Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:15 - ಪರಿಶುದ್ದ ಬೈಬಲ್‌

15 ಆಗ ನೀನು ಖಂಡಿತವಾಗಿ ನಾಚಿಕೆಯಿಲ್ಲದೆ ತಲೆಯೆತ್ತುವೆ; ಸ್ಥಿರವಾಗಿ ನಿಂತುಕೊಂಡು ನಿರ್ಭಯದಿಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು, ಸ್ಥಿರಚಿತ್ತನೂ, ನಿರ್ಭಯನೂ ಆಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಮಾತ್ರ ನೀನು ತಲೆಯೆತ್ತಬಲ್ಲೆ ಗೌರವದಿಂದ ಸ್ಥಿರಚಿತ್ತನಾಗಿರಬಲ್ಲೆ ನಿರ್ಭಯದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು ಸ್ಥಿರಚಿತ್ತನೂ ನಿರ್ಭಯನೂ ಆಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀನು ದೋಷದಿಂದ ಬಿಡುಗಡೆಯಾಗಿ ನಿನ್ನ ಮುಖವನ್ನು ಎತ್ತುವಿ; ಹೌದು, ನೀನು ಸ್ಥಿರವಾಗಿದ್ದು, ಹೆದರದೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:15
16 ತಿಳಿವುಗಳ ಹೋಲಿಕೆ  

ನೀನು ಸರ್ವಶಕ್ತನಾದ ದೇವರಲ್ಲಿ ಆನಂದಿಸುವೆ. ದೇವರ ಕಡೆಗೆ ಕಣ್ಣೆತ್ತಿ ನೋಡುವೆ.


ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.


ಎಲ್ಲಾ ಸ್ಥಳಗಳಲ್ಲಿ ಪುರುಷರು ಪ್ರಾರ್ಥನೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ತಮ್ಮ ಕೈಗಳನ್ನು ಮೇಲೆತ್ತಿ ಪ್ರಾರ್ಥಿಸುವ ಅವರು ಪರಿಶುದ್ಧರಾಗಿರಬೇಕು. ಅವರು ವಾಗ್ವಾದ ಮಾಡುವವರೂ ಕೋಪಗೊಳ್ಳುವವರೂ ಆಗಿರಬಾರದು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಯೆಹೋವನಲ್ಲಿ ಭಯಭಕ್ತಿಯುಳ್ಳವನು ಕ್ಷೇಮವಾಗಿರುವನು; ಅವನ ಮಕ್ಕಳು ಸಹ ಕ್ಷೇಮವಾಗಿರುವರು.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!


ನಾನು ದೋಷಿಯಾಗಿದ್ದರೆ, ನನ್ನ ಗತಿಯನ್ನು ಏನು ಹೇಳಲಿ? ನಾನು ಸನ್ಮಾರ್ಗಿಯಾಗಿದ್ದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನದಿಂದ ನನ್ನ ತಲೆಯೆತ್ತಲಾರೆ.


ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು.


ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.


ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು