Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:19 - ಪರಿಶುದ್ದ ಬೈಬಲ್‌

19 ನಾನು ತಪ್ಪಿತಸ್ಥನೆಂದು ಯಾವನೂ ನಿರೂಪಿಸಲಾರನು. ನಿರೂಪಿಸಬಲ್ಲವನಿದ್ದರೆ ಬಾಯಿ ಮುಚ್ಚಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೇವಾ, ನನ್ನ ಮೇಲೆ ಆಪಾದನೆ ಹೊರಿಸಲು ಬರುವೆಯಾ? ಹಾಗಾದರೆ ಮೌನತಾಳಿ ನಾ ಮಾಡುವೆ ಪ್ರಾಣತ್ಯಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ ಸುಮ್ಮನಾಗಿ ಪ್ರಾಣಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾರಾದರೂ ನನ್ನ ವಿರುದ್ಧ ದೂರನ್ನು ತರಬಹುದೋ? ಹಾಗಿದ್ದರೆ ನಾನು ಮೌನವಾಗಿದ್ದು ಸತ್ತು ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:19
13 ತಿಳಿವುಗಳ ಹೋಲಿಕೆ  

ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ.


ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.


ಯೋಬನೇ, ನೀನು ಏನಾದರೂ ಹೇಳಬೇಕೆಂದಿದ್ದರೆ, ಅದನ್ನು ನಾನು ಕೇಳುವಂತಾಗಲಿ. ಮುನ್ನಡೆದು ಮಾತಾಡು, ಯಾಕೆಂದರೆ ನಿನ್ನನ್ನು ನೀತಿವಂತನೆಂದು ಸ್ಥಾಪಿಸಲು ನನಗೆ ಸಂತೋಷ.


ನಿಮ್ಮನ್ನು ನನಗಿಂತಲೂ ಉತ್ತಮರೆಂದು ತೋರಿಸಿಕೊಳ್ಳಬೇಕೆಂದಿದ್ದೀರಿ; ನನ್ನ ತೊಂದರೆಗಳೇ ನನ್ನನ್ನು ದೋಷಿಯೆಂದು ನಿರೂಪಿಸುತ್ತವೆಯೆಂದು ಭಾವಿಸಿಕೊಂಡಿದ್ದೀರಿ.


“ಸುಮ್ಮನಿರಿ, ಮಾತಾಡಲು ನನಗೆ ಅವಕಾಶ ಕೊಡಿ! ನನಗೆ ಏನಾಗಬೇಕೋ ಆಗಲಿ.


ನನ್ನನ್ನು ಸೃಷ್ಟಿಸಿದ್ದೂ ನನ್ನ ದೇಹವನ್ನು ರೂಪಿಸಿದ್ದೂ ನಿನ್ನ ಕೈಗಳೇ. ಈಗ ಮನಸ್ಸು ಬೇರೆಮಾಡಿಕೊಂಡು ನೀನು ನನ್ನನ್ನು ನಾಶಮಾಡುತ್ತಿರುವೆ!


“ಆದ್ದರಿಂದ ನಾನು ಮೌನವಾಗಿರುವುದಿಲ್ಲ, ನಾನು ಮಾತಾಡುವೆನು! ನನ್ನ ಆತ್ಮವು ಸಂಕಟಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರು ಹೇಳುವೆನು.


ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”


ಒಬ್ಬನು ದೇವರೊಂದಿಗೆ ವಾದಿಸಬಯಸಿದರೆ, ದೇವರ ಸಾವಿರ ಪ್ರಶ್ನೆಗಳಲ್ಲಿ ಮನುಷ್ಯನು ಒಂದಕ್ಕೂ ಉತ್ತರ ಕೊಡಲಾರನು.


“ದೇವರೇ, ನನಗಾಗಿ ಎರಡು ಕಾರ್ಯಗಳನ್ನು ಮಾಡಬೇಡ, ಆಗ ನನ್ನನ್ನು ನಿನಗೆ ಮರೆಮಾಡಿಕೊಳ್ಳುವುದಿಲ್ಲ.


ಆದರೆ ನನ್ನ ಒಡೆಯನು ಸಹಾಯ ಮಾಡುತ್ತಾನೆ. ಯಾರೂ ನನ್ನ ಮೇಲೆ ದೋಷಾರೋಪಣೆ ಹೊರಿಸಲಾಗದು. ಈ ಜನರೆಲ್ಲರೂ ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವರು, ನುಸಿಯು ಅವುಗಳನ್ನು ತಿಂದುಬಿಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು