Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:14 - ಪರಿಶುದ್ದ ಬೈಬಲ್‌

14 ಸತ್ತ ಮನುಷ್ಯನು ಮತ್ತೆ ಬದುಕುವನೇ? ಬದುಕುವುದಾಗಿದ್ದರೆ, ನನಗೆ ಬಿಡುಗಡೆಯಾಗುವ ತನಕ ನನ್ನ ಎಲ್ಲಾ ಕಷ್ಟದ ದಿನಗಳಲ್ಲಿಯೂ ಕಾದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಬ್ಬ ಮನುಷ್ಯನು ಸತ್ತು ಪುನಃ ಬದುಕಾನೇ? ಹಾಗಾಗುವದಾದರೆ ನನಗೆ ಬಿಡುಗಡೆಯಾಗುವವರೆಗೆ ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಒಬ್ಬ ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ಆದರೂ ನನಗೆ ನೇಮಕ ಮಾಡಿದ ಪರಿಶ್ರಮದ ದಿನವೆಲ್ಲಾ, ನನಗೆ ಬಿಡುಗಡೆಯಾಗುವವರೆಗೆ ನಾನು ಕಾದುಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:14
24 ತಿಳಿವುಗಳ ಹೋಲಿಕೆ  

ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾನೆ ಎಂಬುದು ನಂಬತಕ್ಕದ್ದಲ್ಲವೆಂದು ನೀವು ಭಾವಿಸಿಕೊಂಡಿರುವುದೇಕೆ?


“ಭೂಲೋಕದಲ್ಲಿ ಮನುಷ್ಯನಿಗೆ ಬಹು ಪ್ರಯಾಸದ ಕೆಲಸವಿದೆ. ಅವನ ಜೀವನವು ಕೂಲಿ ಕೆಲಸದವನ ಜೀವನದಂತಿದೆ.


ಸಮುದ್ರವು ತನ್ನಲ್ಲಿ ಸತ್ತಿದ್ದ ಜನರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತನ್ನಲ್ಲಿದ್ದ ಸತ್ತ ಜನರನ್ನು ಒಪ್ಪಿಸಿದವು. ಪ್ರತಿಯೊಬ್ಬ ವ್ಯಕ್ತಿಗೂ ಅವನ ಕಾರ್ಯಗಳಿಗನುಸಾರವಾಗಿ ತೀರ್ಪು ನೀಡಲಾಯಿತು.


ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! ಬಲವಾಗಿಯೂ ಧೈರ್ಯವಾಗಿಯೂ ಇರಿ! ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!


ದೇವರು ನನ್ನನ್ನು ಕೊಂದರೂ ಆತನಲ್ಲಿಯೇ ಭರವಸವಿಟ್ಟಿರುವೆನು. ನನ್ನ ನಡತೆಯ ಕುರಿತು ಆತನ ಮುಂದೆ ವಾದಿಸುವೆನು.


ಆ ಮೇಲೆ ಯೋಬನು ನೂರನಲವತ್ತು ವರ್ಷಗಳ ಕಾಲ ಬದುಕಿದ್ದನು. ಅವನು ತನ್ನ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಮರಿಮಕ್ಕಳನ್ನೂ ಮರಿಮೊಮ್ಮಕ್ಕಳನ್ನೂ ಮರಿಮೊಮ್ಮಕ್ಕಳಿಗೆ ಹುಟ್ಟಿದ ಮಕ್ಕಳನ್ನೂ ಕಣ್ಣಾರೆಕಂಡನು.


ಮನುಷ್ಯನ ದಿನಗಳು ಇಷ್ಟೇ ಎಂದು ನಿರ್ಣಯವಾಗಿದೆ; ಅವನ ತಿಂಗಳುಗಳನ್ನು ನೀನು ನಿರ್ಣಯಿಸಿರುವೆ. ಅವನ ಆಯುಷ್ಯಕ್ಕೆ ದಾಟಲಾರದ ಮೇರೆಯನ್ನು ಹಾಕಿರುವೆ.


“ನಿನ್ನ ಕೋಪವು ಇಳಿಯುವ ತನಕ ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟಿದ್ದು, ನೀನು ಗೊತ್ತುಪಡಿಸಿದ ಸಮಯದಲ್ಲಿ ನನ್ನನ್ನು ಜ್ಞಾಪಿಸಿಕೊಂಡಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು.


ದೇವರೇ, ನೀನು ನನ್ನನ್ನು ಕರೆದರೆ, ಉತ್ತರ ಕೊಡುವೆನು. ಆಗ ನಿನ್ನ ಸೃಷ್ಟಿಯಾದ ನನ್ನನ್ನು ನೀನು ಇಷ್ಟಪಡುವೆ.


ಆದರೆ ಬರ್ಜಿಲ್ಲೈಯನು ದಾವೀದನಿಗೆ, “ನನಗೆ ಎಷ್ಟು ವಯಸ್ಸಾಗಿದೆಯೆಂಬುದು ನಿನಗೆ ತಿಳಿದಿಲ್ಲವೇ? ನಾನು ನಿನ್ನೊಂದಿಗೆ ಜೆರುಸಲೇಮಿಗೆ ಬರಬಹುದೇ?


ಆದರೆ ಅವನು ತನ್ನ ಮಲದ ಹಾಗೆ ನಿತ್ಯನಾಶವಾಗುವನು. ಅವನನ್ನು ಬಲ್ಲವರು, ‘ಅವನೆಲ್ಲಿ?’ ಎಂದು ಕೇಳುವರು.


ಮನುಷ್ಯರ ಮತ್ತು ಪ್ರಾಣಿಗಳ ದೇಹಗಳೆಲ್ಲ ಒಂದೇ ಸ್ಥಳಕ್ಕೆ ಹೋಗುತ್ತವೆ. ಮನುಷ್ಯರು ಮಣ್ಣಿನಿಂದ ಬಂದರು. ಕೊನೆಗೆ ಅವರು ಮಣ್ಣಿಗೇ ಹೋಗುವರು. ಪ್ರಾಣಿಗಳು ಮಣ್ಣಿನಿಂದ ಬಂದವು; ಕೊನೆಗೆ ಅವು ಮಣ್ಣಿಗೆ ಹೋಗುತ್ತವೆ.


ಆ ಒಡಂಬಡಿಕೆಯು ಹೀಗಿತ್ತು: ನನ್ನ ದೇವರಾದ ಯೆಹೋವನ ಸಹಾಯಕ್ಕಾಗಿ ನಾನು ಕಾಯುತ್ತಿರುವೆನು. ಯಾಕೋಬನ ಕುಟುಂಬದ ಬಗ್ಗೆ ಯೆಹೋವನು ನಾಚಿಕೊಂಡಿದ್ದಾನೆ. ಅವರ ಕಡೆ ನೋಡಲು ಆತನು ನಿರಾಕರಿಸುತ್ತಾನೆ. ಆದರೆ ನಾನು ಯೆಹೋವನನ್ನು ನಿರೀಕ್ಷಿಸುವೆನು. ಆತನು ನನ್ನನ್ನು ರಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು