Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:13 - ಪರಿಶುದ್ದ ಬೈಬಲ್‌

13 ಯೋಬನೇ, ನಿನ್ನ ಕೈಗಳನ್ನು ಮೇಲೆತ್ತಿ ದೇವರೊಬ್ಬನನ್ನೇ ಆರಾಧಿಸುವುದಕ್ಕಾಗಿ ನಿನ್ನ ಹೃದಯವನ್ನು ಸಿದ್ಧಪಡಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತಿ ಸ್ತುತಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನಂತು ಮನಸ್ಸನ್ನು ತಿರುಗಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆದರೂ ನೀನು ನಿನ್ನ ಹೃದಯವನ್ನು ದೇವರಿಗೆ ಸಮರ್ಪಿಸಿ, ನಿನ್ನ ಕೈಗಳನ್ನು ದೇವರ ಕಡೆಗೆ ಚಾಚಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:13
18 ತಿಳಿವುಗಳ ಹೋಲಿಕೆ  

ನನ್ನ ಕೈಗಳನ್ನು ಮೇಲೆತ್ತಿ ನಿನಗೆ ಪ್ರಾರ್ಥಿಸುವೆನು. ಒಣಭೂಮಿಯು ಮಳೆಗಾಗಿ ಕಾಯುವಂತೆ ನಾನು ನಿನ್ನ ಸಹಾಯಕ್ಕಾಗಿ ಕಾಯುತ್ತಿದ್ದೇನೆ.


ನನ್ನ ಎಲ್ಲಾ ಸಂಕಟಗಳಿಂದ ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ. ಯೆಹೋವನೇ, ನಾನು ನಿನಗೆ ಎಡಬಿಡದೆ ಪ್ರಾರ್ಥಿಸುವೆನು! ನನ್ನ ಕೈಗಳನ್ನು ಎತ್ತಿ ನಿನಗೆ ಪ್ರಾರ್ಥಿಸುವೆನು!


ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.


ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


“ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಆ ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು!


ಅವರು ಈಜಿಪ್ಟಿನಿಂದ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. ದೇವರೇ, ಇಥಿಯೋಪಿಯದವರು ತಮ್ಮ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು.


ಯೋಬನೇ, ನಾನೇನಾದರೂ ನಿನ್ನ ಸ್ಥಿತಿಯಲ್ಲಿದ್ದಿದ್ದರೆ, ದೇವರನ್ನೇ ಆಶ್ರಯಿಸಿಕೊಂಡು ನನ್ನ ಕಷ್ಟವನ್ನು ಆತನಿಗೆ ಹೇಳಿಕೊಳ್ಳುತ್ತಿದ್ದೆನು.


ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.


ರೆಹಬ್ಬಾಮನು ಯೆಹೋವನನ್ನು ಅನುಸರಿಸದೆ ಅವಿಧೇಯನಾಗಿ ಕೆಟ್ಟಕಾರ್ಯಗಳನ್ನು ಮಾಡಿದನು.


“ಇಗೋ ದೇವರು ಯಾವನನ್ನು ಶಿಕ್ಷಿಸುವನೋ ಅವನೇ ಭಾಗ್ಯವಂತನು. ಆದ್ದರಿಂದ ಸರ್ವಶಕ್ತನಾದ ದೇವರು ನಿನ್ನನ್ನು ಶಿಕ್ಷಿಸುವಾಗ ದೂರು ಹೇಳಬೇಡ.”


ಯೋಬನೇ, ನಿನ್ನ ಆಲೋಚನೆಗಳು ನಿನ್ನನ್ನು ಸೆಳೆದುಕೊಂಡು ಹೋಗುವುದೇಕೆ? ನಿನ್ನ ಕಣ್ಣುಗಳು ನಮ್ಮ ಮೇಲೆ ಕಿಡಿಕಿಡಿಯಾಗುವುದೇಕೆ?


ಯೋಬನೇ, ನೀನು ಸರ್ವಶಕ್ತನಾದ ದೇವರಿಗೆ ಅಭಿಮುಖನಾಗಿ ನಿನ್ನ ಮನೆಯಲ್ಲಿರುವ ಪಾಪವನ್ನು ನಿರ್ಮೂಲಮಾಡಿದರೆ ಉದ್ಧಾರವಾಗುವೆ.


ನೀನು ಪ್ರಾರ್ಥಿಸುವೆ, ಆತನು ನಿನಗೆ ಕಿವಿಗೊಡುವನು; ಆತನಿಗೆ ನಿನ್ನ ಹರಕೆಗಳನ್ನು ಸಲ್ಲಿಸುವೆ.


ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು; ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು. ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ.


ಮೋಶೆಯು ಫರೋಹನಿಗೆ, “ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸುವೆನು, ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋಗುವವು. ಭೂಲೋಕವು ಯೆಹೋವನ ಅಧೀನದಲ್ಲಿದೆಯೆಂದು ಆಗ ನೀನು ತಿಳಿದುಕೊಳ್ಳುವೆ.


ಪರಲೋಕದ ದೇವರಿಗೆ ನಮ್ಮ ಹೃದಯಗಳನ್ನೂ ಕೈಗಳನ್ನೂ ಎತ್ತಿಹಿಡಿಯೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು