Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:19 - ಪರಿಶುದ್ದ ಬೈಬಲ್‌

19 ಯಾಕೆಂದರೆ ದುಷ್ಟನು ಬಡವರನ್ನು ಕಡೆಗಣಿಸಿದ್ದಾನೆ; ಬೇರೊಬ್ಬನು ಕಟ್ಟಿದ ಮನೆಗಳನ್ನು ಕಿತ್ತುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಏಕೆಂದರೆ ಬಡವರನು ತುಳಿದು ತೊರೆದುಬಿಟ್ಟ ತಾನು ಕಟ್ಟದ ಮನೆಯನು ಕಿತ್ತುಕೊಂಡುಬಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ ಅವನು ಬಡವರನ್ನು ಜಜ್ಜಿ ಅವರನ್ನು ನಿರ್ಗತಿಕರನ್ನಾಗಿ ಮಾಡಿದನು; ತಾನು ನಿರ್ಮಿಸದ ಮನೆಗಳನ್ನು ವಶಪಡಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:19
28 ತಿಳಿವುಗಳ ಹೋಲಿಕೆ  

“ಹಿಂಸೆಗೂ ಅನ್ಯಾಯಕ್ಕೂ ಒಳಗಾಗಿರುವವರು ತಮ್ಮನ್ನು ಬಲಿಷ್ಠರಿಂದ ಬಿಡಿಸಬಲ್ಲ ಯಾರಿಗಾದರೂ ಮೊರೆಯಿಡುವರು.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.


ನನ್ನ ಜನರು ಸ್ತ್ರೀಯರ ಕೈಯಿಂದ ಅಂದವಾದ ಮನೆಗಳನ್ನು ಕಿತ್ತುಕೊಂಡಿದ್ದೀರಿ; ಅವರ ಚಿಕ್ಕಮಕ್ಕಳಿಂದ ನನ್ನ ಐಶ್ವರ್ಯವನ್ನು ನಿರಂತರಕ್ಕೂ ಕಿತ್ತುಕೊಂಡಿದ್ದೀರಿ.


ಅವರಿಗೆ ಹೊಲಗದ್ದೆಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಅವರಿಗೆ ಮನೆಮಠಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಒಬ್ಬನಿಗೆ ಮೋಸಮಾಡಿ ಅವನ ಮನೆಯನ್ನು ಕಿತ್ತುಕೊಳ್ಳುವರು. ಇನ್ನೊಬ್ಬನಿಗೆ ಮೋಸಮಾಡಿ ಅವನ ಹೊಲಗದ್ದೆಗಳನ್ನು ಕಿತ್ತುಕೊಳ್ಳುವರು.


“ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.


ಈ ಸಂಗತಿಗಳನ್ನು ಇಷ್ಟಪಡುವುದಿಲ್ಲ. ಯಾರೋ ಒಬ್ಬನು ಈ ಲೋಕದ ಕೈದಿಗಳನ್ನೆಲ್ಲಾ ತನ್ನ ಪಾದದ ಕೆಳಗೆ ಹಾಕಿ ತುಳಿಯುವುದನ್ನು ಆತನು ಇಷ್ಟಪಡುವುದಿಲ್ಲ.


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.


ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”


ಯೆಹೋವನೇ, ಅನಾಥರನ್ನೂ ಕುಗ್ಗಿಸಲ್ಪಟ್ಟವರನ್ನೂ ಸಂರಕ್ಷಿಸು. ಆಗ ಕೇವಲ ಮನುಷ್ಯರಿಂದ ಅವರಿಗೆ ಭಯವಾಗದು.


ಯೋಬನೇ, ನೀನು ನಿಷ್ಕಾರಣವಾಗಿ ನಿನ್ನ ಸಹೋದರರ ವಸ್ತುಗಳನ್ನು ಒತ್ತೆಯಿಟ್ಟುಕೊಂಡು ಸಾಲ ಕೊಟ್ಟಿರಬಹುದು. ಜನರ ಬಟ್ಟೆಗಳನ್ನು ತೆಗೆದುಕೊಂಡು ಅವರನ್ನು ಬೆತ್ತಲೆ ಮಾಡಿರಬಹುದು.


ಅವನ ಮನೆಯಲ್ಲಿ ಅವನದೇನೂ ಉಳಿದಿರುವುದಿಲ್ಲ. ಉರಿಯುವ ಗಂಧಕವು ಅವನ ಆಸ್ತಿಯಲ್ಲೆಲ್ಲಾ ಹರಡಿಕೊಂಡಿರುತ್ತದೆ.


ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”


“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


ಯೆಹೋವನ ಮಾತುಗಳು ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ.


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು