Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:1 - ಪರಿಶುದ್ದ ಬೈಬಲ್‌

1 ಯೋಬನು ಹೇಳಿದನು: “ನಾವು ಮನುಷ್ಯರಷ್ಟೇ. ನಮ್ಮ ಅಲ್ಪಜೀವಿತವು ಕಷ್ಟಗಳಿಂದ ತುಂಬಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸ್ತ್ರೀಯಲ್ಲಿ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನಾಗಿಯೂ ಕಳವಳದಿಂದ ತುಂಬಿದವನಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನೂ, ಕಷ್ಟಸಂಕಟಗಳಿಂದ ತುಂಬಿದವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:1
20 ತಿಳಿವುಗಳ ಹೋಲಿಕೆ  

ಆದರೆ ಮನುಷ್ಯರಿಂದ ಕೇಡುಗಳು ಉದ್ಭವಿಸುವುದೂ ಬೆಂಕಿಯಿಂದ ಕಿಡಿಗಳು ಮೇಲಕ್ಕೆ ಹಾರುವುದೂ ಸಹಜ.


ಅವನ ಜೀವಮಾನವೆಲ್ಲಾ ಅವನಿಗೆ ವ್ಯಸನವಿರುವುದು; ಕೆಲಸದಲ್ಲೆಲ್ಲಾ ಕಷ್ಟವಿರುವುದು; ರಾತ್ರಿಯಲ್ಲಿಯೂ ಮನಸ್ಸಿಗೆ ವಿಶ್ರಾಂತಿಯಿರದು. ಇದೂ ವ್ಯರ್ಥವೇ.


ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.


“ಭೂಲೋಕದಲ್ಲಿ ಮನುಷ್ಯನಿಗೆ ಬಹು ಪ್ರಯಾಸದ ಕೆಲಸವಿದೆ. ಅವನ ಜೀವನವು ಕೂಲಿ ಕೆಲಸದವನ ಜೀವನದಂತಿದೆ.


ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.


“ಸ್ನಾನಿಕ ಯೋಹಾನನು ಹಿಂದೆ ಜೀವಿಸಿದ್ದವರಿಗಿಂತ ದೊಡ್ಡವನು. ಆದರೆ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಸಹ ಯೋಹಾನನಿಗಿಂತಲೂ ಹೆಚ್ಚಿನವನಾಗಿದ್ದಾನೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಹುಟ್ಟಿದಂದಿನಿಂದ ನಾನು ಪಾಪಿಯೇ. ಮಾತೃಗರ್ಭವನ್ನು ಪ್ರವೇಶಿಸಿದ ದಿನದಿಂದ ನಾನು ದ್ರೋಹಿಯೇ.


“ಮನುಷ್ಯನು ಎಷ್ಟರವನು? ಅವನು ಪರಿಶುದ್ಧನಾಗಿರಲು ಸಾಧ್ಯವೇ? ಸ್ತ್ರೀಯಲ್ಲಿ ಹುಟ್ಟಿದವನು ನೀತಿವಂತನಾಗಿರಲು ಸಾಧ್ಯವೇ?


“ನನ್ನ ದಿನಗಳು ಓಟಗಾರನಿಗಿಂತಲೂ ವೇಗವಾಗಿ ಹೋಗುತ್ತಿವೆ. ಸುಖವಿಲ್ಲದ ನನ್ನ ದಿನಗಳು ಹಾರಿಹೋಗುತ್ತಿವೆ.


“ನನ್ನ ದಿನಗಳು ಮಗ್ಗದ ಲಾಳಿಗಿಂತಲೂ ವೇಗವಾಗಿ ಹೋಗುತ್ತವೆ. ನನ್ನ ಜೀವಿತವು ನಿರೀಕ್ಷೆಯಿಲ್ಲದೆ ಕೊನೆಗೊಳ್ಳುವುದು.


ಈ ಲೋಕದ ಕಾರ್ಯಗಳೆಲ್ಲಾ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ನನಗೆ ಕಂಡುಬಂದದ್ದರಿಂದ ಜೀವನವೇ ನನಗೆ ಅಸಹ್ಯವಾಯಿತು.


ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ. ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು. ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ. ಯಾವನೂ ಸದಾಕಾಲ ಬದುಕುವುದಿಲ್ಲ!


ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.


ನನ್ನ ಜೀವಿತವು ಬಹುಮಟ್ಟಿಗೆ ಮುಗಿದುಹೋಗಿದೆ. ಆದ್ದರಿಂದ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು!


ನಮ್ಮ ಜೀವಿತಕಾಲ ಸ್ವಲ್ಪವೆಂಬುದನ್ನು ಜ್ಞಾಪಿಸಿಕೊ. ನಾವು ಸ್ವಲ್ಪಕಾಲ ಬದುಕಿ ಸಾಯುವುದಕ್ಕಾಗಿಯೇ ನೀನು ನಮ್ಮನ್ನು ಸೃಷ್ಟಿಸಿದೆ.


ನಾನು ತಾಯಿಯ ಗರ್ಭದಿಂದ ಏಕೆ ಹೊರಬರಬೇಕಿತ್ತು? ನಾನು ಕಷ್ಟವನ್ನು ಮತ್ತು ದುಃಖವನ್ನು ಕಂಡಿರುವೆನಷ್ಟೇ. ನನ್ನ ಜೀವನವು ನಾಚಿಕೆಯಲ್ಲಿಯೇ ಕೊನೆಗೊಳ್ಳುವುದು.


ಈ ಬಾಲಕನು ತನ್ನ ತಂದೆಗೆ, “ಅಯ್ಯೋ, ನನ್ನ ತಲೆ ನೋಯುತ್ತಿದೆ! ನನ್ನ ತಲೆ ನೋಯುತ್ತಿದೆ!” ಎಂದು ಹೇಳಿದನು. ತಂದೆಯು ತನ್ನ ಸೇವಕನಿಗೆ, “ಅವನ ತಾಯಿಯ ಬಳಿಗೆ ಅವನನ್ನು ಕೊಂಡೊಯ್ಯಿ” ಎಂದು ಹೇಳಿದನು.


ಯಾಕೆಂದರೆ, ನಾವು ಕೇವಲ ನಿನ್ನೆ ಹುಟ್ಟಿದವರಂತಿದ್ದೇವೆ. ನಮಗೇನೂ ಗೊತ್ತಿಲ್ಲ. ಭೂಮಿಯ ಮೇಲಿನ ನಮ್ಮ ದಿನಗಳು ನೆರಳಿನಂತೆ ಕ್ಷಣಿಕವಷ್ಟೇ.


ದೇವರ ದೃಷ್ಟಿಯಲ್ಲಿ ಚಂದ್ರನು ಸಹ ಪ್ರಕಾಶವಾಗಿಲ್ಲ; ನಕ್ಷತ್ರಗಳು ಸಹ ಪರಿಶುದ್ಧವಲ್ಲ.


ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು