Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:7 - ಪರಿಶುದ್ದ ಬೈಬಲ್‌

7 ಯೆಹೋವನು ಸೈತಾನನಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಿದ್ದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಸೈತಾನನನ್ನು, “ಎಲ್ಲಿಂದ ಬಂದೆ?” ಎಂದು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಸೈತಾನನನ್ನು ನೋಡಿ, “ಎಲ್ಲಿಂದ ಬಂದೆ?” ಎಂದು ಕೇಳಿದರು. ಅದಕ್ಕೆ ಅವನು, “ಭೂಲೋಕದಲ್ಲಿ ಗಸ್ತುತಿರುಗಿ ಬಂದಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಸೈತಾನನನ್ನು - ಎಲ್ಲಿಂದ ಬಂದಿ ಎಂದು ಕೇಳಲು ಸೈತಾನನು ಯೆಹೋವನಿಗೆ - ಭೂಲೋಕದಲ್ಲಿ ಸಂಚರಿಸುತ್ತಾ ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಕೇಳಿದರು. ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:7
9 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಾ ಬಂದೆನು” ಎಂದು ಉತ್ತರಕೊಟ್ಟನು.


“ದುರಾತ್ಮವು ಮನುಷ್ಯನಿಂದ ಹೊರಗೆ ಬಂದಾಗ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಪ್ರಯಾಣ ಮಾಡುತ್ತದೆ. ಆದರೆ ಆ ದುರಾತ್ಮಕ್ಕೆ ಬೇಕಾದ ವಿಶ್ರಾಂತಿ ಸ್ಥಳ ಸಿಕ್ಕುವುದಿಲ್ಲ.


ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಕೆಂಪು ಮಚ್ಚೆ ಇರುವ ಕುದುರೆಗಳು ತಮಗೆ ನೇಮಕವಾದ ಜಾಗಕ್ಕೆ ಹೋಗಿ ಅದನ್ನು ನೋಡಲು ಆತುರಗೊಂಡಿದ್ದವು. ಆಗ ದೂತನು ಅವುಗಳಿಗೆ, “ಹೋಗಿ, ಭೂಮಿಯ ಮೇಲೆ ಹೋಗಿ ಬನ್ನಿ” ಎಂದು ಹೇಳಿದಾಗ ಅವುಗಳು ಹೋಗಿ ತಮ್ಮ ಪ್ರಾಂತ್ಯದಲ್ಲಿ ನಡೆದಾಡಿದವು.


ಗೇಹಜಿಯು ಒಳಗೆ ಬಂದು ತನ್ನ ಒಡೆಯನಾದ ಎಲೀಷನ ಮುಂದೆ ನಿಂತುಕೊಂಡನು. ಎಲೀಷನು ಗೇಹಜಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಗೇಹಜಿಯು, “ನಾನು ಎಲ್ಲಿಗೂ ಹೋಗಿರಲಿಲ್ಲ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು