Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:24 - ಪರಿಶುದ್ದ ಬೈಬಲ್‌

24 ದೇವರು ಭೂಲೋಕದ ನಾಯಕರುಗಳನ್ನು ಮೂಢರನ್ನಾಗಿ ಮಾಡುವನು; ರಸ್ತೆಯಿಲ್ಲದ ಮರಳುಗಾಡಿನಲ್ಲಿ ಅವರನ್ನು ಅಲೆದಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಭೂಪತಿಗಳನ್ನು ಬುದ್ಧಿಹೀನರನ್ನಾಗಿಸುತ್ತಾನೆ ದಾರಿಕಾಣದ ಅರಣ್ಯದಲಿ ಅಲೆದಾಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವರು ಭೂಮಿಯ ಮುಖ್ಯಸ್ಥರ ವಿವೇಚನೆಯನ್ನು ತೆಗೆದುಬಿಡುತ್ತಾರೆ; ಅಂಥವರು ಮಾರ್ಗವಿಲ್ಲದ ಅಲೆಯ ಮಾಡುವುದೂ ದೇವರಿಗೆ ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:24
12 ತಿಳಿವುಗಳ ಹೋಲಿಕೆ  

ಆತನು ಅವರ ನಾಯಕರುಗಳಿಗೆ ಅವಮಾನ ಮಾಡಿದನು; ದಾರಿಗಳಿಲ್ಲದ ಅರಣ್ಯದಲ್ಲಿ ಅಲೆದಾಡುವಂತೆ ಅವರನ್ನು ತೊರೆದುಬಿಟ್ಟನು.


ದೇವರು ವಿಶ್ವಾಸನೀಯವಾದ ಆಲೋಚನಾಗಾರರನ್ನು ಮೌನಗೊಳಿಸುವನು; ಹಿರಿಯರ ವಿವೇಕವನ್ನು ತೆಗೆದುಹಾಕುವನು.


ಹೀಗೆ ಎಫ್ರಾಯೀಮ್ ತಿಳಿವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶ್ಶೂರ್ಯದ ಕಡೆಗೆ ಓಡಿದರು.


ಆ ಮಾತುಗಳು ತಕ್ಷಣ ನೆರವೇರಿದವು. ನೆಬೂಕದ್ನೆಚ್ಚರನು ಜನರನ್ನು ಬಿಟ್ಟುಹೋಗಬೇಕಾಯಿತು. ಅವನು ಹಸುಗಳಂತೆ ಹುಲ್ಲು ತಿನ್ನತೊಡಗಿದನು. ಅವನು ಇಬ್ಬನಿಯಿಂದ ನೆನೆದನು. ಅವನ ಕೂದಲುಗಳು ಹದ್ದಿನ ಗರಿಗಳಂತೆ ಬೆಳೆದವು. ಅವನ ಉಗುರುಗಳು ಪಕ್ಷಿಗಳ ಉಗುರುಗಳಂತೆ ಬೆಳೆದವು.


ಅದು ಮನುಷ್ಯನಂತೆ ವಿಚಾರ ಮಾಡುವುದನ್ನು ಬಿಟ್ಟು ಪ್ರಾಣಿಯಂತೆ ವಿಚಾರ ಮಾಡತೊಡಗಲಿ. ಅದು ಈ ಸ್ಥಿತಿಯಲ್ಲಿ ಏಳು ವರ್ಷವಿರಲಿ’ ಎಂದು ಹೇಳಿದನು.


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು. ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ.


ನೀನು ನನ್ನ ಸ್ನೇಹಿತರ ಮನಸ್ಸುಗಳನ್ನು ಮುಚ್ಚಿಬಿಟ್ಟಿರುವೆ; ಅವರು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಅವರಿಗೆ ಜಯವಾಗದಂತೆ ನೋಡಿಕೊ.


ಆ ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ.


ಆ ಮರದ ಎಲೆಗಳು ಸುಂದರವಾಗಿದ್ದವು. ಅದು ತುಂಬ ಒಳ್ಳೆಯ ಹಣ್ಣುಗಳನ್ನು ಫಲಿಸಿತ್ತು. ಆ ಮರದಲ್ಲಿ ಪ್ರತಿಯೊಬ್ಬರಿಗೂ ಸಾಕಾಗುವಷ್ಟು ಆಹಾರವಿತ್ತು. ಕಾಡುಪ್ರಾಣಿಗಳೂ ಆ ಮರದ ಕೆಳಗೆ ಆಶ್ರಯವನ್ನು ಪಡೆದಿದ್ದವು. ಅದರ ಕೊಂಬೆಗಳಲ್ಲಿ ಪಕ್ಷಿಗಳು ವಾಸಮಾಡಿಕೊಂಡಿದ್ದವು. ಪ್ರತಿಯೊಂದು ಪ್ರಾಣಿಗೂ ಆ ಮರದಿಂದ ಆಹಾರ ಸಿಕ್ಕುತ್ತಿತ್ತು.


“ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡು ನನ್ನ ದರ್ಶನದಲ್ಲಿ ಅದೆಲ್ಲವನ್ನು ನೋಡುತ್ತಿದ್ದೆ. ಆಗ ಪವಿತ್ರ ದೇವದೂತನೊಬ್ಬನು ಆಕಾಶದಿಂದ ಕೆಳಗಿಳಿದು ಬರುವುದನ್ನು ಕಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು