Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:3 - ಪರಿಶುದ್ದ ಬೈಬಲ್‌

3 ಯೋಬನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಒಂದು ಸಾವಿರ ಎತ್ತುಗಳೂ ಮತ್ತು ಐನೂರು ಹೆಣ್ಣುಕತ್ತೆಗಳೂ ಇದ್ದವು. ಅವನಿಗೆ ಅನೇಕ ಮಂದಿ ಸೇವಕರಿದ್ದರು. ಪೂರ್ವ ದೇಶದವರಲ್ಲೆಲ್ಲಾ ಯೋಬನು ಮಹಾ ಐಶ್ವರ್ಯವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಐನೂರು ಜೋಡಿ ಎತ್ತುಗಳೂ ಐನೂರು ಹೆಣ್ಣು ಕತ್ತೆಗಳೂ ಅನೇಕಾನೇಕ ಸೇವಕರೂ ಇದ್ದದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವಾಸ್ತ್ಯವುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:3
34 ತಿಳಿವುಗಳ ಹೋಲಿಕೆ  

ನಾನು ನಾಯಕನಾಗಿದ್ದರೂ ಅವರೊಂದಿಗೇ ಇರುತ್ತಿದ್ದೆನು; ಪಾಳೆಯದಲ್ಲಿ ಸೈನ್ಯಗಳೊಂದಿಗಿರುವ ರಾಜನಂತೆ ನಾನು ದುಃಖಿತರನ್ನು ಆದರಿಸುತ್ತಿದ್ದೆನು.


ಯೆಹೋವನು ಯೋಬನ ಜೀವಿತದ ಅಂತಿಮ ಸ್ಥಿತಿಯನ್ನು ಮೊದಲನೆ ಸ್ಥಿತಿಗಿಂತಲೂ ಹೆಚ್ಚಾಗಿ ಆಶೀರ್ವದಿಸಿದನು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಒಂದು ಸಾವಿರ ಜೊತೆ ಎತ್ತುಗಳೂ ಒಂದು ಸಾವಿರ ಹೆಣ್ಣು ಕತ್ತೆಗಳೂ ಇದ್ದವು.


ಪೂರ್ವದಿಂದ ಮಿದ್ಯಾನ್ಯರೂ ಅಮಾಲೇಕ್ಯರೂ ಯಾವಾಗಲೂ ಬಂದು ಇವರ ಬೆಳೆಗಳನ್ನು ನಾಶಪಡಿಸುತ್ತಿದ್ದರು.


ಅವನ ಜ್ಞಾನವು ಈಜಿಪ್ಟಿನ ಗಂಡಸರೆಲ್ಲರ ಜ್ಞಾನಕ್ಕಿಂತಲೂ ಹೆಚ್ಚಿನದಾಗಿತ್ತು. ಸೊಲೊಮೋನನ ಜ್ಞಾನವು ಪೂರ್ವದಿಕ್ಕಿನ ಜನರೆಲ್ಲರ ಜ್ಞಾನಕ್ಕಿಂತ ವಿಶಾಲವಾಗಿತ್ತು.


ಆಗ ಬಿಳಾಮನು ಹೀಗೆ ಹೇಳಿದನು: “ಮೋವಾಬ್ಯರ ಅರಸನಾದ ಬಾಲಾಕನು ನನ್ನನ್ನು ಅರಾಮಿನ ಪೂರ್ವ ದಿಕ್ಕಿನ ಬೆಟ್ಟಗಳಿಂದ ನನ್ನನ್ನು ಕರೆಸಿದನು. ‘ನೀನು ಬಂದು ನನಗೋಸ್ಕರ ಯಾಕೋಬ್ಯರನ್ನು ಶಪಿಸು; ಇಸ್ರೇಲರ ವಿರುದ್ಧ ಮಾತನಾಡು’ ಎಂದು ಬಾಲಾಕನು ಹೇಳಿದನು.


ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.


ಅಬ್ರಾಮನು ಸಾರಯಳ ಸಹೋದರನೆಂದು ಭಾವಿಸಿ ಫರೋಹನು ಅಬ್ರಾಮನಿಗೆ ದಯೆತೋರಿದನು. ಫರೋಹನು ಅಬ್ರಾಮನಿಗೆ ದನಕುರಿಗಳನ್ನೂ ಕತ್ತೆಗಳನ್ನೂ ಕೊಟ್ಟನು. ಅಲ್ಲದೆ ಅಬ್ರಾಮನಿಗೆ ದಾಸದಾಸಿಯರನ್ನೂ ಒಂಟೆಗಳನ್ನೂ ಕೊಟ್ಟನು.


ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.


ಬಳಿಕ ಯಾಕೋಬನು ತನ್ನ ಪ್ರಯಾಣವನ್ನು ಮುಂದುವರಿಸಿದನು. ಅವನು ಪೂರ್ವ ದಿಕ್ಕಿನಲ್ಲಿದ್ದ ನಾಡಿಗೆ ಹೋದನು.


ಅಬ್ರಾಮನಿಗೂ ಲೋಟನಿಗೂ ಬಹಳ ಪಶುಗಳಿದ್ದುದರಿಂದ ಅವುಗಳ ಪೋಷಣೆಗೆ ಆ ಸ್ಥಳವು ಸಾಕಾಗಲಿಲ್ಲ.


ಅವನು ನಗರಗಳನ್ನು ಕಟ್ಟಿಸಿದನು. ಅವನಿಗೆ ದನಕುರಿಗಳ ದೊಡ್ಡ ಹಿಂಡುಗಳಿದ್ದವು; ದೇವರು ಅವನಿಗೆ ಅಪರಿಮಿತವಾದ ಐಶ್ವರ್ಯವನ್ನು ಕೊಟ್ಟನು.


ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.


ಮೇಷನು ಮೋವಾಬಿನ ರಾಜನಾಗಿದ್ದನು. ಮೇಷನು ಅನೇಕ ಕುರಿಗಳ ಒಡೆಯನಾಗಿದ್ದನು. ಮೇಷನು ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಇಸ್ರೇಲಿನ ರಾಜನಿಗೆ ಕೊಡುತ್ತಿದ್ದನು.


ಮಾವೋನ್‌ನಲ್ಲಿ ಒಬ್ಬ ಮನುಷ್ಯನು ವಾಸಿಸುತ್ತಿದ್ದನು. ಈ ಮನುಷ್ಯನು ಬಹಳ ಶ್ರೀಮಂತನಾಗಿದ್ದನು. ಅವನು ಮೂರು ಸಾವಿರ ಕುರಿಗಳನ್ನೂ ಒಂದು ಸಾವಿರ ಆಡುಗಳನ್ನೂ ಹೊಂದಿದ್ದನು. ಅವನು ಕರ್ಮೆಲಿನಲ್ಲಿ ವ್ಯಾಪಾರ ಮಾಡುತ್ತಿದ್ದನು. ಒಮ್ಮೆ ಅವನು ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕರ್ಮೆಲಿಗೆ ಹೋಗಿದ್ದನು.


ಮಿದ್ಯಾನ್ಯರು ಬಂದು ಈ ಪ್ರದೇಶದಲ್ಲಿ ಪಾಳೆಯ ಮಾಡಿಕೊಂಡರು. ಅವರು ತಮ್ಮ ಸಂಗಡ ತಮ್ಮ ಕುಟುಂಬದವರನ್ನೂ ಪಶುಗಳನ್ನೂ ತಂದರು. ಅವರು ಮಿಡತೆಗಳ ಗುಂಪಿನಂತೆ ಅಸಂಖ್ಯರಾಗಿದ್ದರು. ಅವರು ಮತ್ತು ಅವರ ಒಂಟೆಗಳು ಅತಿದೊಡ್ಡ ಪ್ರಮಾಣದಲ್ಲಿದ್ದು ಎಣಿಸಲು ಸಾಧ್ಯವಿರಲಿಲ್ಲ. ಇವರೆಲ್ಲರೂ ಇಸ್ರೇಲರ ಪ್ರದೇಶಕ್ಕೆ ನುಗ್ಗಿ ಹಾಳುಮಾಡಿದರು.


ನಾವು ಹೀಗೆ ಮಾಡಿದರೆ, ಅವರ ಎಲ್ಲಾ ದನಕುರಿಗಳಿಂದಲೂ ಪಶುಗಳಿಂದಲೂ ಐಶ್ವರ್ಯವಂತರಾಗುತ್ತೇವೆ. ನಾವು ಈ ಒಪ್ಪಂದವನ್ನು ಅವರೊಂದಿಗೆ ಮಾಡಿಕೊಂಡರೆ ಅವರು ನಮ್ಮೊಂದಿಗೆ ಇಲ್ಲಿ ವಾಸಿಸುವರು” ಎಂದು ಹೇಳಿದರು.


ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಉಳಿದವರು ಇಷ್ಟೇ ಜನ. ಆ ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು.


ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವದೇಶದ ಉಳಿದೆಲ್ಲ ಜನರು ಆ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಅವರು ಅಸಂಖ್ಯಾತವಾಗಿದ್ದು ಮಿಡತೆಯ ಗುಂಪಿನಂತೆ ಕಂಡರು. ಅವರಲ್ಲಿದ್ದ ಒಂಟೆಗಳೋ ಲೆಕ್ಕವಿಲ್ಲದ ಸಮುದ್ರ ತೀರದ ಮರಳಿನಂತೆ ಎದ್ದುಕಾಣುತ್ತಿದ್ದವು.


ದಾವೀದನು ಆ ಪ್ರದೇಶದ ಜನರೊಂದಿಗೆ ಯುದ್ಧಮಾಡಿ ಯಾರನ್ನೂ ಜೀವಸಹಿತ ಬಿಡಲಿಲ್ಲ. ಅವರಿಗೆ ಸೇರಿದ ಕುರಿಗಳನ್ನು ದನಗಳನ್ನು, ಹೇಸರಕತ್ತೆಗಳನ್ನು, ಒಂಟೆಗಳನ್ನು ಮತ್ತು ಬಟ್ಟೆಗಳನ್ನು ದಾವೀದನು ವಶಪಡಿಸಿಕೊಂಡನು. ನಂತರ ಅವುಗಳನ್ನು ಆಕೀಷನ ಬಳಿಗೆ ತಂದನು.


ಯೋಬನ ಗಂಡುಮಕ್ಕಳು ಯಾವಾಗಲೂ ಸರದಿಯ ಪ್ರಕಾರ ಔತಣಕೂಟಗಳನ್ನು ತಮ್ಮ ಮನೆಗಳಲ್ಲಿ ಏರ್ಪಡಿಸುತ್ತಿದ್ದರು; ಆ ಔತಣಕೂಟಗಳಿಗೆ ತಮ್ಮ ಸಹೋದರಿಯರನ್ನು ಸಹ ಆಹ್ವಾನಿಸುತ್ತಿದ್ದರು.


ನೀನು ಅವನನ್ನೂ ಅವನ ಕುಟುಂಬವನ್ನೂ ಅವನ ಆಸ್ತಿಯನ್ನೂ ಸಂರಕ್ಷಿಸುತ್ತಿರುವೆ. ಅವನ ಕೆಲಸಕಾರ್ಯಗಳನ್ನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲೆಲ್ಲಾ ವೃದ್ಧಿಯಾಗುತ್ತಿದೆ.


‘ನೀತಿವಂತನ ಮನೆಯು ಎಲ್ಲಿದೆ? ದುಷ್ಟನು ವಾಸವಾಗಿರುವುದು ಎಲ್ಲಿ?’ ಎಂದು ನೀವು ಕೇಳಬಹುದು.


ನನ್ನ ಐಶ್ವರ್ಯದಿಂದಲೂ ನಾನು ಗರ್ವಿಷ್ಠನಾಗಲಿಲ್ಲ. ನಾನು ಗಳಿಸಿದ ಅಪಾರ ಹಣವೂ ನನ್ನನ್ನು ಉಲ್ಲಾಸಪಡಿಸಲಿಲ್ಲ.


ನಾನು ಮಾಡಿರುವ ಪ್ರತಿಯೊಂದನ್ನು ದೇವರಿಗೆ ವಿವರಿಸುವೆನು. ನಾನು ಅಧಿಪತಿಯಂತೆ ತಲೆಯೆತ್ತಿಕೊಂಡು ಆತನ ಸಮೀಪಕ್ಕೆ ಬರುವೆನು.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು.


ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಧಿಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಅವರನ್ನು ಸೋಲಿಸಿದನು. ಯೆಹೋವನು ಹೀಗೆನ್ನುತ್ತಾನೆ: “ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. ಪೂರ್ವದಿಕ್ಕಿನ ಜನರನ್ನು ನಾಶಮಾಡಿರಿ.


ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟೆಗಳೂ ಕತ್ತೆಗಳೂ ಇವೆ.


ಯಾಕೋಬನು ಇನ್ನೂರು ಮೇಕೆಗಳನ್ನು, ಇಪ್ಪತ್ತು ಹೋತಗಳನ್ನು, ಇನ್ನೂರು ಕುರಿಗಳನ್ನು ಮತ್ತು ಇಪ್ಪತ್ತು ಟಗರುಗಳನ್ನು ತೆಗೆದುಕೊಂಡನು.


ಶ್ರೀಮಂತನ ಹತ್ತಿರ ಅನೇಕ ಕುರಿಗಳು ಮತ್ತು ದನಗಳು ಇದ್ದವು.


ಶ್ರೀಮಂತರು ಮತ್ತು ಅಧಿಕಾರವುಳ್ಳ ಜನರು ತೆರಿಗೆಯನ್ನು ನೀಡುವಂತೆ ಮಾಡಿ, ಮೆನಹೇಮನು ಈ ಹಣವನ್ನು ಸಂಗ್ರಹಿಸಿದನು. ಮೆನಹೇಮನು ಪ್ರತಿಯೊಬ್ಬ ಮನುಷ್ಯನಿಗೂ ಆರುನೂರು ಗ್ರಾಂ ಬೆಳ್ಳಿಯ ತೆರಿಗೆಯನ್ನು ವಿಧಿಸಿದನು. ನಂತರ ಮೆನಹೇಮನು ಅಶ್ಶೂರದ ರಾಜನಿಗೆ ಹಣವನ್ನು ಕೊಟ್ಟನು. ಆದ್ದರಿಂದ ಅಶ್ಶೂರದ ರಾಜನು ಬಿಟ್ಟುಹೋದನು; ಅವನು ಇಸ್ರೇಲಿನಲ್ಲೇ ನೆಲೆಸಲಿಲ್ಲ.


ಇಷ್ಮಾಯೇಲ್ಯನಾದ ಓಬೀಲನು ಒಂಟೆಗಳ ಮೇಲೆ ಅಧಿಕಾರಿಯಾಗಿದ್ದನು. ಮೇರೊನೋತ್ಯನಾದ ಯೆಹ್ದೆಯು ರಾಜನ ಕತ್ತೆಗಳ ಹಿಂಡಿಗೆ ಅಧಿಕಾರಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು