Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:10 - ಪರಿಶುದ್ದ ಬೈಬಲ್‌

10 ಪ್ರತಿಯೊಂದು ಪ್ರಾಣಿಯ ಜೀವವೂ ಪ್ರತಿಯೊಬ್ಬ ವ್ಯಕ್ತಿಯ ಆತ್ಮವೂ ದೇವರ ಕೈಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪ್ರತಿಪ್ರಾಣಿಯ ಪ್ರಾಣವೂ ಸಮಸ್ತಮನುಷ್ಯರ ಆತ್ಮಗಳೂ ಆತನ ಕೈಯಲ್ಲಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರ ಕೈಯಲ್ಲಿ ಎಲ್ಲಾ ಜೀವಿಗಳ ಪ್ರಾಣವೂ ಎಲ್ಲಾ ಮನುಷ್ಯರ ಶ್ವಾಸವೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:10
17 ತಿಳಿವುಗಳ ಹೋಲಿಕೆ  

ನಾವು ಆತನೊಂದಿಗೆ ವಾಸಿಸುತ್ತೇವೆ, ನಡೆಯುತ್ತೇವೆ, ಇರುತ್ತೇವೆ. ನಿಮ್ಮವರೇ ಆದ ಕೆಲವು ಲೇಖಕರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.


ದೇವರಾತ್ಮನು ನನ್ನನ್ನು ನಿರ್ಮಿಸಿದನು. ಸರ್ವಶಕ್ತನಾದ ದೇವರ ಉಸಿರು ನನಗೆ ಜೀವವನ್ನು ಕೊಟ್ಟಿತು.


ಮನುಷ್ಯರಿಗೆ ಜೀವವನ್ನೂ ಉಸಿರನ್ನೂ ಸಮಸ್ತವನ್ನೂ ಕೊಡುವಾತನು ಆ ದೇವರೇ. ಆತನಿಗೆ ಜನರ ಸೇವೆಯ ಅಗತ್ಯವೇನೂ ಇಲ್ಲ. ಆತನಿಗೆ ಕೊರತೆಯೆಂಬುದೂ ಇಲ್ಲ.


ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.


ಆದರೆ ಜೀವವು ನನ್ನೊಳಗಿರುವ ತನಕ, ದೇವರ ಜೀವಶ್ವಾಸವು ನನ್ನ ಮೂಗಿನಲ್ಲಿ ಇರುವವರೆಗೆ,


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


ನೀನು ಅವುಗಳಿಗೆ ವಿಮುಖನಾದಾಗ ಅವು ಭಯಗೊಳ್ಳುತ್ತವೆ. ಅವುಗಳ ಶ್ವಾಸವು ಹೋಗಿ ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ.


ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.


ದೇಹವು ಮಾನುಷ ತಂದೆತಾಯಿಗಳಿಂದ ಹುಟ್ಟಿದ್ದು. ಆದರೆ ಆತ್ಮಿಕ ಜೀವನವು ಆತ್ಮನಿಂದ ಹುಟ್ಟಿದ್ದು.


“ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.


ದೈವಿಕನಲ್ಲದವನ ಜೀವವನ್ನು ದೇವರು ತೆಗೆದುಹಾಕುವಾಗ ಅವನಿಗೆ ನಿರೀಕ್ಷೆಯೇ ಇರುವುದಿಲ್ಲ.


ನಾನು ಇವೆಲ್ಲವುಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಆಲೋಚಿಸಿದೆ. ಒಳ್ಳೆಯವರಿಗೂ ಜ್ಞಾನಿಗಳಿಗೂ ಅವರ ಕಾರ್ಯಗಳಿಗೂ ಸಂಭವಿಸುವುದೆಲ್ಲಾ ದೇವರ ಹತೋಟಿಯಲ್ಲಿದೆ. ತಾವು ಪ್ರೀತಿಗೆ ಗುರಿಯಾಗುವರೋ ದ್ವೇಷಕ್ಕೆ ಗುರಿಯಾಗುವರೋ ಅವರಿಗೆ ಗೊತ್ತಿಲ್ಲ. ಮುಂದೆ ಸಂಭವಿಸುವುದೂ ಅವರಿಗೆ ಗೊತ್ತಿಲ್ಲ.


ನಿಜದೇವರಾದ ಯೆಹೋವನು ಹೀಗೆನ್ನುತ್ತಾನೆ: ಆಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗೆಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.


ನಿನ್ನ ಜೀವಶ್ವಾಸವನ್ನು ಊದುವಾಗ ಅವು ಸೃಷ್ಟಿಯಾಗುತ್ತವೆ. ನೀನು ಭೂಮಿಯನ್ನು ಮತ್ತೆ ನೂತನ ಪಡಿಸುವೆ.


ನಾನು ನಿತ್ಯಕಾಲಕ್ಕೂ ಯುದ್ಧ ಮಾಡುವವನಲ್ಲ. ನಾನು ಎಂದೆಂದಿಗೂ ಕೋಪಗೊಳ್ಳುವವನಲ್ಲ. ನಾನು ಹಾಗೆ ಮಾಡುವವನಾದರೆ ನಾನು ಕೊಟ್ಟಿರುವ ಮನುಷ್ಯನ ಆತ್ಮವು ನನ್ನ ಮುಂದೆಯೇ ಸಾಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು