೆ ಆಕ್ರಮಣಮಾಡಿ, ಒಂಟೆಗಳನ್ನು ಹೊಡೆದುಕೊಂಡು ಹೋದರು! ಅಲ್ಲದೆ ನಿನ್ನ ಸೇವಕರುಗಳನ್ನು ಕೊಂದುಹಾಕಿದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು. ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಮೇಲೆ ಬಿದ್ದು, ಒಂಟೆಗಳನ್ನು ಹೊಡೆದುಕೊಂಡುಹೋದರು. ಅಲ್ಲದೆ ಆ ಕೂಲಿ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಓಡಿಬಂದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಷ್ಟರಲ್ಲಿ ಇನ್ನೊಬ್ಬನು ಬಂದು ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತಮಾಡಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇವನು ಇನ್ನೂ ಮಾತನಾಡುತ್ತಿರಲು, ಇನ್ನೊಬ್ಬ ದೂತನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಒಂಟೆಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಆಳುಗಳನ್ನು ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:17
8 ತಿಳಿವುಗಳ ಹೋಲಿಕೆ  

ಹಾರಾನನು ಬಾಬಿಲೋನಿನ ತನ್ನ ಸ್ವಂತ ಸ್ಥಳವಾದ ಊರ್ ಎಂಬಲ್ಲಿ ಸತ್ತುಹೋದನು. ಹಾರಾನನು ಸತ್ತಾಗ ಅವನ ತಂದೆ ಇನ್ನೂ ಜೀವಂತವಾಗಿದ್ದನು.


ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.


ಆಗ ತೂರಿನ ಜನರು ಹೀಗೆನ್ನುವರು: “ಬಾಬಿಲೋನಿನವರು ನಮಗೆ ಸಹಾಯಮಾಡುವರು.” ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.


ಆದರೆ ಶೆಬ ದೇಶದವರು ನಮ್ಮ ಮೇಲೆ ಆಕ್ರಮಣ ಮಾಡಿ ನಿನ್ನ ಪಶುಗಳನ್ನೆಲ್ಲಾ ಹೊಡೆದುಕೊಂಡು ಹೋದರು; ನಿನ್ನ ಸೇವಕರುಗಳನ್ನೆಲ್ಲಾ ಕೊಂದು ಹಾಕಿದರು; ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಈ ವಿಷಯವನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.


ದಾವೀದನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಾನು ಇಸ್ರೇಲರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆ” ಎಂದು ಹೇಳಿದನು.


ತೆರಹನು ತನ್ನ ಕುಟುಂಬವನ್ನು ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಸ್ವಂತ ಸ್ಥಳದಿಂದ ಹೊರಟು ಕಾನಾನಿಗೆ ಪ್ರಯಾಣ ಮಾಡಿದನು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ ಮತ್ತು ತನಗೆ ಸೊಸೆಯೂ ಅಬ್ರಾಮನ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಹಾರಾನ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸಲು ತೀರ್ಮಾನಿಸಿದನು.


ಮೂರನೆಯ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ನಿನ್ನ ಗಂಡು ಹೆಣ್ಣುಮಕ್ಕಳು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ಊಟ ಮಾಡುತ್ತಾ ದ್ರಾಕ್ಷಾರಸ ಕುಡಿಯುತ್ತಾ ಇದ್ದರು.


ನಾನು ಬಾಬಿಲೋನಿನ ಕಸ್ದೀಯ ಪುರುಷರನ್ನು ಬರಮಾಡುವೆನು. ನಾನು ಪೆಕೋದ್, ಷೋಯ ಮತ್ತು ಕೋಯ ಇಲ್ಲಿಂದಲೂ, ಅಶ್ಶೂರದ ಯೌವನಸ್ಥರನ್ನು ಬರಮಾಡುವೆನು. ಅಲ್ಲಿಯ ಎಲ್ಲಾ ಅಧಿಕಾರಿಗಳನ್ನೂ ನಾಯಕರನ್ನೂ ಬರಮಾಡುವೆನು. ಅವರೆಲ್ಲರೂ ಸುಂದರವಾದ ಯುವಕರು, ಅಧಿಕಾರಿಗಳು, ಆರಿಸಲ್ಪಟ್ಟ ಯೋಧರು ಮತ್ತು ಅಶ್ವರೂಢರು ಆಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು