Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:27 - ಪರಿಶುದ್ದ ಬೈಬಲ್‌

27 ದುಷ್ಟನು ಅಪರಾಧಿಯೆಂದು ಪರಲೋಕವು ನಿರೂಪಿಸುತ್ತದೆ. ಭೂಮಿಯು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಕಾಶವು ಅವನ ಪಾಪವನ್ನು ಬಯಲುಪಡಿಸುವುದು. ಭೂಮಿಯು ಅವನ ವಿರುದ್ಧ ಸಾಕ್ಷಿಯಾಗಿ ಏಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಕಾಶವೇ ಅವನ ದೋಷವನು ಪ್ರಕಟಿಸುವುದು ಭೂಲೋಕವೇ ಅವನ ವಿರುದ್ಧ ಸಾಕ್ಷಿನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಕಾಶವು ಅವನ ಪಾಪವನ್ನು ಬೈಲುಪಡಿಸುವದು. ಭೂವಿುಯು ಅವನ ವಿರುದ್ಧಸಾಕ್ಷಿಯಾಗಿ ಏಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಕಾಶವು ಅವನ ಅಪರಾಧವನ್ನು ಪ್ರಕಟಿಸುವುದು; ಭೂಮಿಯು ಅವನಿಗೆ ವಿರೋಧವಾಗಿ ಏಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:27
10 ತಿಳಿವುಗಳ ಹೋಲಿಕೆ  

ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.


“ಭೂಮಿಯೇ, ನನಗಾಗಿರುವ ಕೆಡುಕುಗಳನ್ನು ಮರೆಮಾಡಬೇಡ. ನ್ಯಾಯಕ್ಕಾಗಿ ನಾನಿಡುವ ಮೊರೆ ನಿಂತುಹೋಗಲು ಅವಕಾಶ ಕೊಡಬೇಡ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.


ಜನರು ಅವನನ್ನು ಬೆಳಕಿನಿಂದ ತಳ್ಳಿಬಿಡುವರು; ಅವನನ್ನು ಕತ್ತಲೆಯೊಳಗೆ ನೂಕಿಬಿಡುವರು. ಅವರು ಅವನನ್ನು ಲೋಕದಿಂದಲೇ ಅಟ್ಟಿಬಿಡುವರು.


ಎಲ್ಲಾ ಕುಲಾಧಿಪತಿಗಳವರನ್ನು ಮತ್ತು ಗೋತ್ರಪ್ರಧಾನರನ್ನು ನನ್ನ ಬಳಿಗೆ ಕರೆದುತನ್ನಿರಿ; ಅವರಿಗೆ ನಾನಿದನ್ನು ತಿಳಿಸುವೆನು. ನಾನು ಆಕಾಶವನ್ನೂ ಭೂಮಿಯನ್ನೂ ಅದಕ್ಕೆ ಸಾಕ್ಷಿಯಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು