Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:12 - ಪರಿಶುದ್ದ ಬೈಬಲ್‌

12 ನೀವಾಡುವ ಸ್ಮರಣೀಯ ನುಡಿಗಳು ಬೂದಿಗೆ ಸಮಾನವಾಗಿವೆ. ನಿಮ್ಮ ವಾದಗಳು ಮಣ್ಣಿನಷ್ಟೇ ಬಲಹೀನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮ್ಮ ಸ್ಮೃತಿಗಳು ಬೂದಿಗೆ ಸಮಾನವಾದ ಉದಾಹರಣೆ; ನಿಮ್ಮ ಕೋಟೆಯು ಬರೀ ಮಣ್ಣಿನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿಮ್ಮ ಸ್ಮೃತಿಗಳು ಬೂದಿಯ ಸಾಮತಿಗಳು ನಿಮ್ಮ ವಾದಗಳು ಮಣ್ಣಿನ ಗೋಡೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮ್ಮ ಸ್ಮೃತಿಗಳು ಬೂದಿಯ ಸಾಮತಿಗಳು; ನಿಮ್ಮ ಕೋಟೆಯು ಬರೀ ಮಣ್ಣಿನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ನೀತಿವಚನಗಳು ಬೂದಿಯ ಗಾದೆಗಳು; ನಿಮ್ಮ ವಾದಗಳು ಬರೀ ಮಣ್ಣಿನ ಗೋಡೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:12
16 ತಿಳಿವುಗಳ ಹೋಲಿಕೆ  

ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.


ಇತರ ದೇವರುಗಳಿಗೆ ಜೀವವಿಲ್ಲ. ಪ್ರೇತಗಳು ಸತ್ತವರೊಳಗಿಂದ ಏಳುವದಿಲ್ಲ. ನೀನು ಅವುಗಳನ್ನು ನಾಶಮಾಡಲು ತೀರ್ಮಾನಿಸಿದೆ. ಅದರ ಬಗ್ಗೆ ನಮಗೆ ನೆನಪು ಹುಟ್ಟಿಸುವ ಎಲ್ಲಾ ವಿಚಾರಗಳನ್ನು ನೀನು ನಾಶಮಾಡಿದೆ.


ನೀತಿವಂತರ ನೆನಪು ಆಶೀರ್ವಾದದಾಯಕ. ಕೆಡುಕರಾದರೋ ಬಹುಬೇಗನೆ ಮರೆಯಲ್ಪಡುವರು.


ಆ ಪಾಪಗಳನ್ನು ಯೆಹೋವನು ಯಾವಾಗಲೂ ಜ್ಞಾಪಕಮಾಡಿಕೊಳ್ಳಲಿ; ಭೂಮಿಯ ಮೇಲೆ ಅವರ ನೆನಪೇ ಉಳಿಯದಂತೆ ಯೆಹೋವನು ಮಾಡಲಿ.


ಯೆಹೋವನೇ, ನೀನಾದರೋ ಎಂದೆಂದಿಗೂ ಜೀವಿಸುವೆ! ನಿನ್ನ ಹೆಸರು ಶಾಶ್ವತವಾದದ್ದು!


ಕೆಡುಕರಿಗಾದರೋ ಯೆಹೋವನು ವಿರೋಧವಾಗಿರುವನು. ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು.


ಭೂಮಿಯ ಮೇಲಿರುವ ಜನರು ಅವನನ್ನು ಜ್ಞಾಪಿಸಿಕೊಳ್ಳುವುದಿಲ್ಲ; ಇನ್ನು ಮೇಲೆ ಅವನನ್ನು ಯಾರೂ ಜ್ಞಾಪಿಸಿಕೊಳ್ಳುವುದಿಲ್ಲ.


ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು!


ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.


ಆಗ ಅಬ್ರಹಾಮನು ಯೆಹೋವನಿಗೆ, “ನಿನಗೆ ನನ್ನನ್ನು ಹೋಲಿಸಿಕೊಂಡರೆ, ನಾನು ಕೇವಲ ಧೂಳು ಮತ್ತು ಬೂದಿ. ಆದರೆ ಈ ಪ್ರಶ್ನೆಯನ್ನೂ ಕೇಳಲು ನನಗೆ ಅವಕಾಶಕೊಡು.


ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.


ಆತನ ಪ್ರಕಾಶಮಾನವಾದ ಮಹಿಮೆಯು ನಿಮ್ಮನ್ನು ಹೆದರಿಸುವುದಿಲ್ಲವೇ? ನೀವು ಆತನಿಗೆ ಭಯಪಡುವುದಿಲ್ಲವೇ?


“ಸುಮ್ಮನಿರಿ, ಮಾತಾಡಲು ನನಗೆ ಅವಕಾಶ ಕೊಡಿ! ನನಗೆ ಏನಾಗಬೇಕೋ ಆಗಲಿ.


ಬಳಿಕ ಯೋಬನು ತನ್ನ ಮಾತನ್ನು ಮುಂದುವರಿಸಿದನು:


ಯೋಬನು ಮಾತನ್ನು ಮುಂದುವರಿಸಿ ಹೀಗೆಂದನು:


“ಆದ್ದರಿಂದ ನೀವು ನಿಮ್ಮ ಬರಿದಾದ ಮಾತುಗಳಿಂದ ನನ್ನನ್ನು ಸಂತೈಸಲಾರಿರಿ. ನಿಮ್ಮ ಉತ್ತರಗಳು ಕೇವಲ ಸುಳ್ಳೇ ಆಗಿವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು