Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:21 - ಪರಿಶುದ್ದ ಬೈಬಲ್‌

21 ಯಾರೂ ಮರಳಿ ಬರಲಾಗದಂಥ ಕತ್ತಲೆಯ ಸ್ಥಳಕ್ಕೂ ಮರಣಾಂಧಕಾರದ ಸ್ಥಳಕ್ಕೂ ಹೋಗುವ ಮೊದಲೇ ನನಗಿರುವ ಅಲ್ಪಕಾಲವನ್ನು ಆನಂದಿಸಲು ಅವಕಾಶಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮರಳಿ ಹಿಂದಿರುಗಲಾಗದ ನಾಡನು ನಾನು ಸೇರಲಿರುವೆ ಅಂಧಕಾರವೂ ಗಾಢಾಂಧಕಾರವೂ ಅಲ್ಲಿ ತುಂಬಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ಅಂಧಕಾರದಿಂದಲೂ ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರಿಗಿ ಬರಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಹಿಂದಿರುಗಲಾಗದ ಮಬ್ಬಾಗಿರುವ ಕತ್ತಲೆಯ ದೇಶಕ್ಕೆ ಸೇರಲಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:21
21 ತಿಳಿವುಗಳ ಹೋಲಿಕೆ  

ಆ ದಿನವನ್ನು ಕತ್ತಲೆಯೂ ಮರಣದ ನೆರಳೂ ವಶಪಡಿಸಿಕೊಳ್ಳಲಿ. ಆ ದಿನವನ್ನು ಮೋಡವು ಕವಿದುಕೊಳ್ಳಲಿ. ನಾನು ಹುಟ್ಟಿದ ದಿನದ ಹಗಲನ್ನು ಗ್ರಹಣಗಳು ಭಯಪಡಿಸಲಿ.


ಆದರೆ ಈಗ ಮಗು ಸತ್ತುಹೋಗಿದೆ. ಆದ್ದರಿಂದ ಈಗ ನಾನೇಕೆ ಉಪವಾಸಮಾಡಬೇಕು? ಆ ಮಗುವಿಗೆ ಮತ್ತೆ ನಾನು ಜೀವವನ್ನು ಕೊಡಲು ಸಾಧ್ಯವೇ? ಇಲ್ಲ! ಎಂದಾದರೂ ಒಂದು ದಿನ ನಾನು ಅವನ ಬಳಿಗೆ ಹೋಗುತ್ತೇನೆ. ಆದರೆ ಅವನು ನನ್ನ ಬಳಿಗೆ ಹಿಂದಿರುಗುವುದಿಲ್ಲ” ಎಂದನು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ.


“ಯಾಕೆಂದರೆ ನಾನು ಮರಳಿ ಬರಲಾಗದ ಸ್ಥಳಕ್ಕೆ ಇನ್ನು ಕೆಲವೇ ವರ್ಷಗಳಲ್ಲಿ ಹೊರಟುಹೋಗುವೆನು.


ನಾವೆಲ್ಲ ಎಂದಾದರೂ ಒಂದು ದಿನ ಸಾಯುತ್ತೇವೆ ಎನ್ನುವುದು ನಿಜ. ನಾವೆಲ್ಲ ನೆಲದ ಮೇಲೆ ಚೆಲ್ಲಿದ ನೀರಿನಂತಿದ್ದೇವೆ. ಈ ನೀರನ್ನು ನೆಲದಿಂದ ಮತ್ತೆ ಒಟ್ಟುಗೂಡಿಸುವುದು ಯಾವ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಆದರೆ ಜೀವವನ್ನು ತೆಗೆದುಬಿಡಲು ದೇವರು ಇಚ್ಛಿಸುವುದಿಲ್ಲ. ಬಲಾತ್ಕಾರವಾಗಿ ಹೊರಗೆ ನೂಕಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನದೇ ಆದ ಉಪಾಯವಿದೆ.


‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.


ಅದಕ್ಕೆ ನಾನೆಂದೆ: “ಇನ್ನು ಮೇಲೆ ಜೀವಿತರ ಲೋಕದಲ್ಲಿ ಇನ್ನು ದೇವರಾದ ಯೆಹೋವನನ್ನು ನೋಡುವದಿಲ್ಲ. ಇನ್ನು ಮೇಲೆ ಜನರು ಲೋಕದಲ್ಲಿ ಜೀವಿಸುವದನ್ನು ನಾನು ನೋಡುವದಿಲ್ಲ.


ನೀನು ನನ್ನನ್ನು ಪಾತಾಳಕ್ಕೆ ದಬ್ಬಿರುವೆ; ನನ್ನನ್ನು ಕತ್ತಲೆಯ ಸ್ಥಳಕ್ಕೆ ನೂಕಿರುವೆ.


ನಾನು ಹುಟ್ಟಿದಾಗಲೇ ಸತ್ತುಹೋಗಿದ್ದರೆ, ಸಮಾಧಾನದಿಂದ ನಿದ್ರೆಮಾಡುತ್ತಿದ್ದೆನು.


ಆ ಸ್ಥಳವು ಕತ್ತಲೆಯಿಂದಲೂ ಮರಣಾಂಧಕಾರದಿಂದಲೂ ಗಲಿಬಿಲಿಯಿಂದಲೂ ಕೂಡಿದೆ. ಅಲ್ಲಿನ ಬೆಳಕು ಸಹ ಕತ್ತಲೆಯೇ!’”


ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ.


ಯೋಬನೇ, ಪಾತಾಳದ ದ್ವಾರಗಳನ್ನಾಗಲಿ ಘೋರಾಂಧಕಾರದ ಬಾಗಿಲುಗಳನ್ನಾಗಲಿ ನೀನು ಎಂದಾದರೂ ನೋಡಿರುವಿಯಾ?


ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯುವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ. ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು!


“ನಾನು ನಿರೀಕ್ಷಿಸುತ್ತಿರುವ ಮನೆಯು ಕೇವಲ ಸಮಾಧಿಯಾಗಿದ್ದರೆ, ನನ್ನ ಹಾಸಿಗೆಯನ್ನು ಕತ್ತಲೆಯಲ್ಲಿ ಹಾಸಿಕೊಂಡಿದ್ದರೆ,


ಅರ್ಥಮಾಡಿಕೊಳ್ಳಲಾರದವನು ಎಷ್ಟೇ ಐಶ್ವರ್ಯವಂತನಾಗಿದ್ದರೂ ಪ್ರಾಣಿಗಳಂತೆಯೇ ನಾಶವಾಗುವನು.


ಯೆಹೋವನೇ, ನಿನ್ನ ಸಹಾಯಕ್ಕಾಗಿ ಮೊರೆಯಿಡುತ್ತಿದ್ದೇನೆ. ಪ್ರತಿ ಮುಂಜಾನೆಯೂ ನಿನಗೆ ಪ್ರಾರ್ಥಿಸುತ್ತಿದ್ದೇನೆ.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ನಿನ್ನ ಜೀವನದ ಪ್ರತಿಯೊಂದು ದಿನದಲ್ಲಿಯೂ ಆನಂದಿಸು. ನೀನು ಎಷ್ಟುಕಾಲ ಬದುಕುವೆ ಎಂಬುದು ಮುಖ್ಯವಲ್ಲ. ಆದರೆ ಕತ್ತಲೆಯ ದಿನಗಳು ಬಹಳವೆಂದು ಜ್ಞಾಪಕದಲ್ಲಿಟ್ಟುಕೊ. ಮುಂದೆ ಸಂಭವಿಸುವುದೆಲ್ಲಾ ವ್ಯರ್ಥವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು