Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:7 - ಪರಿಶುದ್ದ ಬೈಬಲ್‌

7 ಆದರೆ ನಾನು ನಿರಪರಾಧಿಯೆಂದು ನಿನಗೆ ಗೊತ್ತದೆ. ಆದರೆ ಯಾರೂ ನನ್ನನ್ನು ನಿನ್ನ ಶಕ್ತಿಯಿಂದ ಬಿಡಿಸಲಾರರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಅಪರಾಧಿಯಲ್ಲವೆಂದು ನಿನಗೆ ಗೊತ್ತಾಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವಷ್ಟೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ, ನಿಮ್ಮ ಕೈಯಿಂದ ತಪ್ಪಿಸುವವರು ಯಾರೂ ಇಲ್ಲವೆಂದೂ ನಿಮಗೆ ಗೊತ್ತಿದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:7
35 ತಿಳಿವುಗಳ ಹೋಲಿಕೆ  

“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


ವಿಶ್ವಾಸಿಗಳಾದ ನಿಮ್ಮೊಡನೆ ನಾವಿದ್ದಾಗ ತಪ್ಪಿಲ್ಲದವರಾಗಿಯೂ ಪರಿಶುದ್ಧರಾಗಿಯೂ ಮತ್ತು ನಿರ್ದೋಷಿಗಳಾಗಿಯೂ ಜೀವಿಸಿದ್ದೆವು. ಇದು ನಿಜವೆಂಬುದು ನಿಮಗೂ ತಿಳಿದಿದೆ ಮತ್ತು ದೇವರಿಗೂ ತಿಳಿದಿದೆ.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


ಈಗ ನಾನು ಆಕೆಯನ್ನು ಬಟ್ಟೆಯನ್ನು ಬಿಚ್ಚಿಹಾಕುವೆನು. ಆಕೆಯ ಬೆತ್ತಲೆತನವನ್ನು ಆಕೆಯ ಪ್ರಿಯತಮರೆಲ್ಲರೂ ನೋಡುವರು. ನನ್ನ ಕೈಯೊಳಗಿಂದ ಯಾರೂ ಆಕೆಯನ್ನು ರಕ್ಷಿಸಲಾರರು.


ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.


ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ನಿಮ್ಮನ್ನು ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು!


ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.


ನನ್ನ ದೇವರಾದ ಯೆಹೋವನೇ, ನಾನು ಯಾವುದೇ ಅಪರಾಧವನ್ನು ಮಾಡಿದ್ದರೆ,


ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೋ ನಾಶಪಡಿಸುವನು.


ಯೆಹೋವನು ಯೋಬನೊಂದಿಗೆ ಮಾತಾಡಿದ ಮೇಲೆ, ಎಲೀಫಜನೊಂದಿಗೆ ಮಾತಾಡಿದನು. ಎಲೀಫಜನು ತೇಮಾನ್ ಪಟ್ಟಣದವನಾಗಿದ್ದನು. ಯೆಹೋವನು ಎಲೀಫಜನಿಗೆ, “ನಾನು ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ. ಯಾಕೆಂದರೆ ನೀನು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ. ಆದರೆ ಯೋಬನು ನನ್ನ ಬಗ್ಗೆ ಹೇಳಿದವುಗಳು ಸತ್ಯವಾಗಿವೆ. ಯೋಬನು ನನ್ನ ಸೇವಕ.


“ಅಯ್ಯೋ, ನನಗೆ ಕಿವಿಗೊಡುವುದಕ್ಕೆ ಯಾರಾದರೊಬ್ಬರು ಇರಬೇಕಿತ್ತು! ನಾನು ಸತ್ಯವನ್ನೇ ಹೇಳಿದೆನೆಂಬುದಕ್ಕೆ ಇದೋ, ಇಲ್ಲಿದೆ ನನ್ನ ಸಹಿ! ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ. ನನ್ನ ಮೇಲೆ ಅಪವಾದ ಹೊರಿಸುವವನು, ಆಪಾದನೆಯ ಪತ್ರವನ್ನು ಕೊಡಲಿ!


ದೇವರು ನನ್ನನ್ನು ಮುಖಾಮುಖಿಯಾಗಿ ಸಂಧಿಸುವಾಗ ನಾನೇನು ಮಾಡಲಿ? ನಾನು ಮಾಡಿದ್ದಕ್ಕೆ ವಿವರಣೆ ಕೊಡುವಂತೆ ದೇವರು ನನ್ನನ್ನು ಕರೆಯುವಾಗ ನಾನೇನು ಉತ್ತರ ಕೊಡಲಿ?


ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು.


ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು.


“ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ. ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದ್ದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು.


ದೇವರೇ ತೆಗೆದುಕೊಳ್ಳುವುದಾದರೆ, ಆತನನ್ನು ತಡೆಯಬಲ್ಲವರು ಯಾರು? ‘ನೀನು ಏನು ಮಾಡುತ್ತಿರುವೆ’ ಎಂದು ಆತನನ್ನು ಕೇಳುವವರು ಯಾರು?


ನಾನು ನಿರಪರಾಧಿಯಾಗಿದ್ದರೂ ನನ್ನ ಬಗ್ಗೆ ಚಿಂತಿಸುವುದಿಲ್ಲ; ನನ್ನ ಜೀವಿತವನ್ನೇ ತುಚ್ಫೀಕರಿಸುವೆನು.


‘ಜೀವಿತದಲ್ಲಿ ಎಲ್ಲರೂ ಒಂದೇ. ಆದ್ದರಿಂದ ಆತನು ಅಪರಾಧಿಗಳನ್ನೂ ನಿರಪರಾಧಿಗಳನ್ನೂ ನಾಶಮಾಡುತ್ತಾನೆ’ ಎಂಬುದು ನನ್ನ ಆಲೋಚನೆ.


ನಾನು ದೋಷಿಯಾಗಿದ್ದರೆ, ನನ್ನ ಗತಿಯನ್ನು ಏನು ಹೇಳಲಿ? ನಾನು ಸನ್ಮಾರ್ಗಿಯಾಗಿದ್ದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನದಿಂದ ನನ್ನ ತಲೆಯೆತ್ತಲಾರೆ.


ಯೋಬನೇ, ನೀನು ದೇವರಿಗೆ, ‘ನನ್ನ ವಾದಗಳು ಸರಿಯಾಗಿವೆ, ನಿನ್ನ ದೃಷ್ಟಿಯಲ್ಲಿ ನಾನು ಶುದ್ಧನಾಗಿರುವೆ’ ಎಂದು ಹೇಳಿದೆಯಲ್ಲವೇ?


ನನ್ನ ಪರವಾಗಿ ವಾದಿಸಲು ಈಗ ಸಿದ್ಧವಾಗಿದ್ದೇನೆ. ನಾನು ನಿರಪರಾಧಿಯೆಂದು ನನಗೆ ಗೊತ್ತದೆ.


ದುಷ್ಟನು ಬಿರುಗಾಳಿಯ ಶಕ್ತಿಯಿಂದ ಓಡಿಹೋಗಲು ಪ್ರಯತ್ನಿಸುವನು. ಆದರೆ ಬಿರುಗಾಳಿಯು ಕರುಣೆಯಿಲ್ಲದೆ ಅವನಿಗೆ ಬಡಿಯುವುದು.


ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ.


‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ!


“ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವೆಯಾ?


ಆತನ ಮಾರ್ಗದಲ್ಲೇ ನಾನು ನಡೆದಿದ್ದೇನೆ. ನಾನು ಓರೆಯಾಗದೆ ಆತನ ಮಾರ್ಗವನ್ನೇ ಅನುಸರಿಸಿದ್ದೇನೆ.


“ನಾನು ಯಾವಾಗಲೂ ದೇವರಾಗಿದ್ದೇನೆ. ನನ್ನ ಕಾರ್ಯವನ್ನು ತಡೆಯಲು ಯಾರಿಗೆ ಸಾಧ್ಯ? ನನ್ನ ಬಲವಾದ ಹಸ್ತದಿಂದ ಯಾರು ಬಿಡಿಸಬಲ್ಲರು?”


ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು