Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:21 - ಪರಿಶುದ್ದ ಬೈಬಲ್‌

21 “ನನ್ನ ಸ್ನೇಹಿತರೇ, ಕರುಣಿಸಿರಿ, ನೀವಾದರೂ ನನ್ನನ್ನು ಕರುಣಿಸಿರಿ. ದೇವರ ಹಸ್ತವು ನನ್ನನ್ನು ಹೊಡೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕರುಣೆ ತೋರಿ ಗೆಳೆಯರೇ, ಕರುಣೆ ತೋರಿ ನನಗೆ! ಏಕೆಂದರೆ ದೇವರ ಕೈ ನನ್ನನು ದಂಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ವಿುತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಕನಿಕರಿಸಿರಿ, ನನ್ನ ಸ್ನೇಹಿತರೇ, ನನ್ನನ್ನು ಕನಿಕರಿಸಿರಿ, ಏಕೆಂದರೆ ದೇವರ ಕೈ ನನ್ನನ್ನು ದಂಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:21
13 ತಿಳಿವುಗಳ ಹೋಲಿಕೆ  

ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತರಕೊಟ್ಟನು.


ನಿನ್ನಿಂದ ನನಗೆ ನೋವಾಗಿದೆ. ನಿನ್ನ ಬಾಣಗಳು ನನಗೆ ನಾಟಿಕೊಂಡಿವೆ.


ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.


ಒಂದು ಅಂಗಕ್ಕೆ ನೋವಾದರೆ, ಉಳಿದೆಲ್ಲ ಅಂಗಗಳು ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ಸನ್ಮಾನ ದೊರೆತರೆ, ಉಳಿದೆಲ್ಲ ಅಂಗಗಳು ಅದರ ಸನ್ಮಾನದಲ್ಲಿ ಪಾಲುಗಾರರಾಗುತ್ತವೆ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ. ದುಃಖಪಡುವವರೊಂದಿಗೆ ದುಃಖಪಡಿರಿ.


“ಕಷ್ಟದಲ್ಲಿರುವವನಿಗೆ ಅವನ ಸ್ನೇಹಿತನು ದಯೆತೋರಬೇಕು; ಒಂದುವೇಳೆ ಅವನು ಸರ್ವಶಕ್ತನಾದ ದೇವರಿಗೆ ವಿಮುಖನಾಗಿದ್ದರೂ ಅವನ ಸ್ನೇಹಿತನು ನಂಬಿಗಸ್ತನಾಗಿರಬೇಕು.


ಸರ್ವಶಕ್ತನಾದ ದೇವರ ಬಾಣಗಳು ನನಗೆ ನಾಟಿಕೊಂಡಿವೆ. ನನ್ನ ಪ್ರಾಣವು ಅವುಗಳ ವಿಷವನ್ನು ಕುಡಿಯುತ್ತಿದೆ. ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.


ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.


ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು.


ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು.


ನೀವು ಅವರನ್ನು ಮದುವೆಯಾಗಬೇಕಾದರೆ ಅವರು ಬೆಳೆದು ಪ್ರಾಯಕ್ಕೆ ಬರುವವರೆಗೆ ಕಾದುಕೊಂಡಿರಬೇಕಾಗುತ್ತದೆ. ನೀವು ಗಂಡಂದಿರ ಸಲುವಾಗಿ ಅಷ್ಟುಕಾಲ ಕಾದುಕೊಂಡಿರುವುದು ನನಗಿಷ್ಟವಿಲ್ಲ. ಅದು ನನಗೆ ದುಃಖವನ್ನು ಉಂಟುಮಾಡುತ್ತದೆ. ನಿಮ್ಮ ಬಗ್ಗೆ ನಾನು ತುಂಬಾ ದುಃಖಪಡುತ್ತೇನೆ, ಯೆಹೋವನ ಹಸ್ತವು ನನಗೆ ವಿರುದ್ಧವಾಗಿದೆ” ಎಂದು ಹೇಳಿದಳು.


ಈಗಲಾದರೋ ನಿನಗೆ ಕೇಡು ಬಂದಿದೆ; ಆದ್ದರಿಂದ ನೀನು ನಿರಾಶನಾಗಿರುವೆ. ಕೇಡು ನಿನಗೆ ಬಡಿದಿರುವುದರಿಂದ ಭ್ರಮೆಗೊಂಡಿರುವೆ.


ಯೆಹೋವನು ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದನು. ಆತನು ಇಡೀ ದಿನವೆಲ್ಲಾ ಮತ್ತೆಮತ್ತೆ ಹಾಗೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು