Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:12 - ಪರಿಶುದ್ದ ಬೈಬಲ್‌

12 ಆದರೆ ಆ ಮೂವರು ಸ್ನೇಹಿತರು ಬಹು ದೂರದಿಂದ ಯೋಬನನ್ನು ಕಂಡಾಗ ಅವನ ಗುರುತೇ ಹಿಡಿಯಲಾರದೆ ಗಟ್ಟಿಯಾಗಿ ಅಳತೊಡಗಿದರು; ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಗಳ ಮೇಲೆ ಸುರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೂರದಿಂದ ನೋಡಿದಾಗ ಆತನ ಗುರುತುಹಚ್ಚಲು ಕೂಡ ಅವರಿಂದಾ ಆಗಲಿಲ್ಲ. ಎಂದೇ ಅವರು ಗಟ್ಟಿಯಾಗಿ ಅತ್ತರು. ದುಃಖ ತಾಳಲಾರದೆ ತಂತಮ್ಮ ಮೇಲಂಗಿಯನ್ನು ಸೀಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ಯೋಬನನ್ನು ದೂರದಿಂದ ನೋಡಿದಾಗ, ಅವನನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಅವರು ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು. ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಧೂಳನ್ನು ತಮ್ಮ ತಲೆಯ ಮೇಲೆ ಸುರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:12
17 ತಿಳಿವುಗಳ ಹೋಲಿಕೆ  

ನಿನಗೋಸ್ಕರ ಅವರು ದುಃಖಿಸುತ್ತಾ ಅಳುವರು; ತಲೆಯ ಮೇಲೆ ಧೂಳನ್ನು ತೂರಿಕೊಂಡು ಬೂದಿರಾಶಿಯ ಮೇಲೆ ಹೊರಳಾಡುವರು.


ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರೇಲರು ತಿರಿಗಿ ಸೇರಿಬಂದು ಒಂದು ದಿನದ ಉಪವಾಸ ಮಾಡಿದರು. ಶೋಕಬಟ್ಟೆಯನ್ನು ಧರಿಸಿ, ತಲೆಗೆ ಬೂದಿಯನ್ನು ಹಾಕಿ ತಮ್ಮತಮ್ಮ ದುಃಖವನ್ನು ವ್ಯಕ್ತಪಡಿಸಿದರು.


ಆಗ ಯೋಬನು ತನ್ನ ಮೇಲಂಗಿಯನ್ನು ಹರಿದುಕೊಂಡು, ತಲೆಯನ್ನು ಬೋಳಿಸಿಕೊಂಡು, ನೆಲದ ಮೇಲೆ ಮೊಣಕಾಲೂರಿ ದೇವರಿಗೆ ಸ್ತೋತ್ರಸಲ್ಲಿಸುತ್ತಾ,


ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.


ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು: ‘ಅಯ್ಯೋ! ಅಯ್ಯೋ! ಈ ಮಹಾನಗರಿಗೆ ಎಂಥಾ ಗತಿಯಾಯಿತು! ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದ್ದ ಜನರೆಲ್ಲರೂ ಅವಳ ಸಂಪತ್ತಿನಿಂದ ಶ್ರೀಮಂತರಾದರು! ಆದರೆ ಅವಳು ಒಂದೇ ಗಳಿಗೆಯಲ್ಲಿ ನಾಶವಾಗಿಬಿಟ್ಟಳು!


ನನ್ನ ಸಂಬಂಧಿಕರು ನನ್ನನ್ನು ತೊರೆದುಬಿಟ್ಟರು. ನನ್ನ ಸ್ನೇಹಿತರು ನನ್ನನ್ನು ಮರೆತುಬಿಟ್ಟರು.


ನಡೆದ ಎಲ್ಲಾ ಸಂಗತಿಗಳನ್ನು ಮೊರ್ದೆಕೈ ಕೇಳಿಕೊಂಡನು. ಯೆಹೂದ್ಯರನ್ನೆಲ್ಲಾ ಕೊಲ್ಲಲು ರಾಜಾಜ್ಞೆ ಹೊರಟಿದೆ ಎಂದು ಕೇಳಿದಾಗ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ಶೋಕದ ಬಟ್ಟೆಗಳನ್ನು ಧರಿಸಿ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡನು. ಆಮೇಲೆ ಗಟ್ಟಿಯಾಗಿ ಅಳುತ್ತಾ ನಗರ ಬೀದಿಗಳಲ್ಲಿ ನಡೆದನು.


ಯೋನಾದಾಬನು ಈ ಮಾತುಗಳನ್ನು ಹೇಳಿ ಮುಗಿಸುವಷ್ಟರಲ್ಲಿ ರಾಜನ ಗಂಡುಮಕ್ಕಳೆಲ್ಲರೂ ಬಂದರು. ಅವರು ಗಟ್ಟಿಯಾಗಿ ಅಳುತ್ತಿದ್ದರು. ದಾವೀದನು ಮತ್ತು ಅವನ ಸೇವಕರೆಲ್ಲ ಅಳರಾಂಭಿಸಿದರು. ಅವರೆಲ್ಲರೂ ಮತ್ತಷ್ಟು ಜೋರಾಗಿ ಗೋಳಾಡಿದರು.


ದಾವೀದ ಮತ್ತು ಅವನ ಸೈನ್ಯದ ಇತರರು ಶಕ್ತಿಮೀರಿ ಜೋರಾಗಿ ಅತ್ತರು.


ಸೌಲನು ವಾಸವಾಗಿದ್ದ ಗಿಬೆಯಕ್ಕೆ ಸಂದೇಶಕರು ಬಂದು ಜನರಿಗೆ ಸುದ್ದಿಯನ್ನು ತಿಳಿಸಿದರು. ಜನರು ಗಟ್ಟಿಯಾಗಿ ಅತ್ತರು.


ದೂತನು ಜನರಿಗೆ ಯೆಹೋವನ ಈ ಸಂದೇಶವನ್ನು ಕೊಟ್ಟ ಮೇಲೆ ಜನರು ಗಟ್ಟಿಯಾಗಿ ಅತ್ತರು.


ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ತುಂಬ ಕೋಪಗೊಂಡನು; ವ್ಯಥೆಪಟ್ಟನು; ಗೋಳಾಡಿದನು. ಅವನು ತನ್ನ ತಂದೆಗೆ, “ಹಾಗಾದರೆ, ನನ್ನನ್ನೂ ಆಶೀರ್ವದಿಸಪ್ಪಾ” ಎಂದು ಹೇಳಿದನು.


ಆ ದಿನದಂದು ಬೆನ್ಯಾಮೀನ್ ಕುಲದ ಒಬ್ಬನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು.


ಇದನ್ನು ಕೇಳಿದೊಡನೆ ನನ್ನ ಮನಸ್ಸಿನ ದುಃಖವನ್ನು ತೋರಿಸುವಂತೆ ನನ್ನ ಬಟ್ಟೆಯನ್ನು ಹರಿದು ಹಾಕಿದೆನು. ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕೆದರಿಕೊಂಡು ದಿಗ್ಭ್ರಮೆಗೊಂಡವನಾಗಿಯೂ ಬೇಸರಗೊಂಡವನಾಗಿಯೂ ಕುಳಿತುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು