Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:8 - ಪರಿಶುದ್ದ ಬೈಬಲ್‌

8 ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೋಬನು ತನ್ನ ಮೈಕಡಿತವನ್ನು ತಾಳಲಾಗದೆ ಬೋಕಿಯೊಂದರಿಂದ ಕೆರೆದುಕೊಳ್ಳುತ್ತಾ ಬೂದಿಗುಂಡಿಯಲ್ಲಿ ಕುಳಿತುಕೊಳ್ಳಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕೂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೋಬನು ಮುರಿದ ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:8
14 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”


ನಿನೆವೆಯ ಅರಸನು ಇದನ್ನು ಕೇಳಿ ತಾನು ಮಾಡಿದ ದುಷ್ಕೃತ್ಯಗಳಿಗಾಗಿ ಮನಮರುಗಿದನು. ತಾನು ಸಿಂಹಾಸನದಿಂದಿಳಿದು ರಾಜವಸ್ತ್ರವನ್ನು ತೆಗೆದಿಟ್ಟು ಶೋಕವಸ್ತ್ರವನ್ನು ಧರಿಸಿ ಬೂದಿಯ ಮೇಲೆ ಕುಳಿತುಕೊಂಡನು.


ನಿನಗೋಸ್ಕರ ಅವರು ದುಃಖಿಸುತ್ತಾ ಅಳುವರು; ತಲೆಯ ಮೇಲೆ ಧೂಳನ್ನು ತೂರಿಕೊಂಡು ಬೂದಿರಾಶಿಯ ಮೇಲೆ ಹೊರಳಾಡುವರು.


ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.


ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ನನಗೆ ಜ್ವರವಿದೆ, ನನ್ನ ಇಡೀ ದೇಹ ನೋಯುತ್ತಿದೆ.


ನಾನೊಂದು ಮೂರ್ಖ ಕೆಲಸವನ್ನು ಮಾಡಿದೆನು. ಈಗ ನನಗೆ ಕೀವು ಸೋರಿ ದುರ್ವಾಸನೆಯಿಂದಿರುವ ಹುಣ್ಣುಗಳಾಗಿವೆ.


ತಾಮಾರಳು ಬೂದಿಯನ್ನು ತೆಗೆದುಕೊಂಡು ತನ್ನ ತಲೆಯ ಮೇಲೆ ಸುರಿದುಕೊಂಡು ತನ್ನ ನಿಲುವಂಗಿಯನ್ನು ಹರಿದುಕೊಂಡಳು; ತನ್ನ ತಲೆಯ ಮೇಲೆ ಕೈಗಳನ್ನಿಟ್ಟುಕೊಂಡು ಗಟ್ಟಿಯಾಗಿ ಗೋಳಾಡಿದಳು.


ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.


ನಡೆದ ಎಲ್ಲಾ ಸಂಗತಿಗಳನ್ನು ಮೊರ್ದೆಕೈ ಕೇಳಿಕೊಂಡನು. ಯೆಹೂದ್ಯರನ್ನೆಲ್ಲಾ ಕೊಲ್ಲಲು ರಾಜಾಜ್ಞೆ ಹೊರಟಿದೆ ಎಂದು ಕೇಳಿದಾಗ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ಶೋಕದ ಬಟ್ಟೆಗಳನ್ನು ಧರಿಸಿ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡನು. ಆಮೇಲೆ ಗಟ್ಟಿಯಾಗಿ ಅಳುತ್ತಾ ನಗರ ಬೀದಿಗಳಲ್ಲಿ ನಡೆದನು.


ಪ್ರತಿಯೊಂದು ಸಂಸ್ಥಾನದಲ್ಲೂ ರಾಜನ ಆಜ್ಞೆ ಪ್ರಕಟಿಸಲ್ಪಟ್ಟಾಗ ಯೆಹೂದ್ಯರೊಳಗೆ ಕೂಗಾಟವೂ ದುಃಖವೂ ತುಂಬಿತು. ಉಪವಾಸ ಮಾಡುತ್ತಾ ಅವರು ಗಟ್ಟಿಯಾಗಿ ರೋಧಿಸಿದರು. ಎಷ್ಟೋ ಮಂದಿ ಯೆಹೂದ್ಯರು ಶೋಕವಸ್ತ್ರವನ್ನು ಧರಿಸಿ ತಲೆಗೆ ಬೂದಿ ಸುರಿದು ನೆಲದ ಮೇಲೆ ಬಿದ್ದುಕೊಂಡು ಗಟ್ಟಿಯಾಗಿ ಅತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು