Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:14 - ಪರಿಶುದ್ದ ಬೈಬಲ್‌

14 ನೀನು ಪಾಪವನ್ನು ಹಿಡಿದುಕೊಂಡಿದ್ದರೆ ಅದನ್ನು ನಿನ್ನಿಂದ ದೂರಮಾಡು. ದುಷ್ಟತನವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ಕೈಯಿಂದ ದೂರವಿರಲಿ ಅಕ್ರಮ ನಿನ್ನ ಗುಡಾರದಲಿ ನೆಲಸದಿರಲಿ ಅನ್ಯಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನ ಕೈಯಲ್ಲಿರುವ ಪಾಪವನ್ನು ದೂರಮಾಡಿಬಿಟ್ಟು, ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಿಸಲು ಅನುಮತಿಸದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:14
13 ತಿಳಿವುಗಳ ಹೋಲಿಕೆ  

ಯೋಬನೇ, ನೀನು ಸರ್ವಶಕ್ತನಾದ ದೇವರಿಗೆ ಅಭಿಮುಖನಾಗಿ ನಿನ್ನ ಮನೆಯಲ್ಲಿರುವ ಪಾಪವನ್ನು ನಿರ್ಮೂಲಮಾಡಿದರೆ ಉದ್ಧಾರವಾಗುವೆ.


ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ?


ದೇವರೇ, ನೀನು ನನಗೆ ಅಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು, ನಾನು ತಪ್ಪು ಮಾಡಿದ್ದರೆ ಅದನ್ನು ಮತ್ತೆ ಮಾಡುವುದಿಲ್ಲ’ ಎಂದು ಹೇಳಬಹುದು.


ನಿನ್ನ ಪಾಪವು ಅತಿಯಾಯಿತು! ಯೋಬನೇ, ನೀನು ಪಾಪಮಾಡುವುದನ್ನು ನಿಲ್ಲಿಸಲೇ ಇಲ್ಲ.


ಯೋಬನೇ, ಆಲೋಚಿಸು: ಎಂದಾದರೂ ನಿರಪರಾಧಿಯು ನಾಶವಾಗಿರುವನೇ? ಎಂದಾದರೂ ಯಥಾರ್ಥವಂತರು ನಾಶವಾಗಿರುವರೇ?


ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು.


ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.


ನೀನು ಶುದ್ಧನೂ ಒಳ್ಳೆಯವನೂ ಆಗಿದ್ದರೆ ಆತನು ಬಂದು ನಿನಗೆ ಸಹಾಯ ಮಾಡುತ್ತಾನೆ; ನಿನ್ನ ಕುಟುಂಬವನ್ನು ನಿನಗೆ ಮತ್ತೆ ದಯಪಾಲಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು