Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:24 - ಪರಿಶುದ್ದ ಬೈಬಲ್‌

24 ಚಿಂತೆಸಂಕಟಗಳು ಅವನನ್ನು ಭಯಗೊಳಿಸುತ್ತವೆ. ಅವನನ್ನು ನಾಶಮಾಡಲು ಸಿದ್ಧನಾಗಿರುವ ರಾಜನಂತೆ ಅವು ಅವನ ಮೇಲೆ ಆಕ್ರಮಣ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸಂಕಟ - ಪೇಚಾಟ ಅವನನ್ನು ಕಾಡುತ್ತಿರುತ್ತವೆ ಯುದ್ಧಸನ್ನದ್ಧ ರಾಜರಂತೆ ಅವನಿಗೆ ಸೋಲನು ತರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸಂಕಟವೂ ಪೇಚಾಟವೂ ಯುದ್ಧ ಸನ್ನದ್ಧರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇಕ್ಕಟ್ಟೂ, ಸಂಕಟವೂ ಅವನನ್ನು ಹೆದರಿಸಿ, ಆಕ್ರಮಣ ಮಾಡಲು ಸಿದ್ಧನಾದ ರಾಜನಂತೆ ತೊಂದರೆಗಳು ಅವನನ್ನು ಆವರಿಸುತ್ತವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:24
15 ತಿಳಿವುಗಳ ಹೋಲಿಕೆ  

ಕೆಟ್ಟದ್ದನ್ನು ನಡೆಸುವ ಪ್ರತಿಯೊಬ್ಬ ವ್ಯಕ್ತಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಕಷ್ಟಸಂಕಟಗಳನ್ನು ಕೊಡುತ್ತಾನೆ.


“ನಾನು ಅವರನ್ನು ಆ ಜನರಿಂದ ಪ್ರತ್ಯೇಕಿಸಿದ್ದೇನೆ; ನಾನೇ ಅವರಿಗೆ ಆಜ್ಞಾಪಿಸುವೆನು. ನಾನು ಕೋಪಗೊಂಡಿರುವುದರಿಂದ ಆ ಜನರನ್ನು ಶಿಕ್ಷಿಸಲು ನನ್ನ ಉತ್ತಮವಾದ ಜನರನ್ನು ಒಟ್ಟಾಗಿ ಸೇರಿಸಿದ್ದೇನೆ. ಉತ್ಸಾಹಶಾಲಿಗಳಾದ ನನ್ನ ಜನರ ಬಗ್ಗೆ ನಾನು ಹೆಮ್ಮೆಪಡುತ್ತೇನೆ.


ಇವು ನಿನ್ನನ್ನು ಬೇಗನೆ ಬಡವನನ್ನಾಗಿ ಮಾಡಿ ಬರಿದು ಮಾಡುತ್ತದೆ; ಇದ್ದಕ್ಕಿದ್ದಂತೆ ಬಂದು ಎಲ್ಲವನ್ನು ದೋಚಿಕೊಂಡು ಹೋಗುವ ಕಳ್ಳನಂತಿವೆ.


ಆದರೆ ಅವನು ನಿದ್ರಿಸುತ್ತಲೇ ಇರುವನು; ಬಡವನಾಗುತ್ತಲೇ ಹೋಗುವನು. ಅವನ ಸ್ಥಿತಿಯು ದರೋಡೆಕೋರರು ಬಂದು ಇದ್ದದ್ದನ್ನೆಲ್ಲಾ ದೋಚಿಕೊಂಡು ಹೋದಂತಾಗಿರುವುದು.


ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ.


ಕಷ್ಟಸಂಕಟಗಳು ನನಗೆ ಬಂದಿದ್ದವು. ನಿನ್ನ ಆಜ್ಞೆಗಳು ನನಗೆ ಆನಂದಕರವಾಗಿವೆ.


ದುಷ್ಟನು ತನ್ನ ಜೀವಮಾನವೆಲ್ಲಾ ಯಾತನೆಯನ್ನು ಅನುಭವಿಸುವನು. ಕ್ರೂರಿಯು ತನಗೆ ನೇಮಕಗೊಂಡಿರುವ ವರ್ಷಗಳಲ್ಲೆಲ್ಲಾ ಕಷ್ಟಪಡುವನು.


ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣ ಮಾಡುವನು.


ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ.


ಯಾಕೆಂದರೆ ದುಷ್ಟನು ದೇವರಿಗೆ ವಿರುದ್ಧವಾಗಿ ತನ್ನ ಕೈಯನ್ನು ಝಳಪಿಸುತ್ತಾನೆ. ದುಷ್ಟನು ಸರ್ವಶಕ್ತನಾದ ದೇವರ ವಿರುದ್ಧವಾಗಿ ಮಹಾಶೂರನಂತೆ ಆಕ್ರಮಣ ಮಾಡುವನು.


ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.


ದೇವರ ಕೋಪವು ನನಗೆ ವಿರೋಧವಾಗಿ ಉರಿಯುತ್ತಿದೆ. ಆತನು ನನ್ನನ್ನು ತನ್ನ ಶತ್ರುವೆಂದು ಪರಿಗಣಿಸಿದ್ದಾನೆ.


ನನ್ನ ಮೇಲೆ ಆಕ್ರಮಣಮಾಡಲು ದೇವರು ತನ್ನ ಸೈನ್ಯವನ್ನು ಕಳುಹಿಸಿದ್ದಾನೆ. ಅವರು ನನಗೆ ವಿರುದ್ಧವಾಗಿ ದಿಬ್ಬಹಾಕಿದ್ದಾರೆ. ಅವರು ನನ್ನ ಗುಡಾರದ ಸುತ್ತಲೂ ಪಾಳೆಯ ಮಾಡಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು