Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:11 - ಪರಿಶುದ್ದ ಬೈಬಲ್‌

11 ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತೇಮಾನ್ಯನಾದ ಎಲೀಫಜನು ಶೂಹ್ಯನಾದ ಬಿಲ್ದದನು ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ - ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತಯಿಸೋಣ ಬನ್ನಿರಿ ಎಂದು ಗೊತ್ತುಮಾಡಿಕೊಂಡು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೋಬನ ಮೂವರು ಸ್ನೇಹಿತರು, ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಅವನಿಗೆ ಬಂದ ಈ ಎಲ್ಲಾ ಕಷ್ಟನಷ್ಟವನ್ನು ಕುರಿತು ಕೇಳಿ, ಯೋಬನಿಗೆ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸುವುದಕ್ಕೆ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡು, ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:11
34 ತಿಳಿವುಗಳ ಹೋಲಿಕೆ  

ಸಂತೋಷಪಡುವವರ ಸಂಗಡ ಸಂತೋಷಪಡಿರಿ. ದುಃಖಪಡುವವರೊಂದಿಗೆ ದುಃಖಪಡಿರಿ.


ಯೋಬನ ಸಹೋದರಸಹೋದರಿಯರೂ ಅವನ ಪರಿಚಯಸ್ಥರೂ ಅವನ ಮನೆಗೆ ಬಂದರು; ಅವನೊಂದಿಗೆ ಊಟ ಮಾಡಿದರು; ಯೆಹೋವನು ಅವನಿಗೆ ಬಹಳ ಕಷ್ಟವನ್ನು ಬರಮಾಡಿದ್ದರಿಂದ ಅವರು ಮರುಕದಿಂದ ಅವನನ್ನು ಸಂತೈಸಿದರು. ಪ್ರತಿಯೊಬ್ಬರು ಯೋಬನಿಗೆ ಒಂದು ಬೆಳ್ಳಿಯ ನಾಣ್ಯವನ್ನೂ ಒಂದು ಚಿನ್ನದ ಉಂಗುರವನ್ನೂ ಕೊಟ್ಟರು.


ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?


ಸ್ನೇಹಿತನು ಯಾವಾಗಲೂ ಪ್ರೀತಿಸುವನು. ಕಷ್ಟದ ಸಮಯಗಳಲ್ಲಿ ಸಹೋದರನು ಸಹಾಯಮಾಡುವನು.


“ಕಷ್ಟದಲ್ಲಿರುವವನಿಗೆ ಅವನ ಸ್ನೇಹಿತನು ದಯೆತೋರಬೇಕು; ಒಂದುವೇಳೆ ಅವನು ಸರ್ವಶಕ್ತನಾದ ದೇವರಿಗೆ ವಿಮುಖನಾಗಿದ್ದರೂ ಅವನ ಸ್ನೇಹಿತನು ನಂಬಿಗಸ್ತನಾಗಿರಬೇಕು.


ಒಂದು ಅಂಗಕ್ಕೆ ನೋವಾದರೆ, ಉಳಿದೆಲ್ಲ ಅಂಗಗಳು ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ಸನ್ಮಾನ ದೊರೆತರೆ, ಉಳಿದೆಲ್ಲ ಅಂಗಗಳು ಅದರ ಸನ್ಮಾನದಲ್ಲಿ ಪಾಲುಗಾರರಾಗುತ್ತವೆ.


ಆಕೆ ಅವನಿಗೆ; ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬವರನ್ನು ಹೆತ್ತಳು.


ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು.


“ನನ್ನ ಸ್ನೇಹಿತರೇ, ಕರುಣಿಸಿರಿ, ನೀವಾದರೂ ನನ್ನನ್ನು ಕರುಣಿಸಿರಿ. ದೇವರ ಹಸ್ತವು ನನ್ನನ್ನು ಹೊಡೆದಿದೆ.


“ನಾನು ಈ ಸಂಗತಿಗಳನ್ನು ಮೊದಲೇ ಕೇಳಿದ್ದೇನೆ, ನೀವೆಲ್ಲರೂ ಕೀಟಲೆ ಮಾಡುವವರೇ ಹೊರತು ಸಂತೈಸುವವರಲ್ಲ.


ತೇಮದ ವರ್ತಕರ ತಂಡಗಳು ನೀರಿಗಾಗಿ ನೋಡುವರು. ಶೆಬದ ಪ್ರಯಾಣಿಕರು ನಿರೀಕ್ಷೆಯಿಂದ ನೋಡುವರು.


ಕೆಟೂರಳು ಅಬ್ರಹಾಮನ ದಾಸಿಯಾಗಿದ್ದಳು. ಆಕೆಗೆ ಅಬ್ರಹಾಮನಲ್ಲಿ ಹುಟ್ಟಿದ ಗಂಡುಮಕ್ಕಳು ಯಾರೆಂದರೆ: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ. ಯೊಕ್ಷಾನನ ಮಕ್ಕಳು ಯಾರೆಂದರೆ: ಶೆಬ ಮತ್ತು ದೆದಾನ್.


ಯಾಕೋಬನ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು.


ಏಸಾವನ ವಂಶಸ್ಥರ ಕುಲಪತಿಗಳು: ಏಸಾವನ ಮೊದಲನೆ ಮಗನಾದ ಎಲೀಫಜ. ಎಲೀಫಜನಿಂದ ಬಂದವರು: ತೇಮಾನ್, ಓಮಾರ್, ಚೆಫೋ, ಕೆನೆಜ್,


ಎಲೀಫಜನಿಗೆ ಐದು ಮಂದಿ ಗಂಡುಮಕ್ಕಳಿದ್ದರು: ತೇಮಾನ್, ಓಮಾರ್, ಚೆಪೋ, ಗತಾಮ್ ಮತ್ತು ಕೆನಜ್.


ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.


ಜೆರುಸಲೇಮಿಗೆ ತೊಂದರೆಗಳು ಎರಡು ಗುಂಪುಗಳಾಗಿ ಬಂದವು: ಲೂಟಿ ಮತ್ತು ಕೊರತೆ; ಕ್ಷಾಮ ಮತ್ತು ಖಡ್ಗ. ನೀನು ಸಂಕಟ ಅನುಭವಿಸುವಾಗ ಯಾರೂ ನಿನಗೆ ಸಹಾಯ ಮಾಡಲಿಲ್ಲ. ಯಾರೂ ನಿನಗೆ ಕರುಣೆ ತೋರಿಸಲಿಲ್ಲ.


ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.


ಒಬ್ಬನಿಗೆ ಬಹಳ ಮಂದಿ ಸ್ನೇಹಿತರಿದ್ದರೆ, ಅದು ಅವನನ್ನು ನಾಶಮಾಡಬಹುದು. ಆದರೆ ನಿಜವಾದ ಸ್ನೇಹಿತನು ಸಹೋದರನಿಗಿಂತಲೂ ನಂಬಿಗಸ್ತನಾಗಿರುವನು.


ಯೆಹೋವನು ಯೋಬನೊಂದಿಗೆ ಮಾತಾಡಿದ ಮೇಲೆ, ಎಲೀಫಜನೊಂದಿಗೆ ಮಾತಾಡಿದನು. ಎಲೀಫಜನು ತೇಮಾನ್ ಪಟ್ಟಣದವನಾಗಿದ್ದನು. ಯೆಹೋವನು ಎಲೀಫಜನಿಗೆ, “ನಾನು ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ. ಯಾಕೆಂದರೆ ನೀನು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ. ಆದರೆ ಯೋಬನು ನನ್ನ ಬಗ್ಗೆ ಹೇಳಿದವುಗಳು ಸತ್ಯವಾಗಿವೆ. ಯೋಬನು ನನ್ನ ಸೇವಕ.


ನನ್ನನ್ನು ನೋಡಿ ನನ್ನ ಆಪ್ತಸ್ನೇಹಿತರೂ ಅಸಹ್ಯಪಡುತ್ತಾರೆ. ನಾನು ಯಾರನ್ನು ಪ್ರೀತಿಸಿದೆನೋ ಅವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.


ಬಳಿಕ ಶೂಹ ದೇಶದ ಬಿಲ್ದದನು ಹೀಗೆ ಉತ್ತರಕೊಟ್ಟನು:


ನನ್ನ ಕಣ್ಣೀರೇ ನನ್ನ ಪ್ರತಿನಿಧಿಯಾಗಿದೆ. ನನ್ನ ಕಣ್ಣು ದೇವರ ಉತ್ತರಕ್ಕಾಗಿ ಆಕಾಂಕ್ಷೆಯಿಂದ ಎದುರುನೋಡುತ್ತಿದೆ.


ಬಳಿಕ ತೇಮಾನಿನ ಎಲೀಫಜನು ಯೋಬನಿಗೆ ಉತ್ತರಿಸಿದನು:


ನೀವಾದರೋ ನಿಮ್ಮ ಆ ಜ್ಞಾನವನ್ನು ಸುಳ್ಳುಗಳಿಂದ ಮುಚ್ಚಲು ಪ್ರಯತ್ನಿಸುತ್ತಿದ್ದೀರಿ. ನೀವೆಲ್ಲರೂ ಗುಣಪಡಿಸಲಾಗದ ವೈದ್ಯರುಗಳಂತಿದ್ದೀರಿ.


ಬಳಿಕ ಶೂಹ ದೇಶದ ಬಿಲ್ದದನು ಉತ್ತರಿಸಿದನು:


ಯೋಬಾಬ ಅರಸನು ಸತ್ತಾಗ ತೇಮಾನೀಯರ ದೇಶದವನಾದ ಹೂಷಾಮನು ಅರಸನಾದನು.


ಎಜೆರನು ಮತ್ತು ಎಲ್ಲಾದನ ತಂದೆ ಎಫ್ರಾಯೀಮನು. ತನ್ನ ಮಕ್ಕಳು ಸತ್ತದ್ದಕ್ಕಾಗಿ ಬಹಳ ದಿನಗಳ ತನಕ ಅವನು ಗೋಳಾಡಿದನು. ಅವನ ಕುಟುಂಬದವರೆಲ್ಲಾ ಬಂದು ಅವನನ್ನು ಸಂತೈಸಿದರು.


ಆಗ ತೇಮಾನ್ ಪಟ್ಟಣದ ಎಲೀಫಜನೂ ಶೂಹ ದೇಶದ ಬಿಲ್ದದನೂ ನಾಮಾಥ್ಯ ದೇಶದ ಚೋಫರನೂ ಯೆಹೋವನಿಗೆ ವಿಧೇಯರಾದರು. ಯೆಹೋವನು ಯೋಬನ ಪ್ರಾರ್ಥನೆಗೆ ಉತ್ತರವನ್ನು ನೀಡಿದನು.


ತೇಮಾನನೇ, ನಿನ್ನ ಯುದ್ಧವೀರರು ಭಯಪಡುವರು. ಏಸಾವಿನ ಪರ್ವತದಲ್ಲಿರುವ ಪ್ರತಿಯೊಬ್ಬನು ನಾಶವಾಗುವನು. ಎಷ್ಟೋ ಮಂದಿ ಹತರಾಗುವರು.


ಯೋಬಾಬನು ಸತ್ತಮೇಲೆ ಹುಷಾಮನು ಆಳಿದನು. ಹುಷಾಮನು ತೇಮಾನೀಯರ ದೇಶದವನು.


ಗೆದೇರೋತ್, ಬೇತ್‌ದಾಗೋನ್, ನಾಮಾ ಮತ್ತು ಮಕ್ಕೆದಾ. ಒಟ್ಟಿನಲ್ಲಿ ಹದಿನಾರು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ಆಗ ತೇಮಾನ್ಯನಾದ ಎಲೀಫಜನು ಹೀಗೆ ಉತ್ತರಿಸಿದನು:


ಆಗ ನಾಮಾಥ ದೇಶದ ಚೋಫರನು ಯೋಬನಿಗೆ ಉತ್ತರಿಸಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು