Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:21 - ಪರಿಶುದ್ದ ಬೈಬಲ್‌

21 ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಭಯಹುಟ್ಟಿಸುವ ಅಪಾಯಗಳ ಸಪ್ಪಳ ಅವನ ಕಿವಿಯಲ್ಲಿ ಸೂರೆಗಾರನ ಧಾಳಿಯ ದಿಗಿಲು ಅವನು ಸುಖವಿರುವಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:21
25 ತಿಳಿವುಗಳ ಹೋಲಿಕೆ  

ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ.


“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.


ಅವರಲ್ಲಿ ಕೆಲವರು ಮಾಡಿದಂತೆ ಗುಣುಗುಟ್ಟಬೇಡಿ. ಆ ಜನರು ಸಂಹಾರಕ ದೂತನಿಂದ ಕೊಲ್ಲಲ್ಪಟ್ಟರು.


ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.


ದುಷ್ಟರು ಹುಲ್ಲಿನಂತೆಯೂ ಕೆಡುಕರು ಹೂವಿನಂತೆಯೂ ಬದುಕಿ ಸಾಯುವರು. ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.


ಆಪತ್ತುಗಳು ಇದ್ದಕ್ಕಿದ್ದಂತೆ ಬರುವ ಪ್ರವಾಹದಂತೆ ಅವನನ್ನು ಆವರಿಸಿಕೊಳ್ಳುತ್ತವೆ. ಬಿರುಗಾಳಿಯು ಅವನನ್ನು ರಾತ್ರಿಯಲ್ಲಿ ಹೊತ್ತುಕೊಂಡು ಹೋಗುವುದು.


ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,


ಚಿಂತೆಸಂಕಟಗಳು ಅವನನ್ನು ಭಯಗೊಳಿಸುತ್ತವೆ. ಅವನನ್ನು ನಾಶಮಾಡಲು ಸಿದ್ಧನಾಗಿರುವ ರಾಜನಂತೆ ಅವು ಅವನ ಮೇಲೆ ಆಕ್ರಮಣ ಮಾಡುತ್ತವೆ.


ದುಷ್ಟನನ್ನು ಅವನ ಸುರಕ್ಷಿತವಾದ ಮನೆಯಿಂದ ಹೊರಗೆ ಹಾಕಲಾಗುವುದು. ಅವನು ಮರಣವೆಂಬ ಅಪಾಯಗಳ ರಾಜನ ಕಡೆಗೆ ಮುನ್ನಡೆಯುತ್ತಾ ಹೋಗುವನು.


ಅವನು ತಿಂದ ಮೇಲೆ ಏನೂ ಉಳಿದುರುವುದಿಲ್ಲ. ಅವನ ಅಭಿವೃದ್ಧಿಯು ನಿಂತುಹೋಗುವುದು.


ಆದಕಾರಣ ನಿನ್ನ ಸುತ್ತಲೆಲ್ಲಾ ಉರುಲುಗಳಿವೆ; ಫಕ್ಕನೆ ಬರುವ ವಿಪತ್ತು ನಿನ್ನನ್ನು ಭಯಗೊಳಿಸುವುದು.


ಆ ದುಷ್ಟರಿಗೆ ಕತ್ತಲೆಯು ಮುಂಜಾನೆಯಂತಿರುವುದು. ಕಾರ್ಗತ್ತಲೆಯ ಭೀಕರತೆಗಳು ಅವರ ಸ್ನೇಹಿತರಾಗಿವೆ.


ಕೆಡುಕನಿಗೆ ಅವನು ಭಯಪಡುವುದೇ ಸಂಭವಿಸುವುದು. ಒಳ್ಳೆಯವನಾದರೋ ತನಗೆ ಬೇಕಾದದ್ದನ್ನೆಲ್ಲ ಪಡೆದುಕೊಳ್ಳುವನು.


ಎಸ್ತೇರಳು ಉತ್ತರಿಸುತ್ತಾ, “ನಮ್ಮನ್ನು ದ್ವೇಷಿಸುವ ಮನುಷ್ಯನು ಈ ಕೆಟ್ಟ ಹಾಮಾನನೇ” ಎಂದು ಹೇಳಿದಳು. ಆಗ ಹಾಮಾನನು ಭಯದಿಂದ ನಡುಗಿದನು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು