Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:3 - ಪರಿಶುದ್ದ ಬೈಬಲ್‌

3 ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ? ನಿನ್ನ ಸೃಷ್ಟಿಯ ಬಗ್ಗೆ ನೀನು ಚಿಂತಿಸದಂತೆ ತೋರುತ್ತಿದೆ. ದುಷ್ಟರ ಆಲೋಚನೆಗಳಲ್ಲಿ ನಿನಗೆ ಸಂತೋಷವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ, ಬಾಧಿಸುವುದು ನಿನಗೆ ಸಂತೋಷವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ ಬಾಧಿಸುವದು ನಿನಗೆ ಸಂತೋಷವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರೇ, ನಿಮ್ಮ ಕೈಕೃತಿಯಾಗಿರುವ ನನ್ನನ್ನು ಜಜ್ಜುವುದೂ ನಿಮಗೆ ಮೆಚ್ಚಿಕೆಯೋ? ನೀವು ನನ್ನನ್ನು ಅಲಕ್ಷ್ಯ ಮಾಡುವಿರೋ? ನೀವು ದುಷ್ಟರ ಯೋಜನೆಯನ್ನು ಮೆಚ್ಚುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:3
27 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೋ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.


ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!


ದೇವರೇ, ನೀನು ನನ್ನನ್ನು ಕರೆದರೆ, ಉತ್ತರ ಕೊಡುವೆನು. ಆಗ ನಿನ್ನ ಸೃಷ್ಟಿಯಾದ ನನ್ನನ್ನು ನೀನು ಇಷ್ಟಪಡುವೆ.


ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.


ಯೆಹೋವನು ಬಡವರಿಗೂ ನಿಸ್ಸಹಾಯಕರಿಗೂ ಕಿವಿಗೊಡುತ್ತಾನೆ. ಸೆರೆಯಲ್ಲಿರುವ ತನ್ನ ಜನರನ್ನು ಸಹ ಕಡೆಗಣಿಸುವುದಿಲ್ಲ.


“ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವೆಯಾ?


“ಸರ್ವಶಕ್ತನಾದ ದೇವರ ವಿರುದ್ಧ ವ್ಯಾಜ್ಯಹೂಡಿದವನು ಆತನನ್ನು ಸರಿಪಡಿಸಬಲ್ಲನೇ? ದೇವರ ಮೇಲೆ ಅಪವಾದ ಹೊರಿಸುವವನು ಆತನಿಗೆ ಉತ್ತರ ನೀಡಲಿ” ಎಂದನು.


ಆದರೆ ದೇವರು ಅವರ ಮನೆಗಳನ್ನು ಐಶ್ವರ್ಯದಿಂದ ತುಂಬಿಸಿದನು. ಅಬ್ಬಾ! ದುಷ್ಟರ ಆಲೋಚನೆಯನ್ನು ನಾನು ಅನುಸರಿಸಲಾರೆ.


“ತಮ್ಮ ಏಳಿಗೆಗೆ ಕಾರಣ ತಾವೇ ಎಂದು ದುಷ್ಟರು ಯೋಚಿಸಿಕೊಂಡಿದ್ದಾರೆ. ಆದರೆ ಅವರ ಆಲೋಚನೆಗಳನ್ನು ನಾನು ತಿರಸ್ಕರಿಸುವೆ.


ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಇನ್ಯಾರು ಮಾಡಿದರು?


‘ಜೀವಿತದಲ್ಲಿ ಎಲ್ಲರೂ ಒಂದೇ. ಆದ್ದರಿಂದ ಆತನು ಅಪರಾಧಿಗಳನ್ನೂ ನಿರಪರಾಧಿಗಳನ್ನೂ ನಾಶಮಾಡುತ್ತಾನೆ’ ಎಂಬುದು ನನ್ನ ಆಲೋಚನೆ.


ಆದರೆ ದೇವರು ಒಬ್ಬ ನಿರಪರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ.


ನನ್ನನ್ನು ಸೃಷ್ಟಿಸಿದ್ದೂ ನನ್ನ ದೇಹವನ್ನು ರೂಪಿಸಿದ್ದೂ ನಿನ್ನ ಕೈಗಳೇ. ಈಗ ಮನಸ್ಸು ಬೇರೆಮಾಡಿಕೊಂಡು ನೀನು ನನ್ನನ್ನು ನಾಶಮಾಡುತ್ತಿರುವೆ!


ದೇವರು ನನ್ನನ್ನು ದುಷ್ಟರಿಗೆ ಕೊಟ್ಟುಬಿಟ್ಟಿದ್ದಾನೆ. ನನಗೆ ಕೇಡುಮಾಡಲು ಕೆಡುಕರಿಗೆ ಬಿಟ್ಟುಕೊಟ್ಟಿದ್ದಾನೆ.


ಆದರೆ ನನ್ನನ್ನು ದೋಷಿಯೋ ಎಂಬಂತೆ ಮಾಡಿದಾತನು ದೇವರೇ. ಆತನು ನನಗೆ ವಿರೋಧವಾಗಿ ಬಲೆಯನ್ನು ಒಡ್ಡಿದ್ದಾನೆ.


“ದೇವರ ಮೇಲೆ ಆಣೆಯಿಟ್ಟು ಹೇಳುವೆ. ಆತನು ನನಗೆ ನ್ಯಾಯವನ್ನು ದೊರಕಿಸದೆ ನನ್ನ ಜೀವನವನ್ನು ಕಹಿಯನ್ನಾಗಿ ಮಾಡಿದನು.


ದೇವರೇ, ನೀನು ನನ್ನ ಪಾಲಿಗೆ ಕ್ರೂರನಾಗಿಬಿಟ್ಟೆ. ನಿನ್ನ ಶಕ್ತಿಯಿಂದ ನನ್ನನ್ನು ನೋಯಿಸುತ್ತಿರುವೆ.


ದೇವರು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿ ನಿರ್ಮಿಸಿದನು. ದೇವರು ನನ್ನ ಸೇವಕಸೇವಕಿಯರನ್ನೂ ನಿರ್ಮಿಸಿದನು. ದೇವರು ನಮ್ಮೆಲ್ಲರನ್ನು ನಮ್ಮ ತಾಯಂದಿರ ಗರ್ಭಗಳಲ್ಲಿ ರೂಪಿಸಿದನು.


ದೇವರಾತ್ಮನು ನನ್ನನ್ನು ನಿರ್ಮಿಸಿದನು. ಸರ್ವಶಕ್ತನಾದ ದೇವರ ಉಸಿರು ನನಗೆ ಜೀವವನ್ನು ಕೊಟ್ಟಿತು.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ನೀನು ದೇವರ ಮೇಲೆ ಕೋಪಗೊಂಡು ನಿನ್ನ ಬಾಯಿಂದ ಅಂತಹ ಮಾತುಗಳನ್ನು ಸುರಿಸುತ್ತಿರುವೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು