Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:2 - ಪರಿಶುದ್ದ ಬೈಬಲ್‌

2 “ಯೋಬನೇ, ನಿನ್ನ ಆಲೋಚನೆಗಳು ಗಲಿಬಿಲಿಗೊಂಡಿವೆ; ಆದ್ದರಿಂದ ನಾನು ನಿನಗೆ ಉತ್ತರ ಕೊಡಲೇಬೇಕು. ನನ್ನ ಆಲೋಚನೆಗಳನ್ನು ನಿನಗೆ ಬೇಗನೆ ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿನಗೆ ಉತ್ತರಕೊಡಲು ನಾನು ತವಕಪಡುತ್ತಿರುವೆ ನನ್ನ ನೊಂದ ಮನ ನನಗೆ ಪ್ರತ್ಯುತ್ತರ ಹೇಳಿಕೊಡುತ್ತದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಾನು ತುಂಬಾ ಕಳವಳಗೊಂಡದ್ದರಿಂದ, ನನ್ನ ಆಲೋಚನೆಗಳು ನನ್ನನ್ನು ಉತ್ತರಿಸಲು ಪ್ರೇರೇಪಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:2
15 ತಿಳಿವುಗಳ ಹೋಲಿಕೆ  

ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ.


ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.


ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.


ನಾನು ಯೆಹೂದ್ಯರ ಬಗ್ಗೆ ಹೀಗೆ ಹೇಳಬಲ್ಲೆನು: ಅವರು ದೇವರನ್ನು ಹಿಂಬಾಲಿಸಲು ನಿಜವಾಗಿಯೂ ಪ್ರಯತ್ನಿಸುತ್ತಾರೆ. ಆದರೆ ಅವರಿಗೆ ಸರಿಯಾದ ಮಾರ್ಗ ಗೊತ್ತಿಲ್ಲ.


ಆ ಹುಡುಗಿ ಬೇಗನೆ ರಾಜನ ಬಳಿಗೆ ಬಂದು, “ಸ್ನಾನಿಕ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ಈಗಲೇ ತರಿಸಿಕೊಡಿ, ಇದೇ ನನ್ನ ಬೇಡಿಕೆ” ಎಂದು ಹೇಳಿದಳು.


ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.


ಮುಂಗೋಪಿಯಾಗಿರಬೇಡ. ಯಾಕೆಂದರೆ ಕೋಪವು ಕೇವಲ ಮೂಢತನ.


ವಿವೇಚಿಸದೆ ಮಾತಾಡುವವನನ್ನು ನೀನು ಕಂಡಿರುವಿಯೋ? ಅವನಿಗಿಂತಲೂ ಮೂಢನಿಗೇ ಹೆಚ್ಚು ನಿರೀಕ್ಷೆಯಿದೆ.


ನಾನು ಭಯಗೊಂಡು, “ಎಲ್ಲಾ ಮನುಷ್ಯರು ಸುಳ್ಳುಗಾರರಾಗಿದ್ದಾರೆ!” ಎಂದು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.


ನಿನ್ನ ಉತ್ತರಗಳಿಂದ ನೀನು ನನಗೆ ಅವಮಾನ ಮಾಡಿರುವೆ! ಆದರೆ ನಾನು ಜ್ಞಾನಿಯಾಗಿದ್ದೇನೆ; ನಿನಗೆ ಹೇಗೆ ಉತ್ತರ ಕೊಡಬೇಕೆಂಬುದು ನನಗೆ ಗೊತ್ತಿದೆ.


ನಾನು ತಪ್ಪಿತಸ್ಥನೆಂದು ಯಾವನೂ ನಿರೂಪಿಸಲಾರನು. ನಿರೂಪಿಸಬಲ್ಲವನಿದ್ದರೆ ಬಾಯಿ ಮುಚ್ಚಿಕೊಳ್ಳುವೆನು.


“ಒಬ್ಬನು ನಿನ್ನೊಂದಿಗೆ ಮಾತಾಡತೊಡಗಿದರೆ ನಿನಗೆ ಬೇಸರವಾಗುವುದೇ? ಸುಮ್ಮನಿರಲು ನನಗಂತೂ ಸಾಧ್ಯವಿಲ್ಲ.


ಬಳಿಕ ನಾಮಾಥ ದೇಶದ ಚೋಫರನು ಉತ್ತರಕೊಟ್ಟನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು