Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:23 - ಪರಿಶುದ್ದ ಬೈಬಲ್‌

23 ದುಷ್ಟನು ತನ್ನ ಇಷ್ಟಾನುಸಾರ ತಿಂದಮೇಲೆ ದೇವರು ತನ್ನ ದಹಿಸುವ ಕೋಪವನ್ನು ತೋರಿ ಅವನ ಮೇಲೆ ದಂಡನೆಯ ಮಳೆ ಸುರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನ ಹೊಟ್ಟೆ ತುಂಬುವದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಹೊಟ್ಟೆ ತುಂಬುವಾಗ, ದೇವದಂಡನೆ ಅವನ ಮೇಲೆ ಬರುವುದು; ಹೌದು, ದೇವದಂಡನೆಯು ಅವನ ಮೇಲೆ ಸುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:23
12 ತಿಳಿವುಗಳ ಹೋಲಿಕೆ  

ಜನರು ಮಾಂಸವನ್ನು ಇನ್ನೂ ತಿನ್ನುತ್ತಿರುವಾಗಲೇ ಮತ್ತು ಲಾವಕ್ಕಿಗಳ ಸರಬರಾಜು ನಿಂತುಹೋಗುವುದಕ್ಕಿಂತ ಮೊದಲೇ ಯೆಹೋವನು ಬಹಳವಾಗಿ ಕೋಪಗೊಂಡು ಜನರ ಮಧ್ಯದಲ್ಲಿ ಭಯಂಕರವಾದ ಕಾಯಿಲೆಯನ್ನು ಉಂಟುಮಾಡಿದನು. ಜನರಲ್ಲಿ ಅನೇಕರು ಸತ್ತದ್ದರಿಂದ ಅವರನ್ನು ಅಲ್ಲೇ ಹೂಳಿಟ್ಟರು.


ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.


ನಾನು ಚಿಂತೆಯಿಂದಲೂ ಭಯದಿಂದಲೂ ನಡುಗುತ್ತಿದ್ದೇನೆ. ನನ್ನ ಆನಂದದ ರಾತ್ರಿಯು ಭಯಂಕರವಾಗಿದೆ.


ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.


ಆದ್ದರಿಂದ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದನು. ಕೂಡಲೇ ಯೆಹೋವನು, ಗುಡುಗು ಮಿಂಚುಗಳಿಂದ ಕೂಡಿದ ಆಲಿಕಲ್ಲಿನ ಮಳೆಯನ್ನು ಈಜಿಪ್ಟಿನಲ್ಲೆಲ್ಲಾ ಸುರಿಸಿದನು.


ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.


“ಇಸ್ರೇಲರಿಗೆ ಹೀಗೆ ಹೇಳು: ನಾಳೆಗಾಗಿ ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ನಾಳೆ ನೀವು ಮಾಂಸವನ್ನು ತಿನ್ನುವಿರಿ. ‘ನಮಗೆ ಮಾಂಸವನ್ನು ಕೊಡುವವರು ಯಾರು? ನಾವು ಈಜಿಪ್ಟಿನಲ್ಲಿ ಇದಕ್ಕಿಂತಲೂ ಚೆನ್ನಾಗಿದ್ದೆವಲ್ಲಾ’ ಎಂಬ ನಿಮ್ಮ ದೂರನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ಯೆಹೋವನು ನಿಮಗೆ ಮಾಂಸವನ್ನು ಕೊಡುವನು ಮತ್ತು ನೀವು ತಿನ್ನುವಿರಿ.


ಅವನು ಆ ಕೆಟ್ಟತನವನ್ನು ಪಟ್ಟಾಗಿ ಹಿಡಿದುಕೊಂಡು ಸಂತೋಷಪಡುವನು. ಅದನ್ನು ತನ್ನ ಬಾಯಿಯಲ್ಲಿ ಸಿಹಿತಿನಿಸಿನಂತೆ ಇಟ್ಟುಕೊಂಡಿರುವನು.


ಆದರೆ ಅದು ಅವನ ಹೊಟ್ಟೆಯಲ್ಲಿ ಹಾವಿನ ವಿಷದ ಹಾಗೆ ಕಹಿಯಾದ ವಿಷವಾಗುವುದು.


ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು