Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:2 - ಪರಿಶುದ್ದ ಬೈಬಲ್‌

2 ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಾ ಬಂದೆನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು, “ಎಲ್ಲಿಂದ ಬಂದೆ?” ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಎಲ್ಲಿಂದ ಬಂದೆ?” ಎಂದು ಸರ್ವೇಶ್ವರನು ಅವನನ್ನು ಕೇಳಿದರು. “ಭೂಲೋಕದಲ್ಲೆಲ್ಲಾ ಗಸ್ತು ತಿರುಗಿ ಬಂದಿದ್ದೇನೆ,” ಎಂದು ಅವನು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು - ಎಲ್ಲಿಂದ ಬಂದಿ ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ - ಭೂಲೋಕದಲ್ಲಿ ಸಂಚರಿಸುತ್ತಾ ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದರು. ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:2
7 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


ಯೆಹೋವನು ಸೈತಾನನಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಿದ್ದೆ” ಎಂದು ಉತ್ತರಕೊಟ್ಟನು.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


“ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.


ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು.


ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು.


ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು