Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:7 - ಪರಿಶುದ್ದ ಬೈಬಲ್‌

7 ‘ನನಗೆ ಹಿಂಸೆಯಾಗುತ್ತಿದೆ’ ಎಂದು ಕೂಗಿಕೊಂಡರೂ ನನಗೆ ಯಾರೂ ಉತ್ತರ ಕೊಡುತ್ತಿಲ್ಲ. ನಾನು ಸಹಾಯಕ್ಕಾಗಿ ಗಟ್ಟಿಯಾಗಿ ಕೂಗಿಕೊಂಡರೂ ನ್ಯಾಯ ದೊರೆಯುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ, ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ, ನ್ಯಾಯವು ನೆರವೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ‘ಇದೋ ಹಿಂಸಾಚಾರ’ ಎಂದು ನಾನು ಕೂಗಿಕೊಂಡರೂ ಕೇಳುವವರಿಲ್ಲ ನಾನು ಮೊರೆಯಿಟ್ಟರೂ ನನಗೆ ನ್ಯಾಯ ದೊರಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ ನ್ಯಾಯವು ನೆರವೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಹಿಂಸೆ,’ ಎಂದು ನಾನು ಕೂಗಿಕೊಂಡರೂ ನನಗೆ ಉತ್ತರ ಕೊಡುವವರಿಲ್ಲ; ಗಟ್ಟಿಯಾಗಿ ಮೊರೆಯಿಟ್ಟರೂ ನ್ಯಾಯ ದೊರಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:7
20 ತಿಳಿವುಗಳ ಹೋಲಿಕೆ  

ನಾನು ಸಹಾಯಕ್ಕಾಗಿ ಅರಚಿಕೊಳ್ಳುವಾಗಲೂ ಕೂಗಿಕೊಳ್ಳುವಾಗಲೂ ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರ ಕೊಡುವುದಿಲ್ಲ.


“ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವೆಯಾ?


ಯೋಬನು ಹೇಳುವುದೇನೆಂದರೆ, ‘ನಾನು ನಿರಪರಾಧಿ. ದೇವರು ನನಗೆ ನ್ಯಾಯದೊರಕಿಸುತ್ತಿಲ್ಲ.


“ದೇವರೇ, ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಡುವೆನು, ಆದರೆ ನೀನು ಉತ್ತರಿಸುವುದಿಲ್ಲ. ನಾನು ಎದ್ದುನಿಂತು ಪ್ರಾರ್ಥಿಸಿದರೂ ನೀನು ನನಗೆ ಗಮನ ಕೊಡುವುದಿಲ್ಲ.


“ಆದರೆ, ನಿಮ್ಮ ಆಲೋಚನೆಗಳನ್ನು ಬಲ್ಲೆ, ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ನಾನು ಬಲ್ಲೆ.


ನಾನು ಮಾತನಾಡಿದಾಗಲೆಲ್ಲ ಕೂಗಿಕೂಗಿ ಹೇಳುತ್ತೇನೆ. ನಾನು ಯಾವಾಗಲೂ ಹಿಂಸೆ ಮತ್ತು ವಿನಾಶದ ಬಗ್ಗೆ ಕೂಗಿಕೊಳ್ಳುತ್ತೇನೆ. ಯೆಹೋವನಿಂದ ಬಂದ ಸಂದೇಶದ ಬಗ್ಗೆ ಜನರಿಗೆ ಹೇಳುತ್ತೇನೆ. ಆದರೆ ಜನರು ಯಾವಾಗಲೂ ನನಗೆ ಅವಮಾನ ಮಾಡುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ.


ನನ್ನ ದೇವರೇ, ಹಗಲಿನಲ್ಲಿ ನಾನು ನಿನ್ನನ್ನು ಕೂಗಿಕೊಂಡೆನು, ಆದರೂ ನೀನು ನನಗೆ ಉತ್ತರಿಸಲಿಲ್ಲ. ರಾತ್ರಿಯಲ್ಲೂ ನಿನ್ನನ್ನು ಕೂಗಿಕೊಳ್ಳುತ್ತಲೇ ಇದ್ದೆನು.


ಒಬ್ಬನು ತನ್ನ ಸ್ನೇಹಿತನಿಗಾಗಿ ಬೇಡಿಕೊಳ್ಳುವಂತೆ ನನ್ನ ಕಣ್ಣೀರು ನನ್ನ ಪರವಾಗಿ ದೇವರ ಮುಂದೆ ವಾದ ಮಾಡುತ್ತದೆ.


ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ? ನಿನ್ನ ಸೃಷ್ಟಿಯ ಬಗ್ಗೆ ನೀನು ಚಿಂತಿಸದಂತೆ ತೋರುತ್ತಿದೆ. ದುಷ್ಟರ ಆಲೋಚನೆಗಳಲ್ಲಿ ನಿನಗೆ ಸಂತೋಷವೇ?


ದೇವರು ನನ್ನಂಥ ಮನುಷ್ಯನಲ್ಲ; ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು.


ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಇನ್ಯಾರು ಮಾಡಿದರು?


“ಆದರೆ ಈಗಾಗಲೇ ನಾಶವಾಗಿ ಸಹಾಯಕ್ಕಾಗಿ ಕೂಗಿಕೊಳ್ಳುವವನಿಗೆ ಯಾರೂ ಕೇಡುಮಾಡುವುದಿಲ್ಲ.


ನಾನು ದುಃಖಿತನೂ ಕುಂದಿಹೋದವನೂ ಆಗಿರುವೆ; ನನಗೆ ಉಪಶಮನವೇ ಇಲ್ಲ. ನಾನು ಸಭೆಯಲ್ಲಿ ನಿಂತುಕೊಂಡು ಸಹಾಯಕ್ಕಾಗಿ ಕೂಗುತ್ತಿರುವೆ.


ದೇವರೇ, ಪರಿಶುದ್ಧನು ನೀನೇ. ನೀನು ರಾಜನಂತೆ ಕುಳಿತಿರುವೆ. ಇಸ್ರೇಲರ ಸ್ತುತಿಗಳೇ ನಿನ್ನ ಸಿಂಹಾಸನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು