Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:11 - ಪರಿಶುದ್ದ ಬೈಬಲ್‌

11 ಅಯೋಗ್ಯರು ಯಾರೆಂಬುದು ದೇವರಿಗೆ ಚೆನ್ನಾಗಿ ಗೊತ್ತಿದೆ. ಆತನು ಕೆಟ್ಟದ್ದನ್ನು ಕಂಡಾಗ ಗಮನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನೇ ವ್ಯರ್ಥ ಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡು ಹಿಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆತ ದುರುಳರನು ಗುರುತು ಹಚ್ಚುತ್ತಾನೆ ನೆರವಿಲ್ಲದೆ ಅಕ್ರಮವನು ಕಂಡುಹಿಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನೇ ವ್ಯರ್ಥಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡುಹಿಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಖಂಡಿತವಾಗಿ ದೇವರು ಮೋಸಗಾರರನ್ನು ಗುರುತಿಸುತ್ತಾರೆ; ದೇವರು ದುಷ್ಟತನವನ್ನು ನೋಡಿ ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:11
17 ತಿಳಿವುಗಳ ಹೋಲಿಕೆ  

ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ?


ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ಮನುಷ್ಯರ ಆಲೋಚನೆಗಳೆಲ್ಲಾ ಆತನಿಗೆ ತಿಳಿದಿದೆ. ಮನುಷ್ಯರು ಕೇವಲ ಉಸಿರೆಂಬುದು ಆತನಿಗೆ ತಿಳಿದಿದೆ.


ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.


ಯೆಹೋವನೇ, ಇದೆಲ್ಲವನ್ನೂ ನೀನು ನೋಡಿರುವೆ, ಆದ್ದರಿಂದ ಸುಮ್ಮನಿರಬೇಡ; ನನ್ನ ಕೈಬಿಡಬೇಡ.


ತಾವು ಸುರಕ್ಷಿತವಾಗಿದ್ದೇವೆಂದು ದುಷ್ಟರು ಹೇಳುವುದು ಕೇವಲ ಅಲ್ಪಕಾಲದವರಗಷ್ಟೇ. ಯಾಕೆಂದರೆ ದೇವರು ಅವರನ್ನು ಗಮನಿಸುತ್ತಲೇ ಇರುವನು.


ದೇವರು ಭೂಮಿಯ ಕಟ್ಟಕಡೆಯತನಕ ದೃಷ್ಟಿಸಿ ಆಕಾಶದ ಕೆಳಗಿರುವ ಪ್ರತಿಯೊಂದನ್ನೂ ನೋಡುವವನಾಗಿದ್ದಾನೆ.


ನಾನು ಮಾಡುವ ಪ್ರತಿಯೊಂದು ದೇವರಿಗೆ ಗೊತ್ತು ಮತ್ತು ನಾನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಆತನು ಗಮನಿಸುವನು.


ಯೆಹೋವನು ಪರಲೋಕದಿಂದ ಮನುಷ್ಯರನ್ನು ದೃಷ್ಟಿಸಿ ನೋಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು