Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:10 - ಪರಿಶುದ್ದ ಬೈಬಲ್‌

10 ಮನುಷ್ಯನಾದರೋ ಸತ್ತು ಕೊನೆಗೊಳ್ಳುವನು. ಪ್ರಾಣ ಹೋದಾಗ ಇಲ್ಲವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮನುಷ್ಯನಾದರೋ ಸತ್ತು ಬೋರಲುಬೀಳುವನು, ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮನುಜನೋ ಬಿದ್ದಿರುತ್ತಾನೆ ಸತ್ತು ಕೊನೆಯುಸಿರೆಳೆದಾಗ ಎಲ್ಲವು ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮನುಷ್ಯನಾದರೋ ಸತ್ತು ಬೋರಲ ಬೀಳುವನು, ಪ್ರಾಣಹೋಗಲು ಅವನು ಎಲ್ಲಿಯೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಮನುಷ್ಯನು ಸತ್ತು ಬಿದ್ದಿರುತ್ತಾನೆ; ಅವನು ಕೊನೆಯುಸಿರೆಳೆದಾಗ ಅವನ ಅಂತ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:10
20 ತಿಳಿವುಗಳ ಹೋಲಿಕೆ  

ನನ್ನ ಚರ್ಮವು ನಾಶವಾದ ಮೇಲೆಯೂ ನಾನು ಈ ದೇಹದಲ್ಲಿ ದೇವರನ್ನು ನೋಡುವೆನು.


ಸತ್ತ ಮನುಷ್ಯನು ಮಲಗಿಕೊಂಡೇ ಇರುವನು. ಅವನು ಮತ್ತೆ ಮೇಲೇಳುವುದಿಲ್ಲ. ಆಕಾಶವು ಅಳಿದುಹೋಗುವವರೆಗೆ ಅವನು ನಿದ್ರೆಯಿಂದ ಎಬ್ಬಿಸಲ್ಪಡುವುದಿಲ್ಲ.


ಯಾಕೋಬನು ತನ್ನ ಗಂಡುಮಕ್ಕಳೊಂದಿಗೆ ಮಾತನಾಡಿದ ಮೇಲೆ ತನ್ನ ಹಾಸಿಗೆಯ ಮೇಲೆ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟನು.


ತಕ್ಷಣವೇ ಸಫೈರಳು ಅವನ ಪಾದಗಳ ಮುಂದೆ ಬಿದ್ದು ಸತ್ತುಹೋದಳು. ಆ ಯೌವನಸ್ಥರು ಒಳಗೆ ಬಂದು ನೋಡಿದಾಗ ಆಕೆ ಸತ್ತುಹೋಗಿದ್ದಳು. ಅವರು ಆಕೆಯನ್ನು ಹೊತ್ತುಕೊಂಡು ಹೋಗಿ, ಆಕೆಯ ಗಂಡನ ಪಕ್ಕದಲ್ಲಿ ಹೂಳಿಟ್ಟರು.


ಬಳಿಕ ಯೇಸು ಮತ್ತೆ ಗಟ್ಟಿಯಾದ ಧ್ವನಿಯಲ್ಲಿ ಕೂಗಿ ಪ್ರಾಣಬಿಟ್ಟನು.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


ಆದರೆ ದುಷ್ಟರು ಸಹಾಯಕ್ಕಾಗಿ ಎದುರುನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.”


ದೇವರೇ, ನಾನು ಜನಿಸಲು ನೀನೇಕೆ ಅವಕಾಶ ಕೊಟ್ಟೆ? ಯಾರೂ ನನ್ನನ್ನು ನೋಡುವುದಕ್ಕಿಂತ ಮೊದಲೇ ನಾನು ಸತ್ತುಹೋಗಬೇಕಿತ್ತು.


ನಾನು ಹುಟ್ಟಿದಾಗಲೇ ಯಾಕೆ ಸಾಯಲಿಲ್ಲ? ತಾಯಿಯ ಗರ್ಭದಿಂದ ಬರುತ್ತಿರುವಾಗಲೇ ನಾನೇಕೆ ಸಾಯಲಿಲ್ಲ?


ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ.


ನಾನು ಹುಟ್ಟಿದಾಗಲೇ ಸತ್ತುಹೋಗಿದ್ದರೆ, ಸಮಾಧಾನದಿಂದ ನಿದ್ರೆಮಾಡುತ್ತಿದ್ದೆನು.


ದೇವರು ನಿಮ್ಮನ್ನು ಸೂಕ್ಷ್ಮವಾಗಿ ಪರಿಶೋಧಿಸಿದರೆ ನೀವು ನೀತಿವಂತರಾಗಿ ಕಂಡುಬರುವಿರಾ? ಜನರಿಗೆ ಮೋಸ ಮಾಡುವಂತೆ ದೇವರಿಗೂ ಮೋಸ ಮಾಡಬಹುದೆಂದು ಯೋಚಿಸಿಕೊಂಡಿದ್ದೀರಾ?


ಅದು ನೀರಿನಿಂದ ಮತ್ತೆ ಹೊಸದಾಗಿ ಬೆಳೆಯುವುದು; ಎಳೆ ಗಿಡದಂತೆ ಕವಲೊಡೆಯುವುದು.


ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”


ಆದರೆ ಅವನು ತನ್ನ ಮಲದ ಹಾಗೆ ನಿತ್ಯನಾಶವಾಗುವನು. ಅವನನ್ನು ಬಲ್ಲವರು, ‘ಅವನೆಲ್ಲಿ?’ ಎಂದು ಕೇಳುವರು.


ಮನುಷ್ಯರ ಮತ್ತು ಪ್ರಾಣಿಗಳ ದೇಹಗಳೆಲ್ಲ ಒಂದೇ ಸ್ಥಳಕ್ಕೆ ಹೋಗುತ್ತವೆ. ಮನುಷ್ಯರು ಮಣ್ಣಿನಿಂದ ಬಂದರು. ಕೊನೆಗೆ ಅವರು ಮಣ್ಣಿಗೇ ಹೋಗುವರು. ಪ್ರಾಣಿಗಳು ಮಣ್ಣಿನಿಂದ ಬಂದವು; ಕೊನೆಗೆ ಅವು ಮಣ್ಣಿಗೆ ಹೋಗುತ್ತವೆ.


ಮನುಷ್ಯನ ಆತ್ಮಕ್ಕೆ ಏನು ಸಂಭವಿಸುವುದೋ ಯಾರಿಗೆ ಗೊತ್ತು? ಮನುಷ್ಯನ ಆತ್ಮವು ದೇವರ ಬಳಿಗೆ ಮೇಲಕ್ಕೆ ಹೋಗುವುದೋ ಪ್ರಾಣಿಯ ಆತ್ಮವು ಭೂಮಿಯೊಳಗೆ ಇಳಿಯುವುದೋ ಯಾರಿಗೆ ಗೊತ್ತು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು