Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:5 - ಪರಿಶುದ್ದ ಬೈಬಲ್‌

5 ನಿನ್ನ ಪಾಪವೇ ನಿನ್ನ ಮಾತುಗಳಿಗೆ ಪ್ರೇರಕವಾಗಿವೆ. ನೀನು ಮೋಸಕರವಾದ ಮಾತುಗಳನ್ನು ಬಳಸುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಪಾಪವೆ ನಿನಗೆ ಮಾತನು ಕಲಿಸಿಕೊಟ್ಟಿದೆ ಕಪಟಿಗಳಾಡುವ ನುಡಿಯನೆ ನೀನು ಆರಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಪಾಪವೇ ನಿನ್ನ ಬಾಯಿಗೆ [ಮಾತುಗಳನ್ನು] ಕಲಿಸಿಕೊಡುತ್ತದೆ, ಯುಕ್ತಿವಂತರ ಭಾಷೆಯನ್ನು ಆರಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ನಿನ್ನ ಪಾಪವೇ ನಿನ್ನ ಬಾಯಿಯನ್ನು ಪ್ರೇರೇಪಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆಯ್ದುಕೊಳ್ಳುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:5
19 ತಿಳಿವುಗಳ ಹೋಲಿಕೆ  

ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. ಅವರ ಬಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ.


ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.


ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು.


ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ. ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ. ಅವರ ಮಾತುಗಳು ವಿಷಬಾಣಗಳಂತಿವೆ.


ದೇವರು ಜ್ಞಾನಿಗಳನ್ನು ಅವರ ತಂತ್ರಗಳಲ್ಲೇ ಹಿಡಿದುಕೊಳ್ಳುವನು; ಮೋಸಗಾರರ ಆಲೋಚನೆಗಳನ್ನು ವಿಫಲಗೊಳಿಸುವನು.


ಕಳ್ಳರ ಗುಡಾರಗಳಿಗೆ ತೊಂದರೆಯಿಲ್ಲ; ತಮ್ಮ ದೇವರುಗಳನ್ನು ಕೈಗಳಲ್ಲಿ ಎತ್ತಿಕೊಂಡು ಹೋಗುತ್ತಾ ದೇವರನ್ನು ರೇಗಿಸುವವರು ಸಮಾಧಾನದಿಂದಿದ್ದಾರೆ.


ದೇವರು ಯುಕ್ತಿವಂತರ ಕುತಂತ್ರಗಳನ್ನು ವಿಫಲಗೊಳಿಸಿ ಭಂಗಪಡಿಸುವನು.


ಆತನು ನಿನಗೆ ಜ್ಞಾನದ ರಹಸ್ಯಗಳನ್ನು ತಿಳಿಸಿ ಜ್ಞಾನಕ್ಕೆ ಎರಡು ಮುಖಗಳಿವೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು. ದೇವರು ನಿನಗೆ ತಕ್ಕ ದಂಡನೆಯನ್ನು ವಿಧಿಸಿಲ್ಲವೆಂಬುದು ನಿನಗೆ ತಿಳಿದಿರಲಿ.


ನೀನು ನಿನ್ನ ಮಾರ್ಗದಲ್ಲಿ ಹೋಗುವುದಾದರೆ, ದೇವರಲ್ಲಿ ಯಾರೂ ಭಯಭಕ್ತಿಯಿಡುವುದಿಲ್ಲ; ಆತನಿಗೆ ಯಾರೂ ಪ್ರಾರ್ಥಿಸುವುದಿಲ್ಲ.


ನಿನ್ನ ಪಾಪವು ಅತಿಯಾಯಿತು! ಯೋಬನೇ, ನೀನು ಪಾಪಮಾಡುವುದನ್ನು ನಿಲ್ಲಿಸಲೇ ಇಲ್ಲ.


ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ.


ಅಲ್ಲಿ ಯೌವನಸ್ಥನಾದ ಎಲೀಹು ಸಹ ಇದ್ದನು. ಎಲೀಹು ಬರಕೇಲನ ಮಗನು. ಬರಕೇಲನು ಬೂಜ್ ಕುಲದವನು. ಎಲೀಹು, ರಾಮ್ ಸಂತಾನಕ್ಕೆ ಸೇರಿದವನು. ಎಲೀಹುವಿಗೆ ಯೋಬನ ಮೇಲೆ ಬಹು ಕೋಪಬಂದಿತು. ಯಾಕೆಂದರೆ ಯೋಬನು ತಾನು ದೇವರಿಗಿಂತಲೂ ನೀತಿವಂತನೆಂದು ಪ್ರತಿಪಾದಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು