Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:1 - ಪರಿಶುದ್ದ ಬೈಬಲ್‌

1 ಯೋಬನು ತನ್ನ ಮಾತನ್ನು ಮುಂದುವರಿಸಿದನು: “ನನ್ನ ಜೀವಿತವೇ ನನಗೆ ಅಸಹ್ಯವಾಗಿದೆ. ಹೃದಯ ಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನನ್ನ ಜೀವನವೇ ನನಗೆ ಬೇಸರವಾಗಿದೆ; ನನ್ನ ದೂರುಗಳನ್ನು ಮನಬಿಚ್ಚಿ ನುಡಿಯುವೆನು; ನನ್ನ ಪ್ರಾಣದ ಕಹಿಯಿಂದ ಮಾತನಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:1
21 ತಿಳಿವುಗಳ ಹೋಲಿಕೆ  

“ಆದ್ದರಿಂದ ನಾನು ಮೌನವಾಗಿರುವುದಿಲ್ಲ, ನಾನು ಮಾತಾಡುವೆನು! ನನ್ನ ಆತ್ಮವು ಸಂಕಟಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರು ಹೇಳುವೆನು.


ನಂತರ ಎಲೀಯನು ಮರಳುಗಾಡಿನಲ್ಲಿ ದಿನವೆಲ್ಲ ನಡೆದನು. ಎಲೀಯನು ಒಂದು ಪೊದೆಯ ಕೆಳಗೆ ಕುಳಿತುಕೊಂಡನು. ಅವನು ಸಾಯಲು ಇಚ್ಛಿಸಿ, “ಯೆಹೋವನೇ, ನನಗೆ ಜೀವನ ಸಾಕಾಗಿದೆ! ಸಾಯಲು ನನಗೆ ಅವಕಾಶ ಮಾಡು. ನಾನು ನನ್ನ ಪೂರ್ವಿಕರಿಗಿಂತಲೂ ಉತ್ತಮನೇನಲ್ಲ” ಎಂದು ಹೇಳಿದನು.


ನೀನು ಹೀಗೆಯೇ ನನಗೆ ಮಾಡುವುದಾಗಿದ್ದರೆ ಅದಕ್ಕೆ ಬದಲಾಗಿ ನನ್ನನ್ನು ಕೊಂದುಬಿಡು ಎಂದು ಬೇಡಿಕೊಳ್ಳುತ್ತೇನೆ. ಆಗ ನಾನು ಈ ದುರವಸ್ಥೆಗಳಿಂದ ವಿಮುಕ್ತನಾಗುವೆನು” ಎಂದು ಹೇಳಿದನು.


ಸೂರ್ಯನು ಆಕಾಶದಲ್ಲಿ ಏರಿ ಬಂದಾಗ ದೇವರು ಪೂರ್ವದ ಬಿಸಿಗಾಳಿ ಬೀಸುವಂತೆ ಮಾಡಿದನು. ಬಿಸಿಲಿನ ತಾಪವು ಯೋನನ ತಲೆಯ ಮೇಲೆ ಹೆಚ್ಚಾಯಿತು. ಯೋನನಿಗೆ ಶಾಖ ತಡೆಯಲಾಗಲಿಲ್ಲ. ಬಹಳ ಬಲಹೀನನಾದನು. ನನ್ನನ್ನು ಸಾಯಿಸು ಎಂದು ಯೋನನು ದೇವರನ್ನು ಬೇಡುತ್ತಾ, “ದೇವರೇ, ನಾನು ಬದುಕುವದಕ್ಕಿಂತ ಸಾಯುವುದೇ ಲೇಸು” ಅಂದನು.


ನಾನು ನಿರಪರಾಧಿಯಾಗಿದ್ದರೂ ನನ್ನ ಬಗ್ಗೆ ಚಿಂತಿಸುವುದಿಲ್ಲ; ನನ್ನ ಜೀವಿತವನ್ನೇ ತುಚ್ಫೀಕರಿಸುವೆನು.


ಬರಗಾಲದಲ್ಲಿ ಮರಣದಿಂದಲೂ ಯುದ್ಧದಲ್ಲಿ ಕತ್ತಿಯಿಂದಲೂ ಆತನು ನಿನ್ನನ್ನು ಸಂರಕ್ಷಿಸುವನು.


ಆದ್ದರಿಂದ ನಾನು ಹೇಳುವುದೇನೆಂದರೆ ನನ್ನ ದೇವರೇ ನೀನು ನನ್ನನ್ನು ಕೊಂದುಬಿಡು. ನಾನು ಬದುಕುವದಕ್ಕಿಂತ ಸಾಯುವುದೇ ಮೇಲು.”


ಇಗೋ, ನನ್ನ ಸಂಕಟವೆಲ್ಲಾ ಹೊರಟುಹೋಯಿತು. ನನಗೀಗ ಸಮಾಧಾನವಿದೆ. ನೀನು ನನ್ನನ್ನು ಬಹಳವಾಗಿ ಪ್ರೀತಿಸುವದರಿಂದ ನನ್ನ ಶರೀರವು ಸಮಾಧಿಯಲ್ಲಿ ಕೊಳೆಯುವಂತೆ ಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ. ನನ್ನ ಪಾಪಗಳನ್ನು ಬಹುದೂರ ಬಿಸಾಡಿದೆ.


ನಾನೇನು ಹೇಳಲಿ? ನನಗೆ ಸಂಭವಿಸಲಿರುವುದನ್ನು ನನ್ನ ಒಡೆಯನು ತಿಳಿಸಿದ್ದಾನೆ. ನನ್ನ ಒಡೆಯನು ಅದನ್ನು ನೆರವೇರಿಸುತ್ತಾನೆ. ನನ್ನ ಆತ್ಮದಲ್ಲಿ ಸಂಕಟಗಳೆಲ್ಲಾ ತುಂಬಿವೆ. ನಾನು ನನ್ನ ಜೀವಮಾನವೆಲ್ಲಾ ದೀನನಾಗುವೆನು.


ಒಂದುವೇಳೆ ನಾನು ಪಾಪಮಾಡಿದ್ದರೂ ಆ ತಪ್ಪು ನನ್ನದೇ.


“ನಿನ್ನ ಕೋಪವು ಇಳಿಯುವ ತನಕ ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟಿದ್ದು, ನೀನು ಗೊತ್ತುಪಡಿಸಿದ ಸಮಯದಲ್ಲಿ ನನ್ನನ್ನು ಜ್ಞಾಪಿಸಿಕೊಂಡಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು.


ನನ್ನ ಜೀವಿತವು ನನಗೆ ಅಸಹ್ಯವಾಗಿದೆ. ಶಾಶ್ವತವಾಗಿ ಬದುಕಲು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು! ನನ್ನ ಜೀವಿತಕ್ಕೆ ಅರ್ಥವೇ ಇಲ್ಲ!


ನನ್ನನ್ನು ಟೀಕೆ ಮಾಡಬೇಕೆಂದಿದ್ದೀರೋ? ಇನ್ನೂ ಕಟುವಾದ ಮಾತುಗಳನ್ನು ಆಡಬೇಕೆಂದಿದ್ದೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು