Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:17 - ಪರಿಶುದ್ದ ಬೈಬಲ್‌

17 ನನ್ನನ್ನು ದೋಷಿಯೆಂದು ನಿರೂಪಿಸಲು ನಿನ್ನ ಬಳಿಯಲ್ಲಿ ಯಾರಾದರೊಬ್ಬರು ಇದ್ದೇ ಇರುವರು. ನಿನ್ನ ಕೋಪವು ನನಗೆ ವಿರೋಧವಾಗಿ ಹೆಚ್ಚೆಚ್ಚಾಗುವುದು. ನೀನು ನನಗೆ ವಿರೋಧವಾಗಿ ಹೊಸ ಸೈನ್ಯಗಳನ್ನು ತರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವುದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನಗೆ ವಿರುದ್ಧ ಹೊಸ ಹೊಸ ಸಾಕ್ಷಿಗಳನ್ನು ಬರಮಾಡುವೆ ನನ್ನ ಮೇಲೆ ಹೆಚ್ಚುಹೆಚ್ಚಾಗಿ ಸಿಟ್ಟುಗೊಳ್ಳುವೆ ಅಲೆಅಲೆಯಾಗಿ ಹಗೆಗಳನ್ನು ನನ್ನ ಮೇಲೆ ಧಾಳಿಮಾಡ ಬಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನಗೆ ವಿರೋಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ತರುತ್ತೀರಿ; ನನ್ನ ಮೇಲೆ ಅಧಿಕಬೇಸರಗೊಳ್ಳುತ್ತೀರಿ; ಅಲೆ ಅಲೆಯಾಗಿ ನಿಮ್ಮ ಸೈನ್ಯವು ನನಗೆ ಎದುರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:17
9 ತಿಳಿವುಗಳ ಹೋಲಿಕೆ  

ನೀನು ನನ್ನನ್ನು ಮುದುಡಿಹಾಕಿರುವುದು ಎಲ್ಲರಿಗೂ ಕಾಣುತ್ತಿದೆ, ನನ್ನ ದೇಹ ರೋಗಗ್ರಸ್ತವಾಗಿದೆ; ನಾನು ವಿಕಾರವಾಗಿ ಕಾಣುತ್ತಿರುವೆ; ಜನರು ನನ್ನನ್ನು ಅಪರಾಧಿಯೆಂದು ಭಾವಿಸಿಕೊಂಡಿದ್ದಾರೆ.


ಇಲ್ಲಿಂದ ಹೋಗುವಾಗ ಭಾಗ್ಯವಂತಳಾಗಿ ಹೋದೆನು; ಆದರೆ ಈಗ ಯೆಹೋವನು ನನ್ನನ್ನು ಬರಿಗೈಯಲ್ಲಿ ಮನೆಗೆ ಕರೆತಂದಿದ್ದಾನೆ. ಯೆಹೋವನು ನನ್ನನ್ನು ದುಃಖಿತಳನ್ನಾಗಿ ಮಾಡಿದ್ದಾನೆ. ಹೀಗಿರುವಾಗ ನೀವೇಕೆ ನನ್ನನ್ನು ‘ನೊವೊಮಿ’ ಎಂದು ಕರೆಯಬೇಕು? ಸರ್ವಶಕ್ತನಾದ ದೇವರು ನನಗೆ ಸಾಕಷ್ಟು ಕಷ್ಟ ಕೊಟ್ಟಿದ್ದಾನೆ” ಎಂದು ಹೇಳಿದಳು.


“ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.


“ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ. ಮೋವಾಬ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದ್ದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಬದಲಾವಣೆಯಾಗಿಲ್ಲ.”


ದೇವರು ನನಗೆ ಕಿವಿಗೊಡುವನು. ಅನಾದಿಕಾಲದ ರಾಜನು ನನಗೆ ಸಹಾಯ ಮಾಡುವನು. ನನ್ನ ವೈರಿಗಳು ತಮ್ಮ ಜೀವಿತಗಳನ್ನು ಪರಿವರ್ತಿಸಿಕೊಳ್ಳುವುದಿಲ್ಲ. ಅವರಿಗೆ ದೇವರಲ್ಲಿ ಭಯಭಕ್ತಿಯಿಲ್ಲ.


“ಭೂಲೋಕದಲ್ಲಿ ಮನುಷ್ಯನಿಗೆ ಬಹು ಪ್ರಯಾಸದ ಕೆಲಸವಿದೆ. ಅವನ ಜೀವನವು ಕೂಲಿ ಕೆಲಸದವನ ಜೀವನದಂತಿದೆ.


ದೇವರೇ, ನೀನೇಕೆ ನನಗೆ ಮರೆಯಾಗಿರುವೆ? ನನ್ನನ್ನೇಕೆ ನಿನ್ನ ಶತ್ರುವೆಂದು ಪರಿಗಣಿಸಿರುವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು