Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:5 - ಪರಿಶುದ್ದ ಬೈಬಲ್‌

5 ನಿಮ್ಮನ್ನು ನನಗಿಂತಲೂ ಉತ್ತಮರೆಂದು ತೋರಿಸಿಕೊಳ್ಳಬೇಕೆಂದಿದ್ದೀರಿ; ನನ್ನ ತೊಂದರೆಗಳೇ ನನ್ನನ್ನು ದೋಷಿಯೆಂದು ನಿರೂಪಿಸುತ್ತವೆಯೆಂದು ಭಾವಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ವಿರುದ್ಧವಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಂಡು ನನಗಾದ ಅವಮಾನವನ್ನು ನ್ಯಾಯವೆಂದು ಸ್ಥಾಪಿಸುವುದಕ್ಕೆ ನಿಜವಾಗಿ ಇಷ್ಟಪಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನಗಿಂತ ನೀವೇ ಮೇಲೆಂದು ಭಾವಿಸುತ್ತೀರೋ? ನನ್ನ ದೀನ ಸ್ಥಿತಿಗೆ ನನ್ನ ದೋಷವೇ ಕಾರಣವೆನ್ನುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನಗೆ ವಿರುದ್ಧವಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಂಡು ನನಗಾದ ಅವಮಾನವನ್ನು ನ್ಯಾಯವೆಂದು ಸ್ಥಾಪಿಸುವದಕ್ಕೆ ನಿಜವಾಗಿ ಇಷ್ಟಪಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ನನಗಿಂತ ಉತ್ತಮರು ಎಂದು ಭಾವಿಸುತ್ತಿದ್ದೀರಿ; ನನಗಾದ ಹೀನಸ್ಥಿತಿಯನ್ನು ನನಗೆ ವಿರೋಧವಾಗಿ ಉಪಯೋಗಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:5
16 ತಿಳಿವುಗಳ ಹೋಲಿಕೆ  

ನನಗೆ ಅವಮಾನ ಮಾಡುವವನು ವೈರಿಯಾಗಿದ್ದಿದ್ದರೆ ತಾಳಿಕೊಳ್ಳಬಹುದಿತ್ತು. ನನ್ನ ಮೇಲೆ ಆಕ್ರಮಣ ಮಾಡುವವರು ನನ್ನ ಶತ್ರುವಾಗಿದ್ದಿದ್ದರೆ ಅಡಗಿಕೊಳ್ಳಬಹುದಿತ್ತು.


ನಾನು ಏನೇ ಹೇಳಿದರೂ ವೈರಿಗಳು ನನ್ನನ್ನು ನೋಡಿ ನಗುವರು. ನನ್ನ ಕಾಯಿಲೆಯು ಪಾಪದ ಫಲವೆಂದು ಹೇಳುವರು.


ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.


ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.


ಯೇಸುವಿನ ಶಿಷ್ಯರು ಆತನಿಗೆ, “ಗುರುವೇ, ಈ ಮನುಷ್ಯನು ಹುಟ್ಟು ಕುರುಡನಾಗಲು ಯಾರ ಪಾಪ ಕಾರಣ? ಅವನ ಸ್ವಂತ ಪಾಪವೇ ಅಥವಾ ಅವನ ತಂದೆತಾಯಿಗಳ ಪಾಪವೇ?” ಎಂದು ಕೇಳಿದರು.


ಎಲಿಜಬೇತಳು, “ನೋಡಿ, ಪ್ರಭುವು ನನಗೋಸ್ಕರ ಎಂಥಾ ಕಾರ್ಯಮಾಡಿದ್ದಾನೆ! ನನ್ನ ಜನರ ನಡುವೆ ನನಗಿದ್ದ ಅವಮಾನವನ್ನು ಪ್ರಭುವು ತೊಲಗಿಸಿದ್ದಾನೆ” ಎಂದು ಹೇಳಿದಳು.


ಯೆಹೋವನು ಯೆಹೂದದ ಜನರನ್ನು ಮೊದಲು ರಕ್ಷಿಸುವನು. ಆಗ ಜೆರುಸಲೇಮಿನ ನಿವಾಸಿಗಳು ತಮ್ಮನ್ನು ಹೆಚ್ಚಿಸಿಕೊಳ್ಳುವದಿಲ್ಲ. ಜೆರುಸಲೇಮಿನಲ್ಲಿ ವಾಸಿಸುವ ದಾವೀದನ ಸಂತತಿಯವರೂ ಇತರರೂ ತಾವು ಯೆಹೂದ ಪ್ರಾಂತ್ಯದಲ್ಲಿ ವಾಸಿಸುವ ಜನರಿಗಿಂತ ಉತ್ತಮರು ಎಂದು ಹೆಚ್ಚಳಪಡುವದಿಲ್ಲ.


ಸರ್ವಶಕ್ತನಾದ ಯೆಹೋವನ ಜನರನ್ನು ಮೋವಾಬ್ಯರು ಮತ್ತು ಅಮ್ಮೋನ್ಯರು ಕ್ರೂರವಾಗಿ ಕಂಡು ಅವರನ್ನು ಪರಿಹಾಸ್ಯಮಾಡಿದ್ದರಿಂದಲೂ ಈ ಸಂಗತಿಗಳು ಅವರಲ್ಲಿ ನೆರವೇರುವವು.


ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.


ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.


ನನಗೆ ಕೇಡುಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ, ನೀನು ನನ್ನನ್ನು ಸ್ವೀಕರಿಸಿಕೊಂಡಿರುವೆ ಎಂದು ತಿಳಿದುಕೊಳ್ಳುವೆನು.


ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.


ಪೆನಿನ್ನಳು ಯಾವಾಗಲೂ ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಹನ್ನಳು ಬಂಜೆಯಾಗಿದ್ದುದೇ ಅದಕ್ಕೆ ಕಾರಣ.


ಒಂದುವೇಳೆ ನಾನು ಪಾಪಮಾಡಿದ್ದರೂ ಆ ತಪ್ಪು ನನ್ನದೇ.


ಆದರೆ ನನಗೆ ಕೇಡುಮಾಡುತ್ತಿರುವವನು ನನ್ನ ಸಂಗಡಿಗನಾದ ನೀನೇ; ನನ್ನ ಸಹೋದ್ಯೋಗಿಯೂ ನನ್ನ ಸ್ನೇಹಿತನೂ ಆದ ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು