Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:4 - ಪರಿಶುದ್ದ ಬೈಬಲ್‌

4 ನೀನು ನನ್ನ ಸ್ನೇಹಿತರ ಮನಸ್ಸುಗಳನ್ನು ಮುಚ್ಚಿಬಿಟ್ಟಿರುವೆ; ಅವರು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಅವರಿಗೆ ಜಯವಾಗದಂತೆ ನೋಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ವಿವೇಕವು ಪ್ರವೇಶಿಸದಂತೆ; ಅವರ ಮನಸ್ಸನ್ನು, ಹೃದಯವನ್ನು ಮುಚ್ಚಿರುವೆ, ಹೀಗೆ ಅವರು ಜಯಶೀಲರಾಗದಂತೆ ತಡೆಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜ್ಞಾನ ಪ್ರವೇಶಿಸದಂತೆ ನೀ ಅವರ ಮನಸ್ಸನು ಮುಚ್ಚಿರುವೆ ಹೀಗೆ ಅವರು ಜಯಶೀಲರಾಗದಂತೆ ತಡೆದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ವಿವೇಕವು ಪ್ರವೇಶಿಸದಂತೆ ಅವರ ಹೃದಯವನ್ನು ಮುಚ್ಚಿಬಿಟ್ಟಿದ್ದೀಯಲ್ಲಾ. ಇಂಥವರನ್ನು ಉನ್ನತಸ್ಥಿತಿಗೆ ತಂದೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತಿಳುವಳಿಕೆ ಪ್ರವೇಶಿಸದಂತೆ ನೀವು ನನ್ನ ಸ್ನೇಹಿತರ ಮನಸ್ಸನ್ನು ಮುಚ್ಚಿರುವಿರಿ; ಆದ್ದರಿಂದ ನೀವು ಅವರನ್ನು ಜಯಿಸುವುದಕ್ಕೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:4
10 ತಿಳಿವುಗಳ ಹೋಲಿಕೆ  

ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.


ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.


ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.


ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.


ಪವಿತ್ರ ಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ಜನರಿಗೆ ಅರ್ಥವಾಗದಂತೆ ದೇವರು ಅವರನ್ನು ಮಂಕುಗೊಳಿಸಿದನು.” “ಅವರು ಇಂದಿನವರೆಗೂ ಕಣ್ಣಿದ್ದರೂ ಕಾಣದಂತೆ ಕಿವಿಯಿದ್ದರೂ ಕೇಳದಂತೆ ದೇವರು ಅವುಗಳನ್ನು ಮುಚ್ಚಿಬಿಟ್ಟನು.”


ಯೆಹೋವನು ಆ ನಾಯಕರನ್ನು ಗಲಿಬಿಲಿಪಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ.


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.


ದೇವರು ವಿಶ್ವಾಸನೀಯವಾದ ಆಲೋಚನಾಗಾರರನ್ನು ಮೌನಗೊಳಿಸುವನು; ಹಿರಿಯರ ವಿವೇಕವನ್ನು ತೆಗೆದುಹಾಕುವನು.


‘ಮನುಷ್ಯನು ತನ್ನ ಸ್ನೇಹಿತರಿಗೆ ಸಹಾಯಮಾಡಲು ತನ್ನ ಮಕ್ಕಳನ್ನೇ ಅಲಕ್ಷಿಸುತ್ತಾನೆ’ ಎಂಬ ಗಾದೆಯಿದೆ. ಆದರೆ ಈಗ ನನ್ನ ಸ್ನೇಹಿತರು ನನಗೆ ವಿರೋಧವಾಗಿ ಎದ್ದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು