Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:16 - ಪರಿಶುದ್ದ ಬೈಬಲ್‌

16 ಯೋಬನೇ, ಆಗ ನೀನು ನಿನ್ನ ಕಷ್ಟವನ್ನು ಮರೆತುಬಿಡುವೆ; ಹರಿದುಹೋದ ನೀರನ್ನೋ ಎಂಬಂತೆ ನಿನ್ನ ಕಷ್ಟಗಳನ್ನು ಜ್ಞಾಪಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮರೆತುಬಿಡುವೆ ಆಗ ನಿನ್ನ ಕಷ್ಟದುಃಖವನ್ನು ನಿನ್ನ ನೆನಪಿಗೆ ಅದು ಹರಿದುಹೋದ ನೀರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಖಂಡಿತವಾಗಿ ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:16
12 ತಿಳಿವುಗಳ ಹೋಲಿಕೆ  

“ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತುಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.”


“ಗರ್ಭಿಣಿ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ. ಮಗುವು ಜನಿಸಿದಾಗ, ಲೋಕದಲ್ಲಿ ಮಗುವೊಂದು ಜನಿಸಿತೆಂಬ ಸಂತೋಷದಿಂದ ಆಕೆ ಆ ವೇದನೆಯನ್ನು ಮರೆತುಬಿಡುತ್ತಾಳೆ.


ತನ್ನ ಜೀವಿತವು ಅಲ್ಪಕಾಲದ್ದೆಂದು ಅವನು ನೆನಪುಮಾಡಿಕೊಳ್ಳಬೇಕು. ಯಾಕೆಂದರೆ ಅವನನ್ನು ಅವನಿಗೆ ಇಷ್ಟವಾದ ಕೆಲಸದಲ್ಲಿ ನಿರತನನ್ನಾಗಿ ಮಾಡಿರುವಾತನು ದೇವರೇ.


ದೇವರು ಹೇಳುವುದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.”


ಹೆದರಬೇಡ, ನೀನು ನಿರಾಶಳಾಗುವದಿಲ್ಲ. ಜನರು ನಿನ್ನ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀನು ಬೇಸರಗೊಳ್ಳುವದಿಲ್ಲ. ನೀನು ಯೌವ್ವನಸ್ಥಳಾಗಿರುವಾಗ ನಿನಗೆ ನಾಚಿಕೆಯಾಯಿತು. ಆದರೆ ಈಗ ನೀನು ಆ ನಾಚಿಕೆಯನ್ನು ಮರೆತುಬಿಟ್ಟವಳಾಗಿದ್ದಿ. ನಿನ್ನ ಗಂಡನನ್ನು ನೀನು ಕಳೆದುಕೊಂಡಾಗ ನೀನು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.


ಆಗ ಅವರು ಕುಡಿದು, ತಮ್ಮ ಬಡತನವನ್ನು ಮರೆತುಬಿಡುವರು, ಅವರು ಕುಡಿದು ತಮ್ಮ ಕಷ್ಟಗಳನ್ನೆಲ್ಲಾ ಮರೆತುಬಿಡುವರು.


ಆದಕಾರಣ ನಿನಗೆ ಏನೂ ಕಾಣಲಾಗದಷ್ಟು ಕತ್ತಲಾಗಿದೆ, ಪ್ರವಾಹದ ನೀರು ನಿನ್ನನ್ನು ಆವರಿಸಿಕೊಂಡಿದೆ.


ಆದರೆ ನನ್ನ ಸಹೋದರರಾದ ನೀವು ನಂಬಿಗಸ್ತರಲ್ಲ. ನಾನು ನಿಮ್ಮನ್ನು ಆಶ್ರಯಿಸಿಕೊಳ್ಳಲಾರೆ. ಕೆಲವೊಮ್ಮೆ ಹರಿಯುವ, ಕೆಲವೊಮ್ಮೆ ಹರಿಯದಿರುವ ತೊರೆಗಳಂತೆ ನೀವು ದ್ರೋಹಿಗಳಾಗಿದ್ದೀರಿ.


ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಆ ಮಗುವಿಗೆ, “ಮನಸ್ಸೆ” ಎಂದು ಹೆಸರಿಟ್ಟನು.


ನಾನು ನಿಮಗೆ ಮಾಡುವ ವಾಗ್ದಾನವೇನೆಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು